Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇಯರ್ ಗೈರಿನಲ್ಲಿ ಮನಪಾ ಬಜೆಟ್ ಸಿದ್ಧತಾ...

ಮೇಯರ್ ಗೈರಿನಲ್ಲಿ ಮನಪಾ ಬಜೆಟ್ ಸಿದ್ಧತಾ ಸಭೆ!

ವಾರ್ತಾಭಾರತಿವಾರ್ತಾಭಾರತಿ28 Nov 2016 8:00 PM IST
share
ಮೇಯರ್ ಗೈರಿನಲ್ಲಿ ಮನಪಾ ಬಜೆಟ್ ಸಿದ್ಧತಾ ಸಭೆ!

ಮಂಗಳೂರು, ನ.28: ಮೇಯರ್ ಹರಿನಾಥ್ ಗೈರುಹಾಜರಿ ಹಾಗೂ ಬೆರಳೆಣಿಕೆಯ ಸಾರ್ವಜನಿಕರೊಂದಿಗೆ ಇಂದು ಮಂಗಳೂರು ಮಹಾನಗರ ಪಾಲಿಕೆಯ 2017-18ನೆ ಸಾಲಿನ ಬಜೆಟ್‌ನ ಸಿದ್ಧಪಡಿಸುವ ಕುರಿತು ಸಾರ್ವಜನಿಕರಿಂದ ಸಲಹೆ ಸ್ವೀಕರಿಸುವ ಸಭೆ ನಡೆಯಿತು.

ಇಂದು ಸಂಜೆ 4 ಗಂಟೆಗೆ ನಿಗದಿಯಾಗಿದ್ದ ಸಭೆ ಸುಮಾರು ಅರ್ಧ ಗಂಟೆಯಾದರೂ ಕೋರಂ ಇಲ್ಲದೆ ಆರಂಭವಾಗಲಿಲ್ಲ. ಕೊನೆಗೆ ಅರ್ಧ ತಾಸಿನ ಬಳಿಕ ಕೆಲ ಸದಸ್ಯರು ಹಾಗೂ ಬೆರಳೆಣಿಕೆಯ ಸಾರ್ವಜನಿಕರ ಆಗಮನದೊಂದಿಗೆ ಆಯುಕ್ತರು ಸಭೆಯನ್ನು ಆರಂಭಿಸಿದರು.

ದೂರವಾಣಿ ಕೇಬಲ್‌ಗಳಿಗೆ ನೆಲಬಾಡಿಗೆಗೆ ಸಲಹೆ

ಮನಪಾ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ವಿವಿಧ ಕಂಪನಿಗಳು ಅಳವಡಿಸುವ ಭೂಗತ ಕೇಬಲ್‌ಗಳಿಗೆ ನೆಲಬಾಡಿಗೆ ವಿಧಿಸಬೇಕು. ಬಸ್ಸು ತಂಗುದಾಣಗಳ ನಿರ್ಮಾಣ, ರಸ್ತೆಗಳ ನಡುವೆ ಕಬ್ಬಿಣದ ಗ್ರಿಲ್ ಅಳವಡಿಕೆ ಮೊದಲಾದ ಸಲಹೆಗಳು ಸಭೆಯಲ್ಲಿ ಸಾರ್ವಜನಿಕಪರಿಂದ ವ್ಯಕ್ತವಾಯಿತು.

ನಾಗರಿಕ ಹಿತರಕ್ಷಣಾ ಸಮಿತಿಯ ಸಂಚಾಲಕ ಹನುಮಂತ ಕಾಮತ್ ಅಭಿಪ್ರಾಯಿಸುತ್ತಾ, ಭೂಗತ ಕೇಬಲ್‌ಗಲಿಗೆ ನೆಬಾಡಿಗೆ ನಿಗದಿಪಡಿಸಿದರೆ ಮನಪಾಕ್ಕೆ ಗರಿಷ್ಠ ಮಟ್ಟದಲ್ಲಿ ಆದಾಯ ಬರಲಿದೆ ಎಂದು ಸಲಹೆ ನೀಡಿದರು. ಸಮಾಜ ಸೇವಕ ಜಿ.ಕೆ. ಭಟ್‌ರವರು, ಫುಟ್‌ಪಾತ್‌ಗಳನ್ನು ವ್ಯವಸ್ಥಿತವಾಗಿ ರೂಪಿಸಲು ಈಬಾರಿಯ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ಆಗ್ರಹಿಸಿದರು.

ಕಂದಾಯ ವಿಭಾಗದಲ್ಲಿ ಸೋರಿಕೆ ತಡೆಗಟ್ಟುವುದು, ಮನೆಗಳನ್ನು ನವೀಕರಣ ಪರವಾನಿಗೆ ಪಡೆದು ಹೊಸ ಮನೆಗಳ ನಿರ್ಮಾಣದ ತಂತ್ರವನ್ನು ತಡೆಗಟ್ಟುವುದು, ಉದ್ದಿಮೆ ಪರವಾನಿಗೆಗಳನ್ನು ಪಾರದರ್ಶಕಗೊಳಿಸಿ ವ್ಯವಸ್ಥಿತಗೊಳಿಸುವುದು, ಸ್ವಯಂಘೋಷಿತ ಆಸ್ತಿ ತೆರಿಗೆ ಸಲ್ಲಿಕೆಯನ್ನು ಪರಿಶೀಲಿಸುವುದು ಮುಂತಾದ ಕ್ರಮಗಳಿಂದ ಪಾಲಿಕೆಗೆ ಹಲವಾರು ಕೋ.ರೂ.ಗಳನ್ನು ಹೆಚ್ಚುವರಿಯಾಗಿ ಸಂಗ್ರಹಿಸಲು ಸಾಧ್ಯವಿದೆ ಎಂಬ ಹಲವು ಸಲಹೆಗಳು ಸಾರ್ವಜನಿಕರಿಂದ ವ್ಯಕ್ತವಾಯಿತು.

ಮನಪಾ ಆಯುಕ್ತ ಮಹಮ್ಮದ್ ನಝೀರ್ ಪ್ರತಿಕ್ರಿಯಿಸಿ, ಸ್ವಯಂಘೋಷಿತ ಆಸ್ತಿ ವಿವರಗಳನ್ನು ಪರಿಶೀಲಿಸುವ ಕಾರ್ಯ ಪ್ರಾರಂಭವಾಗಲಿದೆ. ನಗರದಲ್ಲಿ ಕಾವೂರು, ಉರ್ವಾ ಮಾರ್ಕೆಟ್ ಮಾರುಕಟ್ಟೆಗಳ ಕಾಮಗಾರಿ ಪ್ರಾರಂಭವಾಗಿದೆ. ಕದ್ರಿ ಮತ್ತು ಕಂಕನಾಡಿ ಮಾರುಕಟ್ಟೆಗಳ ನಿರ್ಮಾಣ ಕುರಿತಂತೆ ಕೆಐಡಿಸಿಎಲ್‌ಗೆ ವಹಿಸಿಕೊಡಲಾಗಿದೆ. ಅಳಕೆಯಲ್ಲಿ ಟೆಂಡರ್ ಪ್ರಕ್ರಿಯಯಲ್ಲಿದೆ ಎಂದು ಹೇಳಿದರು.

ವಿಪಕ್ಷ ನಾಯಕಿ ರೂಪಾ ಡಿ.ಬಂಗೇರ, ಕಾರ್ಪೊರೇಟರ್‌ಗಳಾದ ನವೀನ್ ಡಿಸೋಜ, ಸುಧೀರ್ ಶೆಟ್ಟಿ ಕಣ್ಣೂರು ಮುಂತಾದವರು ಸಲಹೆಗಳನ್ನು ನೀಡಿದರು. ಉಪಮೇಯರ್ ಸುಮಿತ್ರಾ ಕರಿಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X