Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: ನ್ಯಾಯಾಲಯಕ್ಕೆ ಹಾಜರಾಗಲು 1,000...

ದುಬೈ: ನ್ಯಾಯಾಲಯಕ್ಕೆ ಹಾಜರಾಗಲು 1,000 ಕಿ.ಮೀ. ನಡೆದ ಭಾರತೀಯ

ವಾರ್ತಾಭಾರತಿವಾರ್ತಾಭಾರತಿ29 Nov 2016 8:23 PM IST
share
ದುಬೈ: ನ್ಯಾಯಾಲಯಕ್ಕೆ ಹಾಜರಾಗಲು 1,000 ಕಿ.ಮೀ. ನಡೆದ ಭಾರತೀಯ

ದುಬೈ, ನ. 29: ದುಬೈಯಲ್ಲಿರುವ 48 ವರ್ಷದ ಅನಿವಾಸಿ ಭಾರತೀಯ ಜಗನ್ನಾಥನ್ ಸೆಲ್ವರಾಜ್ ಎರಡು ವರ್ಷಗಳಲ್ಲಿ 1,000 ಕಿ.ಮೀ.ಗೂ ಅಧಿಕ ದೂರ ನಡೆದು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗುತ್ತಿದ್ದಾರೆ. ಅವರು ಹೀಗೆ ಮಾಡುತ್ತಿರುವುದು ತನ್ನ ಊರಿಗೆ ಮರಳುವುದಕ್ಕಾಗಿ.

ವಾಹನ ದಟ್ಟಣೆ, ಶಾಖ, ಮರಳು ಬಿರುಗಾಳಿ ಮತ್ತು ಬಳಲಿಕೆಗಳನ್ನು ಎದುರಿಸಿ ದುಬೈಯ ನಿಬಿಡ ಹೆದ್ದಾರಿಗಳಲ್ಲಿ ನಡೆದಿದ್ದೇನೆ ಎಂದು 'ಖಲೀಜ್ ಟೈಮ್ಸ್'ನೊಂದಿಗೆ ಮಾತನಾಡಿದ ಸೆಲ್ವರಾಜ್ ಹೇಳುತ್ತಾರೆ.

ದುಬೈಯ ಹೊರವಲಯದಲ್ಲಿರುವ ಸೋನಾಪುರ್‌ನಲ್ಲಿ ಅವರು ತಂಗಿದ್ದಾರೆ. ದುಬೈನಲ್ಲಿರುವ ಕಾರ್ಮಿಕ ನ್ಯಾಯಾಲಯಕ್ಕೆ ಹೋಗಲು ಅವರು 22 ಕಿ.ಮೀ. ನಡೆಯಬೇಕಾಗುತ್ತದೆ.

ಸೋನಾಪುರದಿಂದ ಕರಮಕ್ಕೆ ಬಸ್‌ನಲ್ಲಿ ಪ್ರಯಾಣಿಸಿದರೆ ಕೆಲವು ದಿರ್ಹಮ್‌ಗಳನ್ನು ಕೊಡಬೇಕಾಗುತ್ತದೆ. ಆದರೆ, ಈ ಬಡ ವ್ಯಕ್ತಿಯಲ್ಲಿ ಅಷ್ಟು ಹಣವಿಲ್ಲ. 22 ಕಿಲೋ ಮೀಟರ್ ದೂರವನ್ನು ಕ್ರಮಿಸಲು ಅವರು 2 ಗಂಟೆ ನಡೆಯಬೇಕಾಗುತ್ತದೆ ಹಾಗೂ ಹಿಂದಿರುಗಲು ಮತ್ತೆ ಎರಡು ಗಂಟೆಗಳ ಕಾಲ ನಡೆಯಬೇಕಾಗುತ್ತದೆ.

ಅವರು ಹೀಗೆ ಎರಡು ವಾರಗಳಿಗೊಮ್ಮೆ ನಾಲ್ಕು ಗಂಟೆಗಳಲ್ಲಿ 54 ಕಿಲೋಮೀಟರ್ ದೂರವನ್ನು ಕ್ರಮಿಸುತ್ತಾರೆ. ಅವರ ಪ್ರಕರಣದಲ್ಲಿ ತೀರ್ಪು ಬರುವವರೆಗೆ ಅವರು ಹೀಗೆ ನಡೆಯಲೇ ಬೇಕಾಗಿದೆ.

ತಮಿಳುನಾಡಿನ ತಿರುಚಿರಾಪಳ್ಳಿ ನಿವಾಸಿಯಾಗಿರುವ ಸೆಲ್ವರಾಜ್‌ರ ತಾಯಿ ಊರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದರು. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವರಿಗೆ ಅನುಮತಿ ಸಿಗಲಿಲ್ಲ. ಅಂದಿನಿಂದ ಅವರು ಕಾರ್ಮಿಕ ನ್ಯಾಯಾಲಯಕ್ಕೆ ಎಡತಾಕುತ್ತಿದ್ದಾರೆ.

''ನಾನು ಮುಂಜಾನೆ ಬೇಗ ನಡೆಯಲು ಆರಂಭಿಸುತ್ತೇನೆ. ಬಸ್ ಟಿಕೆಟ್ ಖರೀದಿಸಲು ಅಥವಾ ಮೆಟ್ರೊದಲ್ಲಿ ಹೋಗಲು ನನ್ನಲ್ಲಿ ಹಣವಿಲ್ಲ. ನನಗೆ ಯಾರೂ ಸಹಾಯ ಮಾಡಲಿಲ್ಲ. ಆದರೆ, ಎರಡು ವರ್ಷಗಳ ಅವಧಿಯಲ್ಲಿ ನಾನು ಕನಿಷ್ಠ 20 ಬಾರಿ ನ್ಯಾಯಾಲಯಕ್ಕೆ ಹಾಜರಾಗಿರಬೇಕು'' ಎಂದು ಅವರು ಹೇಳುತ್ತಾರೆ.

''ಊರಿಗೆ ಹೋಗಲು ಅವರಿಗೆ ವಿಮಾನ ಟಿಕೆಟ್ ಬೇಕು. ಪಾರ್ಕ್‌ನಲ್ಲಿ ವಾಸಿಸುತ್ತಿದ್ದ ಅವರ ಎಲ್ಲ ಸ್ನೇಹಿತರು ಮನೆಗೆ ಹೋಗಿದ್ದಾರೆ. ಅವರು ಭಾರತಕ್ಕೆ ನಡೆದುಕೊಂಡೇ ಹೋಗಲು ಸಾಧ್ಯವಿಲ್ಲ'' ಎಂದು ಸೆಲ್ವರಾಜ್‌ರಿಗೆ ಸಹಾಯ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X