Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಡವಾಗಿ ಬಂದ ಪ್ರಯಾಣಿಕರಿಗಾಗಿ ಎರಡು ಗಂಟೆ...

ತಡವಾಗಿ ಬಂದ ಪ್ರಯಾಣಿಕರಿಗಾಗಿ ಎರಡು ಗಂಟೆ ವಿಮಾನಯಾನ ವಿಳಂಬ

ವಾರ್ತಾಭಾರತಿವಾರ್ತಾಭಾರತಿ3 Dec 2016 7:46 PM IST
share
ತಡವಾಗಿ ಬಂದ ಪ್ರಯಾಣಿಕರಿಗಾಗಿ ಎರಡು ಗಂಟೆ ವಿಮಾನಯಾನ ವಿಳಂಬ

ಮುಂಬೈ, ಡಿ.3: ತಡವಾಗಿ ಆಗಮಿಸಿದ ಪ್ರಯಾಣಿಕರ ಅನುಕೂಲಕ್ಕಾಗಿ ವಿಮಾನಯಾನವನ್ನು ಎರಡು ಗಂಟೆ ವಿಳಂಬಗೊಳಿಸಿದ ಘಟನೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಭೋಪಾಲಕ್ಕೆ ತೆರಳಬೇಕಿದ್ದ ಜೆಟ್ ಏರ್‌ವೇಸ್ ವಿಮಾನ ಮುಂಬೈ ವಿಮಾನ ನಿಲ್ದಾಣದಿಂದ ಮುಂಜಾನೆ 5.55ಕ್ಕೆ ಪ್ರಯಾಣ ಆರಂಭಿಸಬೇಕಿತ್ತು. ಇನ್ನೇನು ಒಂದು ನಿಮಿಷದಲ್ಲಿ ವಿಮಾನ ಆಗಸಕ್ಕೆ ನೆಗೆಯುತ್ತದೆ ಎಂಬ ಸಂದರ್ಭದಲ್ಲಿ ತಡವಾಗಿ ಆಗಮಿಸುತ್ತಿರುವ ಕೆಲವು ಪ್ರಯಾಣಿಕರಿಗಾಗಿ ವಿಮಾನಯಾನ ಸ್ವಲ್ಪ ಹೊತ್ತು ವಿಳಂಬಗೊಳ್ಳುತ್ತದೆ ಎಂದು ಪ್ರಯಾಣಿಕರಿಗೆ ತಿಳಿಸಲಾಯಿತು. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ತಂಡವೊಂದರ ಕೆಲ ಪ್ರಯಾಣಿಕರು ಅದಾಗಲೇ ವಿಮಾನದಲ್ಲಿದ್ದರೆ ಕೆಲವರು ವಿಳಂಬವಾಗಿ ಆಗಮಿಸಿದ್ದರು.

 ವಿಳಂಬವಾಗಿ ಆಗಮಿಸಿದ 17 ಪ್ರಯಾಣಿಕರಿಗೆ ವಿಮಾನದ ಸಿಬ್ಬಂದಿಗಳು ಪ್ರವೇಶ ನಿರಾಕರಿಸಿದ್ದರು. ಈ ವೇಳೆ ವಿಮಾನದಲ್ಲಿದ್ದ ಇವರ ಮಿತ್ರರು ತಕರಾರು ಎಬ್ಬಿಸಿದರು. 17 ಪ್ರಯಾಣಿಕರು ಬಂದರೆ ಮಾತ್ರ ತಾವು ಪ್ರಯಾಣಿಸುತ್ತೇವೆ ಎಂದು ತಗಾದೆ ತೆಗೆದರು.ಅಲ್ಲದೆ ವಿಮಾನದ ಬಾಗಿಲಲ್ಲಿ ಅಡ್ಡನಿಂತು ಬಾಗಿಲು ಮುಚ್ಚದಂತೆ ತಡೆದರು. ಈ ವೇಳೆಗಾಗಲೇ ವಿಮಾನದ ಸೀಟುಗಳು ಭರ್ತಿಯಾಗಿದ್ದವು. ನಿರ್ವಾಹವಿಲ್ಲದೆ ವಿಮಾನದ ಸಿಬ್ಬಂದಿಗಳು, ಈ ಹದಿನೇಳು ಪ್ರಯಾಣಿಕರಿಗಾಗಿ ವಿಮಾನದಲ್ಲಿರುವ ಪ್ರಯಾಣಿಕರು ಸೀಟು ಬಿಟ್ಟುಕೊಡುವಂತೆ ಅನೌನ್ಸ್ ಮಾಡಿದರು.

 ಸ್ವಯಂಪ್ರೇರಿತರಾಗಿ ಸೀಟು ಬಿಟ್ಟುಕೊಟ್ಟು ಸಂಜೆ ವೇಳೆ ಹೊರಡಲಿರುವ ಮತ್ತೊಂದು ವಿಮಾನದಲ್ಲಿ ಪ್ರಯಾಣಿಸಲು ಸಿದ್ದರಿರುವ ಪ್ರಯಾಣಿಕರಿಗೆ 10 ಸಾವಿರ ರೂ. ಪುರಸ್ಕಾರ ಕೊಡುವುದಾಗಿ ಸಿಬ್ಬಂದಿಗಳು ಘೋಷಿಸಿದರು. ಇದಕ್ಕೆ ಸ್ಪಂದಿಸಿದ ಐವರು ಪ್ರಯಾಣಿಕರು ಸೀಟು ಬಿಟ್ಟುಕೊಟ್ಟರು. ಆದರೂ ಉಳಿದ 12 ಪ್ರಯಾಣಿಕರಿಗೆ ಸ್ಥಳಾವಕಾಶ ಒದಗಿಸಲು ಮತ್ತಷ್ಟು ಕಾಯುವ ನಿರ್ಧಾರಕ್ಕೆ ಬರಲಾಯಿತು. ಕೆಲ ಪ್ರಯಾಣಿಕರು ಪೊಲೀಸರಿಗೆ ದೂರು ನೀಡುವಂತೆ ಕೋರಿದಾಗ ವಿಮಾನದ ಸಿಬ್ಬಂದಿಗಳು ನಿರಾಕರಿಸಿದರು.

  ಬೆಳಿಗ್ಗೆ 7.45ರವರೆಗೆ ಕಾಯಲಾಯಿತು. ಈ ವೇಳೆ ತಾಳ್ಮೆ ಕಳೆದುಕೊಂಡ ಪ್ರಯಾಣಿಕರು ಗದ್ದಲ ಆರಂಭಿಸಿದಾಗ ಅಂತೂ ಬೆಳಿಗ್ಗೆ 8 ಗಂಟೆ ವೇಳೆಗೆ ವಿಮಾನ ‘ಟೇಕ್‌ಆಫ್’ ಆಯಿತು. ಈ ಪ್ರಕರಣದ ವಿಡಿಯೋ ದೃಶ್ಯಾವಳಿಯನ್ನು ಕೆಲ ಪ್ರಯಾಣಿಕರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾರೆ. ತಡವಾಗಿ ಬಂದ ಪ್ರಯಾಣಿಕರಿಗಾಗಿ ವಿಮಾನ ಯಾನವನ್ನೇ ಬರ್ಬೋಬರಿ ಎರಡು ಗಂಟೆ ಮುಂದೂಡಿದ ಘಟನೆ ಬಹುಷಃ ಇದೇ ಮೊದಲ ಬಾರಿ ನಡೆದಿದೆ ಎಂದು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮುಂಬೈಯ ಅದಿತಿ ಶ್ರೀವಾಸ್ತವ ತಿಳಿಸಿದ್ದಾರೆ.

ಇನ್ನೋರ್ವ ಪ್ರಯಾಣಿಕ ಪರೀಕ್ಷಿತ್ ರೆಡ್ಡಿ ಎಂಬವರು ಮರಣ ಹೊಂದಿದ ತನ್ನ ತಂದೆಯ ಪಾರ್ಥಿವ ಶರೀರದ ಅಂತಿಮ ದರುಶನಕ್ಕೆಂದು ಹೊರಟಿದ್ದರು. ವಿಮಾನಯಾನ ವಿಳಂಬದಿಂದ ಅನಿವಾರ್ಯವಾಗಿ ಇವರ ಜೊತೆ, ಇವರ ಕುಟುಂಬದವರೂ ಸಂಕಷ್ಟ ಪಡುವಂತಾಯಿತು.

 ಮಿತಿಗಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಸಿರುವ ಘಟನೆಗೆ ತಾಂತ್ರಿಕ ತೊಂದರೆಯೇ ಕಾರಣ ಎಂದು ಜೆಟ್ ಏರ್‌ವೇಸ್‌ನ ವಕ್ತಾರರು ತಿಳಿಸಿದ್ದಾರೆ.ಅಲ್ಲದೆ ತಡವಾಗಿ ಬಂದ ಕೆಲ ಪ್ರಯಾಣಿಕರು ನಂತರದ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ನೀಡಿದರೂ ಅದನ್ನು ನಿರಾಕರಿಸಿ ವಿಮಾನಯಾನಕ್ಕೆ ತಡೆ ಒಡ್ಡಿದರು. ಇದರಿಂದ ವಿಮಾನಯಾನ ವಿಳಂಬವಾಯಿತು ಹಾಗೂ ಪ್ರಯಾಣಿಕರಿಗೆ ತೊಂದರೆಯಾಯಿತು . ವಿಮಾನಯಾನ ನಿರಾಕರಿಸಲ್ಪಟ್ಟ ಪ್ರಯಾಣಿಕರಿಗೆ ನಿಯಮದಂತೆ ಪರಿಹಾರ ನೀಡಲಾಗುವುದು ಮತ್ತು ಟಿಕೆಟ್ ಬುಕ್ಕಿಂಗ್ ಸಂದರ್ಭ ಉಂಟಾದ ತಾಂತ್ರಿಕ ತೊಂದರೆ ನಿವಾರಿಸಲಾಗುವುದು ಎಂದು ಜೆಟ್ ಏರ್‌ವೇಸ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ನಿಯಮದಂತೆ, ವಿಮಾನ ಟೇಕ್‌ಆಫ್ ಆಗುವ 45 ನಿಮಿಷ ಮೊದಲು ಚೆಕ್ ಇನ್ ಕೌಂಟರ್‌ಗಳನ್ನು ಮುಚ್ಚಬೇಕು. ಈ ಕಾಲಮಿತಿ ಮೀರಿ ಬಂದ ಪ್ರಯಾಣಿಕರಿಗೆ ವಿಮಾನ ಏರಲು ಅವಕಾಶವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X