Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾತಿ, ಧರ್ಮ ಮೀರಿದ ಮೌಲ್ಯಗಳ ಬರಹ ಅಗತ್ಯ...

ಜಾತಿ, ಧರ್ಮ ಮೀರಿದ ಮೌಲ್ಯಗಳ ಬರಹ ಅಗತ್ಯ : ಅಬ್ದುಲ್ ಹೈ ತೋರಣಗಲ್ಲು

ಸುವಿಚಾರ ಪ್ರಕಾಶನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ3 Dec 2016 6:56 PM IST
share
ಜಾತಿ, ಧರ್ಮ ಮೀರಿದ ಮೌಲ್ಯಗಳ ಬರಹ ಅಗತ್ಯ : ಅಬ್ದುಲ್ ಹೈ ತೋರಣಗಲ್ಲು

ಪುತ್ತೂರು,ಡಿ.3: ಯುವ ಬರಹಗಾರರಿಂದ ಜಾತಿ, ಧರ್ಮ ಮೀರಿದ ಮೌಲ್ಯಗಳ ಬರಹಗಳು ಹೊರಬಂದಾಗ ಬರವಣಿಗೆಯ ಮಹತ್ವ ಉಳಿಯುತ್ತದೆ ಎಂದು ಹಿರಿಯ ಸಾಹಿತಿ ಅಬ್ದುಲ್ ಹೈ ತೋರಣಗಲ್ಲು ಬಳ್ಳಾರಿ ಹೇಳಿದರು.

ಅವರು ಶನಿವಾರ ಸಂಜೆ ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ನಡೆದ ಸುವಿಚಾರ ಪ್ರಕಾಶನ ಇದರ ಉದ್ಘಾಟನಾ ಸಮಾರಂಭ, ಪುಸ್ತಕ ಬಿಡುಗಡೆ, ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಉಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

 ಬರಹದ ಮೂಲ ಮತ್ತು ವಸ್ತುಗಳು ಸಮಾಜದ ಪರವಾಗಿರಬೇಕು ಎಂದ ಅವರು ಕನ್ನಡ ಸಾಹಿತ್ಯ ಕೃಷಿಗಾಗಿ ಹುಟ್ಟಿಕೊಂಡಿರುವ ಸುವಿಚಾರ ಪ್ರಕಾಶನದಲ್ಲಿ ಎಲ್ಲರನ್ನೂ ಮನುಷ್ಯರನ್ನಾಗಿ ರೂಪಿಸುವ ಪುಸ್ತಕಗಳು ಹುಟ್ಟಿಕೊಳ್ಳಬೇಕು. ಬರವಣಿಗೆಯ ಮಹತ್ವವನ್ನು ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಮುಖ್ಯ ಭಾಷಣ ಮಾಡಿದ ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ ಅವರು ಬರಹಗಾರನ ಆತ್ಮಸಾಕ್ಷಿಗೆ ಪೂರಕವಾಗಿ ನಿರ್ಭೀತ ಬರಹಗಳು ಮೂಡಿ ಬರಬೇಕು. ನಮ್ಮ ಭಾವನೆಗಳನ್ನು ಅದುಮಿಟ್ಟು ಇನ್ಯಾರದ್ದೋ ಭಾವನೆಯನ್ನು ವ್ಯಕ್ತಪಡಿಸುವುದು ಅಪಾಯ. ಓದಬೇಕಾದ್ದನ್ನೇ ಬರೆಯಬೇಕಾದದ್ದು ಅಗತ್ಯ ಎಂದರು. ಸನ್ಮಾರ್ಗ ವಾರಪತ್ರಿಕೆಯ ಸಂಪಾದಕ ಎ.ಕೆ.ಕುಕ್ಕಿಲ ಮಾತನಾಡಿ ಅಕ್ಷರಗಳಿಗೆ ಭಾವನೆಗಳನ್ನು ಹೊರ ಹಾಕುವ ಸಾಮರ್ಥ್ಯವಿದೆ. ಈ ಸಾಮರ್ಥ್ಯವೇ ಕೃತಿ ರಚನೆಗೆ ಪೂರಕವಾಗಿದೆ. ಹೆಚ್ಚು ಓದುವುದರಿಂದರಿಂದ ಪ್ರಜ್ಞಾವಂತಿಗೆ ಹೆಚ್ಚಾಗುತ್ತದೆ. ಸಾಹಿತ್ಯ ವಲಯದಲ್ಲಿ ಕೊರತೆಯಾಗಿರುವ ವೈಚಾರಿಕ ಬರಹಗಳು ಯುವ ಬರಹಗಾರರಿಂದ ಹೊರಹೊಮ್ಮಬೇಕಾಗಿದೆ ಎಂದರು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಸುವಿಚಾರ ಪ್ರಕಾಶನ ಹೊರತಂದಿರುವ ‘ಜೇನುಗೂಡು’ ಪ್ರಥಮ ಪುಸ್ತಕವನ್ನು ಕವಿ ಅಬ್ದುಲ್ ಸಮದ್ ಬಾವಾ ಹಾಜಿ ಬಿಡುಗಡೆಗೊಳಿಸಿದರು. ಬಹುಭಾಷಾ ಸಾಹಿತಿ ಮಹಮ್ಮದ್ ಬಡ್ಡೂರು ಪುಸ್ತಕ ಪರಿಚಯ ಮಾಡಿದರು.

ಬೊಳುವಾರು ಸಾಂಸ್ಕೃತಿಕ ಕಲಾ ಕೇಂದ್ರದ ಅಧ್ಯಕ್ಷ ಚಿದಾನಂದ ಕಾಮತ್ ಕಾಸರಗೋಡು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬಶೀರ್ ಅಹ್ಮದ್ ಕಿನ್ಯ, ಪೀಸ್ ಆಂಡ್ ಅವಾರ್ನೆಸ್ ಟ್ರಸ್ಟ್‌ನ ಅಲ್ತಾಫ್ ಬಿಳಗುಳ, ಸವಣೂರು ಸಾಹಿತ್ಯ ವೇದಿಕೆಯ ಉಪಾಧ್ಯಕ್ಷ ಹೈದರ್ ಆಲಿ ಐವತ್ತೊಕ್ಲು, ತುಳುನಾಡು ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಸನ್ ಮಾಡೂರು, ಜಯಕರ್ನಾಟಕ ತಾಲೂಕು ಕಾರ್ಯಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಎಚ್. ಆರ್. ಅರ್ಕುಲ ಉಪಸ್ಥಿತರಿದ್ದರು. ಸುವಿಚಾರ ಪ್ರಕಾಶನದ ಸಂಚಾಲಕ ಹಕೀಂ ಪದಡ್ಕ ಸ್ವಾಗತಿಸಿದರು. ಹಸನ್ಮುಖಿ ಬಡಗನ್ನೂರು ವಂದಿಸಿದರು. ಕೆ.ಬಿ. ಮಹಮ್ಮದ್ ಗಝ್ಝಾಲಿ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X