Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ಯಾಕ್ಸಿ ಡ್ರೈವರ್ ಬ್ಯಾಂಕ್ ಖಾತೆಯಲ್ಲಿ...

ಟ್ಯಾಕ್ಸಿ ಡ್ರೈವರ್ ಬ್ಯಾಂಕ್ ಖಾತೆಯಲ್ಲಿ 9800 ಕೋಟಿ ರೂಪಾಯಿ!

ವಾರ್ತಾಭಾರತಿವಾರ್ತಾಭಾರತಿ29 Nov 2016 9:40 AM IST
share
ಟ್ಯಾಕ್ಸಿ ಡ್ರೈವರ್ ಬ್ಯಾಂಕ್ ಖಾತೆಯಲ್ಲಿ 9800 ಕೋಟಿ ರೂಪಾಯಿ!

ಅಮೃತಸರ, ನ.29: ಇಲ್ಲಿನ ಟ್ಯಾಕ್ಸಿ ಚಾಲಕ ಬಲ್ವಿಂದರ್ ಸಿಂಗ್ ಅವರಿಗೆ ನವೆಂಬರ್ 4ರಂದು ಅಚ್ಚರಿ ಕಾದಿತ್ತು. ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾದ ತಮ್ಮ ಉಳಿತಾಯ ಖಾತೆಯಲ್ಲಿ 98,05,95,12,231 ರೂಪಾಯಿ ಜಮೆ ಆಗಿರುವುದು ಗಮನಕ್ಕೆ ಬಂದಾಗ ಅವರಿಗೆ ಅಚ್ಚರಿಯಿಂದ ಮಾತೇ ಹೊರಡಲಿಲ್ಲ. ಅಂದರೆ 9,806 ಕೋಟಿ ರೂಪಾಯಿ; ಫ್ಲಿಪ್‌ಕಾರ್ಟ್‌ನ ಕಳೆದ ಒಂದು ವರ್ಷದ ಆದಾಯದಷ್ಟು!
ಆದರೆ ಉಳಿತಾಯ ಖಾತೆಗೆ ಜಮೆ ಆದ ಅತಿಹೆಚ್ಚು ಮೊತ್ತದ ಆ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಮರುದಿನವೇ ಅವರ ಖಾತೆಯಿಂದ ಈ ಹಣವನ್ನು ವಾಪಾಸು ಪಡೆಯಲಾಯಿತು.
"ನಾನು ಹಲವು ಬಾರಿ ಬ್ಯಾಂಕಿಗೆ ಹೋಗಿದ್ದೆ. ಆದರೆ ಯಾರೂ ನನ್ನ ಮಾತು ಕೇಳಲಿಲ್ಲ. ಇದರ ಬದಲು ನವೆಂಬರ್ 7ರಂದು ನನ್ನ ಪಾಸ್‌ಬುಕ್ ಪಡೆದುಕೊಂಡರು. ಬಳಿಕ ಈ ದೊಡ್ಡ ಮೊತ್ತದ ಪಾವತಿಯನ್ನು ನಮೂದಿಸದ ಹೊಸ ಪಾಸ್‌ಬುಕ್ ಕೊಟ್ಟರು" ಎಂದು ಸಿಂಗ್ ವಿವರಿಸಿದರು. ಪ್ರಧಾನಮಂತ್ರಿ ಜನಧನ್ ಯೋಜನೆಯಡಿ ಆರಂಭಿಸಿದ ಇವರ ಖಾತೆಯಲ್ಲಿ ಸುಮಾರು 3,000 ರೂಪಾಯಿ ಇರುತ್ತಿತ್ತು.
ಈ ಬಗ್ಗೆ ಯಾವುದೇ ಮಾಹಿತಿ ಬಿಡುಗಡೆ ಮಾಡಲು ಬ್ಯಾಂಕ್ ಶಾಖೆಯ ಪ್ರಬಂಧಕ ರವೀಂದ್ರ ಕುಮಾರ್ ನಿರಾಕರಿಸಿದರು. ಈ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಅಚ್ಚರಿಗೆ ಲೀಡ್ ಬ್ಯಾಂಕ್ ಪ್ರಬಂಧಕ ಸಂದೀಪ್ ಗರ್ಗ್ ನೀಡುವ ಕಾರಣವೆಂದರೆ, "ಈ ಖಾತೆದಾರ ಬ್ಯಾಂಕಿನ ನಿಯೋಜಿತ ವೆಂಟರ್ ಆಗಿದ್ದ. 200 ರೂಪಾಯಿಯ ಕ್ರೆಡಿಟ್ ಎಂಟ್ರಿ ನಮೂದಿಸುವ ವೇಳೆ, ಲೆಕ್ಕ ಶಾಖೆಯ ಸಹಾಯಕ ವ್ಯವಸ್ಥಾಪಕರು ತಪ್ಪಾಗಿ ಬ್ಯಾಂಕಿನ 11 ಅಂಕಿಗಳ ಆಂತರಿಕ ಬ್ಯಾಂಕಿಂಗ್ ಜನರಲ್ ಲೆಡ್ಜರ್ ಖಾತೆ ಸಂಖ್ಯೆಯನ್ನು ಹಣದ ಕಲಂನಲ್ಲಿ ನಮೂದಿಸಿರುವ ಸಾಧ್ಯತೆ ಇದೆ. ಮರುದಿನ ಅದು ಗೊತ್ತಾದಾಗ ತಪ್ಪು ಸರಿಪಡಿಸಲಾಗಿದೆ"
ಜಿಲ್ಲಾಧಿಕಾರಿ ಭೂಪೀಂದರ್ ಸಿಂಗ್ ರಾಯ್ ಈ ಘಟನೆಯನ್ನು ಖಚಿತಪಡಿಸಿದ್ದಾರೆ. ಹಲವು ಕಾರಣಗಳಿಂದ ಬ್ಯಾಂಕ್ ಅಧಿಕಾರಿ ಬೇಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿರುವುದು ಸ್ಪಷ್ಟ ಎಂದು ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಖಾತೆದಾರ ಇದನ್ನು ಗಮನಕ್ಕೆ ತರುವ ಮೊದಲೇ ಆತ ಶಾಖೆಗೆ ಭೇಟಿ ನೀಡಿದಾಗ ಅದನ್ನು ಸರಿಪಡಿಸಬಹದಿತ್ತು ಎಂದು ಅವರು ಹೇಳಿದ್ದಾರೆ. ಬಾರಾನಾಲಾ, ಸಂಗ್ರೂರು ಹಾಗು ಪಾಟಿಯಾಲದಿಂದ ಆಗಮಿಸಿದ್ದ ಆದಾಯ ತೆರಿಗೆ ಅಧಿಕಾರಿಗಳ ತಂಡ ಮಧ್ಯರಾತ್ರಿವರೆಗೂ ಈ ಬಗ್ಗೆ ತನಿಖೆ ನಡೆಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X