Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯಾದ ಅಲೆಪ್ಪೊದಿಂದ ಸಾವಿರಾರು ಮಂದಿ...

ಸಿರಿಯಾದ ಅಲೆಪ್ಪೊದಿಂದ ಸಾವಿರಾರು ಮಂದಿ ಪಲಾಯನ

ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿ

ವಾರ್ತಾಭಾರತಿವಾರ್ತಾಭಾರತಿ30 Nov 2016 9:47 PM IST
share
ಸಿರಿಯಾದ   ಅಲೆಪ್ಪೊದಿಂದ ಸಾವಿರಾರು ಮಂದಿ ಪಲಾಯನ

ಜಿನೇವ, ನ. 30: ಸಿರಿಯದಲ್ಲಿ ಬಂಡುಕೋರರ ನಿಯಂತ್ರಣದಲ್ಲಿರುವ ಪೂರ್ವ ಅಲೆಪ್ಪೊದ ಪ್ರದೇಶಗಳ ಮೇಲಿನ ದಾಳಿಯನ್ನು ಸರಕಾರಿ ಸೈನಿಕರು ತೀವ್ರಗೊಳಿಸಿದ ಬಳಿಕ, ರವಿವಾರದಿಂದೀಚೆಗೆ ಸುಮಾರು 20,000 ಮಂದಿ ಅಲ್ಲಿಂದ ಪಲಾಯನಗೈದಿದ್ದಾರೆ ಎಂದು ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿ (ಐಸಿಆರ್‌ಸಿ) ಹೇಳಿದೆ.

ರೋಗಪೀಡಿತರು ಮತ್ತು ಗಾಯಾಳುಗಳನ್ನು ಹೊರ ಸಾಗಿಸಲು ತಾನು ಸಿದ್ಧವಾಗಿರುವುದಾಗಿ ಅಂತಾರಾಷ್ಟ್ರೀಯ ನೆರವು ಸಂಸ್ಥೆ ಹೇಳಿದೆ. ಮುತ್ತಿಗೆಗೊಳಗಾದ ಪೂರ್ವ ಭಾಗದಿಂದ ನಾಗರಿಕರನ್ನು ಸುರಕ್ಷಿತವಾಗಿ ಹೊರಸಾಗಿಸಲು ಅವಕಾಶ ನೀಡುವಂತೆ ತಾನು ಕರೆ ನೀಡಿರುವುದಾಗಿ ಅದು ತಿಳಿಸಿದೆ.

ಪೂರ್ವ ಅಲೆಪ್ಪೊಗೆ ಹೋಗಲು ತನಗೆ ಅವಕಾಶ ನೀಡಬೇಕು ಎಂಬುದಾಗಿ ಐಸಿಆರ್‌ಸಿ ಮತ್ತೊಮ್ಮೆ ಕೋರಿಕೆ ಸಲ್ಲಿಸಿದೆ. ಅಲ್ಲಿಗೆ ಆಹಾರ, ಔಷಧಗಳು ಮತ್ತು ಇತರ ಪರಿಹಾರ ಸಾಮಗ್ರಿಗಳನ್ನು ಸಾಗಿಸಲು ಎಪ್ರಿಲ್ ಬಳಿಕ ಅದಕ್ಕೆ ಸಾಧ್ಯವಾಗಿಲ್ಲ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಬಂಡುಕೋರರನ್ನು ಅಲೆಪ್ಪೊದ ಹೊರಗೆ ಅಟ್ಟುವ ಗುರಿಯನ್ನು ಸಿರಿಯ ಮತ್ತು ಅದರ ಮಿತ್ರಪಕ್ಷಗಳು ಹೊಂದಿವೆ ಎಂದು ಸಿರಿಯ ಸರಕಾರದ ಪರವಾಗಿರುವ ಸೇನಾ ಒಕ್ಕೂಟದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಲೆಪ್ಪೊದಲ್ಲಿ ಇತ್ತೀಚಿನ ದಿನಗಳಲ್ಲಿ ಸರಕಾರಿ ಪಡೆಗಳು ಭಾರೀ ಯಶಸ್ಸುಗಳನ್ನು ಪಡೆದುಕೊಂಡು ಮುನ್ನುಗ್ಗುತ್ತಿವೆ.

‘‘ಸಂಘರ್ಷ ಮುಗಿಯುವ ಯಾವುದೇ ಸೂಚನೆಯೂ ಇಲ್ಲದೆ, ವಾಸ್ತವಿಕ ಶಾಂತಿ ನೆಲೆಸುವ ನಿರೀಕ್ಷೆಯೂ ಇಲ್ಲದೆ, ಸಾವಿರಾರು ನಾಗರಿಕರು ಬದುಕುಳಿಯುವುದಕ್ಕಾಗಿ ಭಾರಿ ಹೋರಾಟವನ್ನೇ ಮಾಡುತ್ತಿದ್ದಾರೆ’’ ಎಂದು ಸಿರಿಯದಲ್ಲಿ ಐಸಿಆರ್‌ಸಿ ನಿಯೋಗದ ಮುಖ್ಯಸ್ಥೆ ಮರಿಯಾನ್ ಗ್ಯಾಸರ್ ಹೇಳಿದ್ದಾರೆ.

ಸರಕಾರಿ ನಿಯಂತ್ರಣದ ಪಶ್ಚಿಮ ಅಲೆಪ್ಪೊದಲ್ಲಿ ವಾಸಿಸುತ್ತಿರುವ ಹೊಸದಾಗಿ ನಿರ್ವಸಿತರಾದವರ ಶಿಬಿರಗಳಿಗೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

‘‘ಅಗತ್ಯಗಳು ಬೆಟ್ಟದಷ್ಟಿವೆ. ಈಗ ಚಾಲ್ತಿಯಲ್ಲಿರುವ ಕಾಳಗ ಮತ್ತು ಅಭದ್ರತೆಯು ನೆರವು ಪೂರೈಕೆ ಮತ್ತು ದುರಸ್ತಿ ಕಾರ್ಯಗಳಿಗೆ ಕಂಟಕವಾಗಿದೆ’’ ಎಂದರು.

ಐಸಿಆರ್‌ಸಿ ಮತ್ತು ಸಿರಿಯನ್ ಅರಬ್ ರೆಡ್ ಕ್ರೆಸೆಂಟ್ (ಎಸ್‌ಎಆರ್‌ಸಿ)ಗಳು ನಿರಾಶ್ರಿತರಿಗೆ ನೀರು ಒದಗಿಸಲು ಬಾವಿಗಳನ್ನು ತೋಡುತ್ತಿವೆ ಎಂದು ಮರಿಯಾನ್ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಪಶ್ಚಿಮ ಅಲೆಪ್ಪೊದಲ್ಲಿ ಸಂಘರ್ಷ ಪೀಡಿತ ಪ್ರದೇಶಗಳಿಂದ 40,000ಕ್ಕೂ ಅಧಿಕ ಮಂದಿ ಪಲಾಯನಗೈದಿದ್ದಾರೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X