Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಾರ್ಲ್‌ಸನ್‌ಗೆ ಹ್ಯಾಟ್ರಿಕ್ ಪ್ರಶಸ್ತಿ

ಕಾರ್ಲ್‌ಸನ್‌ಗೆ ಹ್ಯಾಟ್ರಿಕ್ ಪ್ರಶಸ್ತಿ

ವಿಶ್ವ ಚೆಸ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ1 Dec 2016 11:06 PM IST
share
ಕಾರ್ಲ್‌ಸನ್‌ಗೆ ಹ್ಯಾಟ್ರಿಕ್ ಪ್ರಶಸ್ತಿ

ನ್ಯೂಯಾರ್ಕ್, ಡಿ.1: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಸತತ ಮೂರನೆ ಬಾರಿ ಪ್ರಶಸ್ತಿ ಜಯಿಸಿದ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್ ವಿಶ್ವ ಚದುರಂಗದಾಟದಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದ್ದಾರೆ.

ಟೈ-ಬ್ರೇಕ್‌ನಲ್ಲಿ ಎದುರಾಳಿ ರಶ್ಯದ ಸೆರ್ಜಿ ಕಾರ್ಯಕಿನ್‌ರನ್ನು ಮಣಿಸಿದ ಕಾರ್ಲ್‌ಸನ್ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಹ್ಯಾಟ್ರಿಕ್ ಪ್ರಶಸ್ತಿ ಜಯಿಸಿದ್ದಾರೆ. ಈ ಗೆಲುವಿನ ಮೂಲಕ ಕಾರ್ಲ್‌ಸನ್ ಚೆಸ್ ದಂತಕತೆ ಗ್ಯಾರಿ ಕಾಸ್ಪರೊವ್ ಸಾಧನೆ ಸರಿಗಟ್ಟುವತ್ತ ಹೆಜ್ಜೆ ಇಟ್ಟಿದ್ದಾರೆ. ಕಾಸ್ಪರೊವ್ 15 ವರ್ಷಗಳ ಕಾಲ ಚೆಸ್‌ನಲ್ಲಿ ಪಾರಮ್ಯ ಸಾಧಿಸಿದ್ದರು.

ಬುಧವಾರ ಇಲ್ಲಿ ವಿಶ್ವ ಚೆಸ್ ಕಿರೀಟಕ್ಕಾಗಿ ನಡೆದ ಹಣಾಹಣಿ ನಾಟಕೀಯ ಟೈ-ಬ್ರೇಕ್‌ನಲ್ಲಿ ಕೊನೆಗೊಂಡಿತು. 26ರ ಪ್ರಾಯದ ಇಬ್ಬರು ಚೆಸ್‌ಪಟುಗಳು ಹೆಚ್ಚುವರಿ ಸಮಯದಲ್ಲಿ ಸಮಬಲ ಹೋರಾಟ ನೀಡಿದರು.

ಬ್ಲಿಝ್ ಮಾದರಿಯ ಚೆಸ್‌ನಲ್ಲಿ 2010ರಿಂದ ನಂ.1 ಸ್ಥಾನದಲ್ಲಿರುವ ಕಾರ್ಲ್‌ಸನ್ ಪ್ರಶಸ್ತಿ ಫೇವರಿಟ್ ಆಗಿ ಗುರುತಿಸಿಕೊಂಡಿದ್ದರು. ನಾರ್ವೆಯ ಕಾರ್ಲ್‌ಸನ್ ಈ ವರ್ಷ ಹಲವು ಬ್ಲಿಝ್ ಟೂರ್ನಿಯನ್ನು ಆಡಿದ್ದು, ಅಕ್ಟೋಬರ್‌ನಲ್ಲಿ ಅಮೆರಿಕದ ಗ್ರಾಂಡ್ ಮಾಸ್ಟರ್ ಹಿಕರು ನಕಮುರಾರನ್ನು ಮಣಿಸಿದ್ದರು.

ಕಾರ್ಲ್‌ಸನ್ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್(ಫಿಡೆ) 2013 ಹಾಗೂ 2014ರಲ್ಲಿ ಆಯೋಜಿಸಿದ್ದ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವಿಶ್ವನಾಥನ್ ಆನಂದ್‌ರನ್ನು ಸೋಲಿಸಿ ಚಾಂಪಿಯನ್‌ಶಿಪ್ ಕಿರೀಟ ಧರಿಸಿದ್ದರು.

 12ರ ಹರೆಯದಲ್ಲಿ ಚೆಸ್ ಗ್ರಾಂಡ್‌ಮಾಸ್ಟರ್ ಆಗಿರುವ ರಶ್ಯದ ಸೆರ್ಜಿ ಕಾರ್ಯಕನ್ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ತಲುಪಿ ನಿರೀಕ್ಷೆಗೂ ಮೀರಿ ಪ್ರದರ್ಶನ ನೀಡಿದ್ದರು.

ಚೆಸ್ ಸ್ಪರ್ಧೆಯಲ್ಲಿ ಆರಂಭದಲ್ಲಿ ವಿನ್ನರ್ ಹಾಗೂ ರನ್ನ್ರರ್ ಅಪ್‌ಗೆ ಬಹುಮಾನ ಮೊತ್ತ ಕ್ರಮವಾಗಿ 600,000 ಯುರೋ ಹಾಗೂ 400,000 ಯುರೋ ಎಂದು ನಿಗದಿಯಾಗಿತ್ತು. ಆದರೆ, ಫೈನಲ್ ಪಂದ್ಯ ಹೆಚ್ಚುವರಿ ಸಮಯಕ್ಕೆ ವಿಸ್ತರಣೆಯಾದ ಕಾರಣ ವಿಜೇತರಿಗೆ 550,000 ಹಾಗೂ ರನ್ನರ್ ಅಪ್‌ಗೆ 450,000 ಯುರೋ ನೀಡಲು ನಿರ್ಧರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X