Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆರಿಗೆ ಕಾನೂನು ತಿದ್ದುಪಡಿ ಮಸೂದೆ...

ತೆರಿಗೆ ಕಾನೂನು ತಿದ್ದುಪಡಿ ಮಸೂದೆ ಮಂಜೂರು

ವಾರ್ತಾಭಾರತಿವಾರ್ತಾಭಾರತಿ29 Nov 2016 6:50 PM IST
share
ತೆರಿಗೆ ಕಾನೂನು ತಿದ್ದುಪಡಿ ಮಸೂದೆ ಮಂಜೂರು

ಹೊಸದಿಲ್ಲಿ, ನ.29: ನೋಟು ರದ್ದತಿಯ ಬಳಿಕ ಬ್ಯಾಂಕ್‌ಗಳಲ್ಲಿ ಠೇವಣಿಯಿರಿಸಲಾದ ಹಣಕ್ಕೆ ತೆರಿಗೆ ವಿಧಿಸುವ ಕುರಿತಾದ ಮಸೂದೆಯೊಂದು ಲೋಕಸಭೆಯಲ್ಲಿಂದು ವಿಪಕ್ಷಗಳ ಕೋಲಾಹಲದ ನಡುವೆಯೇ, ಯಾವುದೇ ಚರ್ಚೆಯಿಲ್ಲದೆ, ಕೆಲವೇ ನಿಮಿಷಗಳೊಳಗೆ ಮಂಜೂರಾಗಿದೆ.

ವಿಪಕ್ಷೀಯರ ಭೀಕರ ಘೋಷಣೆಗಳ ನಡುವೆಯೇ ಮಾತನಾಡಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಕೆಲವರು ರದ್ದುಗೊಳಿಸಲಾಗಿರುವ ರೂ.500 ಹಾಗೂ 1000ದ ನೋಟುಗಳನ್ನು ಕಾನೂನುಬಾಹಿರವಾಗಿ ಬದಲಾಯಿಸಲು ಯತ್ನಿಸುತ್ತಿರುವುದು ಸರಕಾರದ ಗಮನಕ್ಕೆ ಬಂದ ಬಳಿಕ. ತೆರಿಗೆ ಕಾನೂನು(2ನೆ ತಿದ್ದುಪಡಿ) ಮಸೂದೆ-2016ನ್ನು ತರಲಾಗಿದೆ ಎಂದರು.

ಪ್ರಸ್ತಾವಿತ ತಿದ್ದುಪಡಿಯಂತೆ, ಕಾನೂನುಬಾಹಿರ ನೋಟು ಬದಲಾವಣೆಯಲ್ಲಿ ಸಿಕ್ಕಿಬಿದ್ದವರಿಗೆ ಶೇ.60 ತೆರಿಗೆ ಹಾಗೂ ದಂಡ ವಿಧಿಸಲಾಗುವುದು. ಅದು ಒಟ್ಟು ಶೇ.85ರ ವರೆಗಾಗಬಹುದು. ಬ್ಯಾಂಕ್‌ಗಳಲ್ಲಿ ಕಪ್ಪು ಹಣದ ಘೋಷಣೆ ಮಾಡುವವರು ಮೇಲ್ತೆರಿಗೆ ಹಾಗೂ ದಂಡ ಸಹಿತ ಶೇ.50 ತೆರಿಗೆ ಪಾವತಿಸಿದರೆ ಸಾಕು. ಅವರಿಗೆ ಉಳಿದುದರಲ್ಲಿ ಶೇ.25ರಷ್ಟು ಹಣವನ್ನು ತಕ್ಷಣ ಮರಳಿಸಲಾಗುವುದು. ಉಳಿದ ಶೇ.25ನ್ನು 4 ವರ್ಷಗಳ ಬಳಿಕ ಹಿಂದಿರುಗಿಸಲಾಗುವುದು ಎಂದು ಅವರು ವಿವರಿಸಿದರು.

ಇದು ಸರಕಾರಕ್ಕೆ ಗರೀಬ್ ಕಲ್ಯಾಣ ಕೋಶದಂತಹ ಯೋಜನೆಗಳಿಗೆ ಹಾದಿಯೊದಗಿಸುತ್ತದೆ. ತಿದ್ದುಪಡಿಯನ್ನು ಮಂಜೂರು ಮಾಡುವಂತೆ ತಾನು ಸದನಕ್ಕೆ ಒತ್ತಾಯ ಮಾಡುತ್ತಿದ್ದೇನೆಂದು ಜೇಟ್ಲಿ ಹೇಳಿದರು.

ಮಸೂದೆಯು ಸಾರ್ವಜನಿಕ ಪ್ರಾಮುಖ್ಯದ ತುರ್ತು ಕಾಯ್ದೆಯಾಗಿರುವುದರಿಂದ ಅದನ್ನು ತಕ್ಷಣವೇ ಮಂಜೂರು ಮಾಡಬೇಕು. ಚರ್ಚೆ ನಡೆಯಬೇಕಾಗಿದ್ದರೂ ವಿಪಕ್ಷ ಸದಸ್ಯರ ನಡವಳಿಕೆಯಿಂದ ಅದು ಅಸಾಧ್ಯವಾಗಿದೆಯೆಂದು ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ತಿಳಿಸಿದರು.

ಮಸೂದೆಯು ಬಳಿಕ ಧ್ವನಿ ಮತದಲ್ಲಿ ಅಂಗೀಕಾರವಾಯಿತು. ಇದು ಹಣಕಾಸು ಮಸೂದೆಯಾಗಿರುವುದರಿಂದ ರಾಜ್ಯಸಭೆಯ ಅಂಗೀಕಾರ ಅಗತ್ಯವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X