Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ಸ್ಕಿಲ್‌ಗೇಮ್, ಮಸಾಜ್...

ಮಂಗಳೂರಿನಲ್ಲಿ ಸ್ಕಿಲ್‌ಗೇಮ್, ಮಸಾಜ್ ಕೇಂದ್ರ ಬಂದ್!

ಮೇಯರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Nov 2016 4:11 PM IST
share
ಮಂಗಳೂರಿನಲ್ಲಿ ಸ್ಕಿಲ್‌ಗೇಮ್, ಮಸಾಜ್ ಕೇಂದ್ರ ಬಂದ್!

ಮಂಗಳೂರು, ನ.29: ನಗರದಲ್ಲಿ ನಡೆಯುತ್ತಿರುವ ಎಲ್ಲಾ ಸ್ಕಿಲ್‌ಗೇಮ್ ಹಾಗೂ ಮಸಾಜ್ ಕೇಂದ್ರಗಳನ್ನು ಬಂದ್ ಮಾಡಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮನಪಾ ಮೇಯರ್ ಹರಿನಾಥ್ ಸೂಚಿಸಿದ್ದಾರೆ.
ಇಂದು ನಡೆದ ಮನಪಾ ಸಾಮಾನ್ಯ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ನಗರದಲ್ಲಿ ಸ್ಕಿಲ್ ಗೇಮ್ ಹಾಗೂ ಮಸಾಜ್ ಕೇಂದ್ರಗಳು ಅವ್ಯಾಹತವಾಗಿ ತಲೆ ಎತ್ತಿರುವ ಬಗ್ಗೆ ಈ ಹಿಂದೆ ಹಲವು ಸಭೆಗಳಲ್ಲಿ ಪ್ರಸ್ತಾಪಿಸಲಾಗಿದೆ. ಈ ಬಗ್ಗೆ ಯಾವ ಕ್ರಮಗಳಾಗಿವೆ ಎಂದು ಸದಸ್ಯರಾದ ದಯಾನಂದ ಶೆಟ್ಟಿ, ನವೀನ್ ಡಿಸೋಜ ಮೊದಲಾದವರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕವಿತಾ ಸನಿಲ್, ಮನಪಾದಿಂದ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್ ಮೊದಲಾದ ಆಟಗಳಿಗೆ ಮಾತ್ರವೇ ಪರವಾನಿಗೆ ನೀಡಲಾಗುತ್ತಿದೆ. ಉಳಿದಂತೆ ಧರ್ಮಸ್ಥಳ ಆಯುರ್ವೇದಿಕ್ ಆಯುರ್ವೇದಿಕ್ ಸೆಂಟರ್ ಹೊರತು ಪಡಿಸಿ ಯಾವುದೇ ಮಸಾಜ್ ಪಾರ್ಲರ್‌ಗಳಿಗೆ ಮನಪಾದಿಂದ ಪರವಾನಿಗೆ ನೀಡಲಾಗಿಲ್ಲ. ಇಂತಹ ಪಾರ್ಲರ್‌ಗಳು ನಗರದಲ್ಲಿ ಕಾರ್ಯಾಚರಿಸುತ್ತಿದ್ದು, ಅಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದಾಳಿಯನ್ನೂ ನಡೆಸಲಾಗಿದೆ. ಇತ್ತೀಚೆಗೆ ಗೃಹ ಸಚಿವರು ನಗರಕ್ಕೆ ಭೇಟಿ ನೀಡಿದ್ದ ವೇಳೆ ಅವರ ಗಮನಕ್ಕೆ ತರಲಾಗಿತ್ತು. ಅವರು ತಕ್ಷಣ ಪೊಲೀಸ್ ಆಯುಕ್ತರನ್ನು ಕರೆಯಿಸಿ ವರದಿ ನೀಡುವಂತೆ ತಿಳಿಸಿದ್ದರು. ಆ ಬಳಿಕ ಸಾಕಷ್ಟು ಮಸಾಜ್ ಪಾರ್ಲರ್‌ಗಳು ಹಾಗೂ ರಿಕ್ರಿಯೇಶನ್ ಕ್ಲಬ್‌ಗಳನ್ನು ಬಂದ್ ಮಾಡಿರುವ ಮಾಹಿತಿ ಲಭ್ಯವಾಗಿದೆ. ಪೊಲೀಸರು ಈ ಬಗ್ಗೆ ಕಾಳಜಿ ವಹಿಸಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು.

ಯಾವುದೇ ಒಳಾಂಗಣ ಕ್ರೀಡೆಗಳಿಗೂ ಮನಪಾದಿಂದ ಪರವಾನಿಗೆ ನೀಡಬಾರದು ಎಂದು ಸದಸ್ಯ ನವೀನ್ ಡಿಸೋಜ ಹಾಗೂ ವಿನಯರಾಜ್ ಈ ಸಂದರ್ಭ ಆಗ್ರಹಿಸಿದರು.

ಮೇಯರ್ ಹರಿನಾಥ್ ಪ್ರತಿಕ್ರಿಯಿಸಿ, ನಗರದಲ್ಲಿ ನಡೆಯುತ್ತಿರುವ ಎಲ್ಲಾ ಸ್ಕಿಲ್‌ಗೇಮ್ ಹಾಗೂ ಮಸಾಜ್ ಕೇಂದ್ರಗಳನ್ನು ಬಂದ್ ಮಾಡಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು. 

750 ಮಂದಿಗೆ 2 ಶೌಚಾಲಯ!

ನಗರದ ಘನತ್ಯಾಜ್ಯ ನಿರ್ವಹಣೆಯ ಗುತ್ತಿಗೆ ವಹಿಸಿರುವ ಆ್ಯಂಟನಿ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಿಬ್ಬಂದಿಗೆ ಬಂಗ್ರ ಕೂಳೂರಿನಲ್ಲಿ ಕಾರ್ಯ ನಿರ್ವಹಣೆಯ ಅನುಕೂಲಕ್ಕಾಗಿ ತಂಗುವ ವ್ಯವಸ್ಥೆ ಮಾಡಲಾಗಿದೆ. ಆದರೆ ಸಂಸ್ಥೆಯ 750 ಮಂದಿ ಸಿಬ್ಬಂದಿಗೆ 2 ಶೌಚಾಲಯಗಳು ಮಾತ್ರವೇ ಇದ್ದು, ಅಲ್ಲಿ ಪರಿಸರ ಅನೈರ್ಮಲ್ಯದ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ ಎಂದು ಸದಸ್ಯ ದಿವಾಕರ್ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮನಪಾ ಆಯುಕ್ತ ಮುಹಮ್ಮದ್ ನಝೀರ್, ಈ ಸ್ಥಳಕ್ಕೆ ತಾನು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಅಲ್ಲಿ ಪರಿಸರ ಸ್ವಚ್ಛವಾಗಿರುವುದು ಕಂಡು ಬಂದಿದೆ ಎಂದು ಹೇಳಿದಾಗ, ಹಾಗಾದರೆ ಸಾರ್ವಜನಿಕರು ದೂರುತ್ತಿರುವುದು ಸುಮ್ಮನೆಯೇ ಎಂದು ದಿವಾಕರ್ ಅಸಮಾಧಾನ ವ್ಯಕ್ತಪಡಿಸುತ್ತಾ, ಮೇಯರ್ ಪೀಠದೆದುರು ತೆರಳಿ ಆಯುಕ್ತರ ಹೇಳಿಕೆಯನ್ನು ಖಂಡಿಸಿದರು.

ಮೇಯರ್ ಹರಿನಾಥ್ ಸ್ಪಂದಿಸುತ್ತಾ, ತಾನು, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು, ಸಚೇತಕರು ಹಾಗೂ ಸ್ಥಳೀಯ ಸದಸ್ಯರ ಜತೆ ಒಂದು ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X