Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಾಲಿವುಡ್‌ನ ಮಾದಕ ಗಾಯಕ ಅರಿಜಿತ್ ಸಿಂಗ್...

ಬಾಲಿವುಡ್‌ನ ಮಾದಕ ಗಾಯಕ ಅರಿಜಿತ್ ಸಿಂಗ್ ವಿದಾಯ?

ವಾರ್ತಾಭಾರತಿವಾರ್ತಾಭಾರತಿ30 Nov 2016 2:16 PM IST
share
ಬಾಲಿವುಡ್‌ನ ಮಾದಕ ಗಾಯಕ ಅರಿಜಿತ್ ಸಿಂಗ್ ವಿದಾಯ?

2005ರ ಪ್ರಸಿದ್ಧ ರಿಯಾಲಿಟಿ ಶೋ ಫೇಮ್ ಗುರುಕುಲ್ ಗೆಲ್ಲಲು ಸಾಧ್ಯವಾಗದೆ ಇದ್ದರೂ ಅರ್ಜಿತ್ ಸಿಂಗ್ ಧೀರ್ಘ ಸಮಯದ ಕಠಿಣ ಪ್ರಯತ್ನದ ಬಳಿಕ ಯಶಸ್ಸನ್ನು ಕಂಡವರು. ಉದ್ಯಮದಲ್ಲಿ ನೆಲೆಯೂರಲು ಆರು ವರ್ಷಗಳಿಂದ ಪ್ರಯತ್ನ ಪಡುತ್ತಿದ್ದ ಅರ್ಜಿತ್ ಸಿಂಗ್ ಶಂಕರ್ ಎಹಸಾನ್ ಲಾಯ್ ಮತ್ತು ಪ್ರೀತಂ ಅವರು ಸಂಗೀತ ನಿರ್ದೇಶನ ನೀಡಿದ್ದ ಮರ್ಡರ್ 2ನಲ್ಲಿ ದೊಡ್ಡ ಬ್ರೇಕ್ ಪಡೆದಿದ್ದರು.

ಅವರ "ಫಿರ್ ಮೊಹಬ್ಬತ್" ಹಾಡು ಕ್ಷಣ ಮಾತ್ರದಲ್ಲಿ ಸೂಪರ್ ಹಿಟ್ ಆಯಿತು. ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ನಾನು ಧೀರ್ಘಕಾಲ ಹಾಡುತ್ತೇನೆ ಎಂದು ನನಗೆ ಅನಿಸುವುದಿಲ್ಲ. ಇದು ನನ್ನ ಕೊನೆಯ ವರ್ಷವೂ ಆಗಿರಬಹುದು. ಬಾಲಿವುಡ್‌ನಲ್ಲಿ ಪ್ರತೀ ಐದರಿಂದ ಏಳು ವರ್ಷಗಳ ಅವಧಿಯಲ್ಲಿ ಹೊಸ ಗಾಯಕರು ಹಳಬರನ್ನು ಹಿಂದೆ ದೂಡುತ್ತಾರೆ" ಎಂದು ಹೇಳಿದ್ದಾರೆ. ಆದರೆ ತಮ್ಮಂಥ ಹಾಡುಗಾರರು ಈ ಟ್ರೆಂಡ್ ಬದಲಿಸಬಹುದು ಎಂದೂ ಅವರು ಹೇಳಿದ್ದಾರೆ. ನಾನು ಈ ಪ್ರವೃತ್ತಿ ಬದಲಿಸಬಹುದು. ನಿರ್ದಿಷ್ಟ ಜನರ್‌ಗಳ ಮೇಲೆ ನಾನು ಕಠಿಣ ಶ್ರಮ ಪಟ್ಟಲ್ಲಿ ಧೀರ್ಘ ಕಾಲ ಉಳಿಯಬಹುದು. ಆ ಜನರ್‌ಗಳ ಹಾಡನ್ನು ಹಾಡುವ ಒಬ್ಬನೇ ವ್ಯಕ್ತಿ ನಾನಾಗಿದ್ದರೆ ಅದು ಸಾಧ್ಯ. ಆ ಮೂಲಕ ನಾನು ಅಸ್ತಿತ್ವ ಉಳಿಸಿಕೊಳ್ಳಬಹುದು ಎಂದಿದ್ದಾರೆ.

ಮಾಧ್ಯಮದಿಂದ ದೂರವಾಗಿರಲು ಕಾರಣ ಕೇಳಿದರೆ, "ನನಗೆ ಶಾಂತ ಜೀವನ ಇಷ್ಟ. ಹೆಚ್ಚು ಮಧ್ಯಪ್ರವೇಶ ಇಷ್ಟವಿಲ್ಲ. ಕಳೆದ ಮೂರು ವರ್ಷಗಳಲ್ಲಿ ನನ್ನ ಅಭಿಮಾನಿಗಳು ಹೆಚ್ಚಾಗಿದ್ದಾರೆ. ಆದರೆ ನಾನು ಸಂಭಾಷಣೆಯಲ್ಲಿ ಹೆಚ್ಚು ಭಾಗಿಯಾಗುವ ವ್ಯಕ್ತಿಯಲ್ಲ, ಶಾಂತ ಜೀವನ ಬಯಸುತ್ತೇನೆ ಎಂದು ಅವರು ತಿಳಿದುಕೊಳ್ಳುವುದು ಅಗತ್ಯ. ಸಾಮಾಜಿಕ ಮಾಧ್ಯಮಗಳ ಬೆಳವಣಿಗೆಯಿಂದ ಇದೂ ಕಷ್ಟವಾಗಿದೆ" ಎನ್ನುತ್ತಾರೆ.

ಕೃಪೆ: www.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X