Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟಿನ ಏಟು: ನಿರ್ಮಾಣ ಕಾಮಗಾರಿ...

ನೋಟಿನ ಏಟು: ನಿರ್ಮಾಣ ಕಾಮಗಾರಿ ನಿಲ್ಲಿಸಿದ ಬಸ್ತಾರ್ ಕಾರ್ಮಿಕರು!

ವಾರ್ತಾಭಾರತಿವಾರ್ತಾಭಾರತಿ3 Dec 2016 6:54 PM IST
share
ನೋಟಿನ ಏಟು: ನಿರ್ಮಾಣ ಕಾಮಗಾರಿ ನಿಲ್ಲಿಸಿದ ಬಸ್ತಾರ್ ಕಾರ್ಮಿಕರು!

ರಾಯ್ಪುರ, ಡಿ.3: ನಕ್ಸಲೀಯರ ಪ್ರಬಲ ನೆಲೆಯಾಗಿರುವ, ಛತ್ತೀಸ್‌ಗಡದ ಬಸ್ತಾರ್‌ನ ನಿರ್ಮಾಣ ಕಾರ್ಮಿಕರು ನೋಟು ನಿಷೇಧದಿಂದಾಗಿ ಒದ್ದಾಡುವಂತಾಗಿದೆ. ಈ ದುರ್ಗಮ ಪ್ರದೇಶಗಳಲ್ಲಿ ರಸ್ತೆ ಹಾಗೂ ಸೇತುವೆ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಹಣದ ಸೀಮಿತ ಲಭ್ಯತೆಯಿಂದ ತೊಂದರೆಗೊಳಗಾಗಿದ್ದಾರೆ.

35ರ ಹರೆಯದ ಶಾಮ್ಲು ರಾಮ್‌ನಾಗ್ ಎಂಬಾತ 10-12 ಮಂದಿ ಇತರ ಕಾರ್ಮಿಕರೊಂದಿಗೆ ಛತ್ತೀಸ್‌ಗಡದ ಟೋಂಗ್ಪಾಲ್ ಗ್ರಾಮದಲ್ಲಿ ಸೇತುವೆಯೊಂದನ್ನು ನಿರ್ಮಿಸುತ್ತಿದ್ದಾನೆ. ಆತ 7 ಮಂದಿಯ ತನ್ನ ಕುಟುಂಬಕ್ಕೆ ಅನ್ನ ಹಾಕಲು ಹೆಣಗಾಡುತ್ತಿದ್ದಾನೆ. ನೊಟು ನಿಷೇಧದ ಬಳಿಕ ರಾಮ್‌ನಾಗ್‌ಗೆ ಆತನ ದಿನಗೂಲಿ ರೂ. 200 ದೊರೆಯುತ್ತಿಲ್ಲ. ಮೂರು ವಾರಗಳಿಂದ ಅವನು ದಿನಕ್ಕೆ ರೂ. 35ರಲ್ಲೇ ದಿನ ದೂಡಿದ್ದಾನೆ. ಉಳಿದ ಹಣ ಮತ್ತೆ ನೀಡಲಾಗುವುದೆಂಬ ಒಣ ಭರವಸೆ ಆತನಿಗೆ ದೊರೆತಿದೆ.

ಈ ಹಿಂದೆ ತಮಗೆ ದಿನಾಲೂ ಸಂಬಳ ಸಿಗುತ್ತಿತ್ತು. ಆದರೆ, ಮೂರು ವಾರಗಳಿಂದ ಸಮಸ್ಯೆ ಎದುರಾಗಿದೆ. ನಗದಿನ ಕೊರತೆಯಿರುವುದರಿಂದ ತಮಗೆ ಬಾಕಿ ಸಂಬಳ ದೊರೆಯುತ್ತದೋ ಇಲ್ಲವೋ ಗೊತ್ತಿಲ್ಲ. ಸಂಬಳ ಬಾಕಿಗೆ ಕೆಲಸ ಮಾಡಲು ಸಾಧ್ಯವಾಗದೆ ಅರ್ಧದಷ್ಟು ಕಾರ್ಮಿಕರು ನಿರ್ಮಾಣ ನಿವೇಶನಕ್ಕೆ ಬರುತ್ತಿಲ್ಲವೆಂದು ರಾಮ್‌ನಾಗ್ ತಿಳಿಸಿದ್ದಾನೆ.

ರಸ್ತೆ ನಿರ್ಮಾಣ ಕಾರ್ಮಿಕರ ಸಂಖ್ಯೆಯೂ ಭಾರೀ ಕುಸಿದಿದೆ.

ನೋಟು ರದ್ದತಿಯ ಬಳಿಕ ತಮಗೆ ಭಾರೀ ತೊಂದರೆಯಾಗಿದೆ. ತಮ್ಮ ಶೇ.50ರಷ್ಟು ಕಾರ್ಮಿಕರು ಬಾಧಿತರಾಗಿದ್ದಾರೆ. ನೋಟು ರದ್ದತಿಯಿಂದಾಗಿ ಹಲವು ಯೋಜನೆಗಳನ್ನು ಆರಂಭಿಸಲೇ ಸಾಧ್ಯವಾಗಿಲ್ಲ. ನಗದು ಹಿಂದೆಗೆತ ಮಿತಿಯನ್ನು ಹೆಚ್ಚಿಸುವಂತೆ ತಾವು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇವೆ. ಯೋಜನೆಗಳ ಅಂತಿಮ ಗಡುವನ್ನು 3 ತಿಂಗಳು ಮುಂದೂಡುವಂತೆಯೂ ತಾವು ವಿನಂತಿಸಿದ್ದೇವೆಂದು ಗುತ್ತಿಗೆದಾರ ಹಾಗೂ ಭಾರತೀಯ ನಿರ್ಮಾಣಕಾರರ ಸಂಘದ ರಾಜ್ಯಾಧ್ಯಕ್ಷ ಎನ್.ಆರ್.ಪರಾಶರ್ ಹೇಳಿದ್ದಾರೆ.

ಗುತ್ತಿಗೆದಾರರು ಬಿಜೆಪಿ ಸರಕಾರದ ಉತ್ತರವನ್ನು ಕಾಯುತ್ತಿದ್ದಾರೆ.

ಈ ಹಿಂದೆ ಗುತ್ತಿಗೆದಾರರು ಕಾರ್ಮಿಕರಿಗೆ ಸರಿಯಾಗಿ ಸಂಬಳ ಪಾವತಿಸುತ್ತಿಲ್ಲವೆಂಬ ದೂರುಗಳಿದ್ದವು. ಈ ಯೋಜನೆಯಿಂದ ಸರಕರವು ಪ್ರಕ್ರಿಯೆಯನ್ನು ನಗದು ರಹಿತವಾಗಿಸಲಿದೆ ಹಾಗೂ ಭವಿಷ್ಯದಲ್ಲಿ ವೇತನವು ನೇರವಾಗಿ ಕಾರ್ಮಿಕರ ಖಾತೆಗಳಿಗೆ ಬೀಳಲಿದೆಯೆಂದು ಛತ್ತೀಸ್‌ಗಡದ ಬಿಜೆಪಿ ವಕ್ತಾರ ಸಂಜಯ್ ಶ್ರೀವಾಸ್ತವ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X