Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರಳು ಮಾಫಿಯಾ ಮಟ್ಟ ಹಾಕದಿದ್ದಲ್ಲಿ...

ಮರಳು ಮಾಫಿಯಾ ಮಟ್ಟ ಹಾಕದಿದ್ದಲ್ಲಿ ಬೀದಿಗಿಳಿದು ಹೋರಾಟ: ಪಾಲೆಮಾರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ30 Nov 2016 11:42 AM IST
share
ಮರಳು ಮಾಫಿಯಾ ಮಟ್ಟ ಹಾಕದಿದ್ದಲ್ಲಿ ಬೀದಿಗಿಳಿದು ಹೋರಾಟ: ಪಾಲೆಮಾರ್ ಎಚ್ಚರಿಕೆ

ಮಂಗಳೂರು,ನ.30: ನಗರ ಸಹಿತ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿದ್ದು, ಒಂದು ತಿಂಗಳೊಳಗೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯ ನಿರೀಕ್ಷೆಯಲ್ಲಿ ಜನರು ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಆದರೆ, ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಜಿಲ್ಲಾಡಳಿತ ಸಹಿತ ಸರಕಾರ ಕೇವಲ ಪ್ರಚಾರ ಪಡೆಯಲು ಸೀಮಿತವಾಗಿದೆ. ಅಭಿವೃದ್ಧಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗೆ ಲಿಖಿತ ಮನವಿ ಮಾಡಿದರೂ ಪ್ರಯೋಜನವಾಗುತ್ತಿಲ್ಲ ಎಂದು ದೂರಿದರು.

ಈ ಹಿಂದೆ ಬಿಜೆಪಿ ಆಡಳಿತಾವಧಿಯಲ್ಲಿ ಕೈಗೊಂಡ ಕಾರ್ಯಗಳನ್ನು ಕಳಪೆ ಮಾಡುವುದಷ್ಟೇ ಕಾಂಗ್ರೆಸ್ ಸರಕಾರದ ಸಾಧನೆಯಾಗಿದೆ. ಹೊಸ ಕಾಮಗಾರಿಗಳಿಗೆ ಚಾಲನೆ ನೀಡುತ್ತಿಲ್ಲ. ಜಿಲ್ಲೆಯನ್ನು ಮರಳು ಮಾಫಿಯಾ ನಿಯಂತ್ರಿಸುತ್ತಿದ್ದು, ಸಾರ್ವಜನಿಕರು ದೂರು ನೀಡಿದರೆ ಜಿಲ್ಲಾಧಿಕಾರಿಗಳು, ಸಚಿವರು ಕ್ರಮಕೈಗೊಳ್ಳುತ್ತಿಲ್ಲ. ಗಣಿ ಇಲಾಖೆಯ ಅಧಿಕಾರಿ ನಾಗೇಂದ್ರರನ್ನು ವರ್ಗಾವಣೆ ಮಾಡಿರುವುದು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದಂತಾಗಿದೆ ಎಂದು ಪಾಲೆಮಾರ್ ಹೇಳಿದರು.

ಎಂಆರ್‌ಪಿಎಲ್ ರಸ್ತೆ ಅಭಿವೃದ್ಧಿಗೆ ಎಂಆರ್‌ಪಿಎಲ್ ಹಣ ನೀಡಲು ಮುಂದಾದರೂ ಪಾಲಿಕೆ ಜವಾಬ್ದಾರಿ ವಹಿಸಿಕೊಂಡಿಲ್ಲ. ನಗರ ಪಾಲಿಕೆಯಲ್ಲೂ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ಮುಡಾ ಅಧ್ಯಕ್ಷರ ಹುದ್ದೆ 3 ತಿಂಗಳಿನಿಂದ ಖಾಲಿಯಿದ್ದು ಪ್ರಾಧಿಕಾರದ ಅನೇಕ ಕೆಲಸ ಕಾರ್ಯಗಳು ಬಾಕಿಯುಳಿದಿವೆ. ಈ ಬಗ್ಗೆ ಜವಾಬ್ದಾರಿ ವಹಿಸಬೇಕಾದ ಜಿಲ್ಲಾಧಿಕಾರಿ ಮೂರು ತಿಂಗಳಿನಿಂದ ಸಭೆ ನಡೆಸದ ಕಾರಣ ಕಡತಗಳು ಬಾಕಿ ಉಳಿದಿವೆ ಎಂದು ಪಾಲೆಮಾರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಡಾ.ವೈ. ಭರತ್ ಶೆಟ್ಟಿ ಹಾಗೂ ಮಾಧ್ಯಮ ವಕ್ತಾರ ರಾಜೇಶ್ ಕೊಟ್ಟಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X