Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂದಿನ ಚುನಾವಣೆಯಲ್ಲಿ ಮೋದಿ ಮತ್ತು...

ಮುಂದಿನ ಚುನಾವಣೆಯಲ್ಲಿ ಮೋದಿ ಮತ್ತು ಬಿಜೆಪಿ ಕಪ್ಪು ಪಟ್ಟಿಗೆ: ಎಂ. ಕೂಸಪ್ಪ

ಎಸ್ ಡಿಪಿಐಯಿಂದ `ಆಕ್ರೋಶ್ ದಿವಸ್'

ವಾರ್ತಾಭಾರತಿವಾರ್ತಾಭಾರತಿ28 Nov 2016 3:21 PM IST
share
ಮುಂದಿನ ಚುನಾವಣೆಯಲ್ಲಿ ಮೋದಿ ಮತ್ತು ಬಿಜೆಪಿ ಕಪ್ಪು ಪಟ್ಟಿಗೆ: ಎಂ. ಕೂಸಪ್ಪ

ಪುತ್ತೂರು, ನ.28 : ಕಪ್ಪು ಹಣ ವಿಚಾರದಲ್ಲಿ ಬಡವರಿಗೆ ತೊಂದರೆ ನೀಡಿರುವ ಬಿಜೆಪಿ ಹಾಗೂ ಪ್ರಧಾನಿ ಮೋದಿಯವರನ್ನು ದೇಶದ ಜನತೆ ಮುಂದಿನ ಚುನಾವಣೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಿದ್ದಾರೆ ಎಂದು ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಎಂ.ಕೂಸಪ್ಪ ಹೇಳಿದರು. 

ಅವರು ನೋಟು ರದ್ದತಿಗೊಳಿಸಿದ ಮೋದಿ ಸರಕಾರದ ವಿರುದ್ದ ಸೋಮವಾರ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಎಸ್ ಡಿಪಿಐ ವತಿಯಿಂದ ನಡೆದ `ಆಕ್ರೋಶ್ ದಿವಸ್' ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ನೋಟು ನಿಷೇಧ ವಿಚಾರದಲ್ಲಿ ಕೇವಲ 5 ಲಕ್ಷ ಮಂದಿಯನ್ನು ಸಮೀಕ್ಷೆ ಮಾಡಿ ತಮಗೆ ಬೆಂಬಲ ಘೋಷಿಸಿದ್ದಾರೆ ಎನ್ನುತ್ತಿರುವ ಪ್ರಧಾನಿ ಅವರು ಉಳಿದ 27 ಕೋಟಿ ಜನರನ್ನು ಭಾರತೀಯರು ಅಲ್ಲ ಎಂದು ಭಾವಿಸಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು. ಬಡವರನ್ನು ಮೂರ್ಖರನ್ನಾಗಿಸಿ ಬ್ಯಾಂಕ್ ಬಾಗಿಲಿನಲ್ಲಿ ನಿಲ್ಲಿಸುವ ಮೊದಲು ನಿಜವಾದ ಕಪ್ಪು ಹಣವಂತರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೆ.ಎ ಸಿದ್ದಿಕ್ ಮಾತನಾಡಿ ನೋಟು ನಿಷೇಧದಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿತಗೊಂಡಿದ್ದು, ಬಡವರು ಹಾಗೂ ಸಣ್ಣ ಪುಟ್ಟ ವ್ಯಾಪಾರಿಗಳು ಕೆಲಸವಿಲ್ಲದೆ ಕಣ್ಣೀರು ಹಾಕುವ ಸ್ಥಿತಿ ಬಂದಿದ್ದು, ಶ್ರೀಮಂತರಿಗೆ ಅನುಕೂಲಕರವಾಗಿದೆ. ಶ್ರೀಮಂತರು ಕಪ್ಪು ಹಣವನ್ನು ನಗದು ರೂಪದಲ್ಲಿಡದೆ ಇತರ ರೂಪದಲ್ಲಿ ದಾಸ್ತಾನು ಮಾಡಿದ್ದಾರೆ. ಹಾಗಾಗಿ ನೋಟು ನಿಷೇಧದಿಂದ ಅವರ ಕಪ್ಪು ಹಣ ಹೊರಕ್ಕೆ ಬರುವುದೂ ಇಲ್ಲ, ಬಡ ಹಾಗೂ ಸಾಮಾನ್ಯ ವರ್ಗದ ಜನತೆಗೆ ಮಾತ್ರ ತೊಂದರೆಯಾಗಿದೆ ಎಂದ ಅವರು ಕೋಟ್ಯಾಂತರ ಕಪ್ಪು ಹಣ ಹೂಡಿಟ್ಟಿರುವ ಬಿಜೆಪಿ ಮುಖಂಡರ ಮನೆಗೆ ಮೊದಲು ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡುತ್ತಿದ್ದರೆ ಅದೆಷ್ಟೋ ಕಪ್ಪು ಹಣ ಮೊದಲೇ ಹೊರಬರುತ್ತಿತ್ತು ಎಂದು ಆರೋಪಿಸಿದರು.
ಸಭೆಯಲ್ಲಿ ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಜಾಬಿರ್ ಅರಿಯಡ್ಕ, ಪ್ರಮುಖರಾದ ಇಬ್ರಾಹಿಂ ಸಾಗರ್, ಮುಸ್ತಫಾ , ಅಝೀಝ್ ನಿನ್ನಿಕಲ್, ಪಿಬಿಕೆ ಮುಹಮ್ಮದ್, ಅಝೀಝ್ ಕಬಕ, ಖಾದರ್ ಬಪ್ಪಳಿಗೆ, ಹಂಝ ಅಫ್ನಾನ್ ಮತ್ತಿತರರು ಉಪಸ್ಥಿತರಿದ್ದರು. 
ಪ್ರತಿಭಟನೆಯ ಬಳಿಕ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X