Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳ ಅಪಹರಣ-ಶಾಲೆಗೆ ಬಾರದ...

ಮಕ್ಕಳ ಅಪಹರಣ-ಶಾಲೆಗೆ ಬಾರದ ವಿದ್ಯಾರ್ಥಿಗಳು:ನೆಲ್ಲಿಕಾರು ಮಕ್ಕಳ ಗ್ರಾಮಸಭೆಯಲ್ಲಿ ಧ್ವನಿಯೆತ್ತಿದ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ28 Nov 2016 10:02 PM IST
share
ಮಕ್ಕಳ ಅಪಹರಣ-ಶಾಲೆಗೆ ಬಾರದ ವಿದ್ಯಾರ್ಥಿಗಳು:ನೆಲ್ಲಿಕಾರು ಮಕ್ಕಳ ಗ್ರಾಮಸಭೆಯಲ್ಲಿ ಧ್ವನಿಯೆತ್ತಿದ ವಿದ್ಯಾರ್ಥಿ

ಮೂಡುಬಿದಿರೆ, ನ.28: ಇತ್ತೀಚಿನ ದಿನಗಳಲ್ಲಿ ಮಕ್ಕಳ ಅಪಹರಣದ ಬಗ್ಗೆ ಸುದ್ದಿಗಳು ಕೇಳಿ ಬರುತ್ತಿದ್ದು ಮಕ್ಕಳು ಶಾಲೆಗೆ ಬರಲು ಹೆದರುತ್ತಿದ್ದಾರೆ. ಈ ಬಗ್ಗೆ ಸರಿಯಾದ ಮಾಹಿತಿಯನ್ನು ತಮಗೆ ನೀಡಿ ಎಂದು ಮಾಂಟ್ರಾಡಿ ಸರಕಾರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿ ಆದಿತ್ಯ ಆಗ್ರಹಿಸಿದ ಘಟನೆ ಸೋಮವಾರ ನೆಲ್ಲಿಕಾರಿನಲ್ಲಿ ನಡೆದಿದೆ.

ನೆಲ್ಲಿಕಾರು ಗ್ರಾಮ ಪಂಚಾಯತ್‌ನ ವತಿಯಿಂದ ಪಂಚಾಯತ್ ಸಭಾಭವನದಲ್ಲಿ ಸೋಮವಾರ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಮಕ್ಕಳ ಅಪಹರಣದ ಸುದ್ದಿಗಳು ಅಲ್ಲಲ್ಲಿ ಕೇಳಿ ಬರುತ್ತಿದ್ದರಿಂದ ಹೆತ್ತವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಲು ಹೆದರುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಪಣಪಿಲದಿಂದ ನೆಲ್ಲಿಕಾರು ಶಾಲೆಗೆ ಬರುವ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯ ಅವಶ್ಯಕತೆಯಿದೆ. ಅಲ್ಲದೆ ಅದೇ ಪರಿಸರದ ವಿದ್ಯಾರ್ಥಿನಿಯೋರ್ವಳು ಪದೇಪದೇ ಶಾಲೆಗೆ ಹಾಜರಾಗುತ್ತಿಲ್ಲ. ಇದಕ್ಕೆ ಪಂಚಾಯತ್‌ನಿಂದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿಕೊಡುವಂತೆ ಶಿಕ್ಷಕಿಯೊಬ್ಬರು ಆಗ್ರಹಿಸಿದರು.

ಮಕ್ಕಳ ಅಪಹರಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಹೊರತು ನಮ್ಮೂರುಗಳಲ್ಲಿ ಅಂತಹ ಪ್ರಕರಣಗಳು ಕಂಡು ಬಂದಿಲ್ಲ. ಇದೆಲ್ಲಾ ಸುಳ್ಳು ಸುದ್ದಿ ಈ ಬಗ್ಗೆ ಮಕ್ಕಳು ಮತ್ತು ಹೆತ್ತವರು ತಲೆಕೆಡಿಸಿಕೊಳ್ಳಬೇಡಿ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯ ಅಪರಾಧ ಪತ್ತೆ ವಿಬಾಗದ ಪೊಲೀಸ್ ನಿರೀಕ್ಷಕ ಕುಶಾಲಪ್ಪ ಸಲಹೆ ನೀಡಿದರು.

ವಿದ್ಯಾರ್ಥಿನಿ ಶಾಲೆಗೆ ಹಾಜರಾಗದಿರುವುದರ ಬಗ್ಗೆ ಗ್ರಾಮಸಭೆಯ ಮೊದಲೇ ಪಂಚಾಯತ್‌ನ ಗಮನಕ್ಕೆ ಯಾಕೆ ತಂದಿಲ್ಲವೆಂದು ಸದಸ್ಯ ಶಶಿಧರ ಎಂ. ಪ್ರಶ್ನಿಸಿದರಲ್ಲದೆ, ವಿದ್ಯಾರ್ಥಿಗಳು ಶಾಲೆಗೆ ತಪ್ಪಿಸಿದರೆ ಈ ಬಗ್ಗೆ ಕ್ರಮಕೈಗೊಳ್ಳಬೇಕು. ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಹೇಳಿದರು. ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಪಂಚಾಯತ್‌ನಿಂದ ಕಷ್ಟಸಾಧ್ಯವಾಗಬಹುದು. ವಿದ್ಯಾರ್ಥಿನಿಯ ಸಮಸ್ಯೆಯ ಬಗ್ಗೆ ತಿಳಿಯಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಹಿತ ತಾನು ಕೂಡಾ ಮನೆಗೆ ಭೇಟಿ ನೀಡಲಾಗುವುದು. ಹಾಗೂ ಶಾಲೆಗೆ ಬರಲು ದೂರವಾಗುವುದಾದರೆ ಬೇರೆ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಗುವುದು ಎಂದು ಪಂಚಾಯತ್ ಅಧ್ಯಕ್ಷ ಜಯಂತ ಹೆಗ್ಡೆ ತಿಳಿಸಿದರು.

ಬೋರುಗುಡ್ಡೆ ಶಾಲೆಯ ಶೌಚಾಲಯ ದುರಸ್ತಿಗೆ ಪಂಚಾಯತ್‌ನಿಂದ ಅನುದಾನ ನೀಡುವಂತೆ, ನೆಲ್ಲಿಕಾರು ಸರಕಾರಿ ಶಾಲೆಯ ಶೌಚಾಲಯಕ್ಕೆ ಅರ್ಧಗೋಡೆ ಮಾತ್ರ ಇದ್ದು ಮೇಲ್ಛಾವಣಿ ಇಲ್ಲ ಇದನ್ನು ಸರಿಪಡಿಸುವಂತೆ, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸುರಕ್ಷತಾ ಕಪಾಟುಗಳನ್ನು ನೀಡುವಂತೆ, ನೆಲ್ಲಿಕಾರು ಶಾಲೆಯ ಬಳಿ ರಸ್ತೆಯಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸುವಂತೆ, ಆಟದ ಮೈದಾನಕ್ಕೆ ಆವರಣಗೋಡೆ ನಿರ್ಮಿಸುವಂತೆ, ಪೆಂಚಾರು ಸರಕಾರಿ ಶಾಲೆಗೆ ತೆರೆದ ಬಾವಿ ಮತ್ತು ಆವರಣಗೋಡೆಯನ್ನು ನಿರ್ಮಿಸುವಂತೆ , ಮಾಂಟ್ರಾಡಿ ಶಾಲೆಯ ಸುತ್ತ ಅಳವಡಿಸಿರುವ ತಂತಿ ಬೇಲಿ ಕಿತ್ತು ಹೋಗಿದ್ದು ಒಳಗಡೆ ದನಗಳು ಬಂದು ತರಕಾರಿಗಳನ್ನು ತಿನ್ನುತ್ತಿದ್ದು ಇದಕ್ಕೆ ಆವರಣಗೋಡೆಯ ಅವಶ್ಯಕತೆ ಇದೆ ಎಂದು ಆಯಾಯ ಶಾಲೆಯ ವಿದ್ಯಾರ್ಥಿಗಳು ಪಂಚಾಯತ್‌ನ ಗಮನಕ್ಕೆ ತಂದರು.

ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಶಿಕ್ಷಣ ಇಲಾಖೆಯ ಗಮನಕ್ಕೆ ತನ್ನಿ, ಉಳಿದಂತೆ ಸಣ್ಣಪುಟ್ಟ ಕೊರತೆಗಳನ್ನು ಸ್ಥಳ ಪರಿಶೀಲನೆ ನಡೆಸಿ ಪಂಚಾಯತ್‌ನಿಂದ ಸರಿಪಡಿಸಲಾಗುವುದು. ಆದರೆ ತಮ್ಮ ಇಲಾಖೆಗಳಿಂದ ನೀಡುವ ದೃಢಪತ್ರವನ್ನು ಪಂಚಾಯತ್‌ಗೆ ನೀಡುವಂತೆ ಪಂಚಾಯತ್ ಅಧ್ಯಕ್ಷ ಜಯಂತ ಹೆಗ್ಡೆ ತಿಳಿಸಿದರು.

ನೆಲ್ಲಿಕಾರು ಶಾಲೆಯ ಶಿಕ್ಷಕ ಸುರೇಂದ್ರ ಅವರು ಮಾತನಾಡಿ ಸರ್ವ ಶಿಕ್ಷಣ ಅಭಿಯಾನದಡಿ ಅನುದಾನಗಳು ಸಿಗುತ್ತಿಲ್ಲ. ಆದ್ದರಿಂದ ಪಂಚಾಯತ್‌ನಿಂದಲೇ ಸರಿಪಡಿಸುವಂತೆ ವಿನಂತಿಸಿದರು.

ವಿದ್ಯಾರ್ಥಿನಿ ಸಂಧ್ಯಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವೈದ್ಯಾಧಿಕಾರಿ ಡಾ. ಭರತ್ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣ ಇಲಾಖೆಯ ಸಿಆರ್‌ಪಿ ಸ್ಟೇನಿ ಪಿಂಟೊ ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿದರು.

ತಾ.ಪಂ ಸದಸ್ಯೆ ರೇಖಾ ಸಾಲ್ಯಾನ್, ಉಪಾಧ್ಯಕ್ಷೆ ಕುಶಲ, ಪಿಡಿಒ ಪ್ರಶಾಂತ್ ಮತ್ತು ಪಂಚಾಯತ್ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X