Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಳೆ ನೋಟುಗಳ ಮೂಲಕವೂ ಭರ್ಜರಿ ಪುಸ್ತಕ...

ಹಳೆ ನೋಟುಗಳ ಮೂಲಕವೂ ಭರ್ಜರಿ ಪುಸ್ತಕ ಮಾರಾಟ...!

ವಾರ್ತಾಭಾರತಿವಾರ್ತಾಭಾರತಿ3 Dec 2016 11:56 PM IST
share
ಹಳೆ ನೋಟುಗಳ ಮೂಲಕವೂ ಭರ್ಜರಿ ಪುಸ್ತಕ ಮಾರಾಟ...!

►ಹೊಸನೋಟುಗಳ ಕೊರತೆ

►ಚಿಲ್ಲರೆ ಸಮಸ್ಯೆ

ನೋಟು ನಿಷೇಧ ಸಾಹಿತ್ಯ ಸಮ್ಮೇಳನದ ಮೇಲೆ ತನ್ನ ತೀವ್ರ ಪರಿಣಾ ಮವನ್ನು ಬೀರಿದ್ದು, ಪುಸ್ತಕ ವ್ಯಾಪಾರಿಗಳು ಬಾಡಿದ ಮುಖದೊಂದಿಗೆ ಪುಸ್ತಕ ಪ್ರಿಯರನ್ನು ಎದುರಿಸಬೇಕಾಗಿದೆ. ಇರುವ ನೂರರ ನೋಟು ಗಳನ್ನು ತೆತ್ತು ಪುಸ್ತಕ ಕೊಳ್ಳಲು ಸಾಹಿತ್ಯಾಭಿ ಮಾನಿಗಳು ಹಿಂಜರಿಕೆ ತೋರುತ್ತಿರುವುದು, ಪುಸ್ತಕ ಮಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಸಂದರ್ಭದಲ್ಲೂ ಸಾಹಿತ್ಯಾಸಕ್ತರು ಪುಸ್ತಕ ಗಳ ಮೇಲೆ ತೋರುತ್ತಿರುವ ಅಭಿಮಾನವನ್ನು ತಿರಸ್ಕರಿಸುವಂತಿಲ್ಲ. ಆದರೆ ಎಂದಿನ ವ್ಯಾಪಾರ ಗಳು ನಮಗೆ ಸಿಗುತ್ತಿಲ್ಲ ಎಂದು ಓರ್ವ ಪುಸ್ತಕ ಮಳಿಗೆಯ ಮುಖ್ಯಸ್ಥರು ಹೇಳುತ್ತಾರೆ. ದಿನಕ್ಕೆ ಎರಡು ಸಾವಿರ ರೂ.ನಷ್ಟು ಮಾರಾಟವಾದರೆ ಅದೇ ಹೆಚ್ಚು ಎನ್ನುವಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಕೆಲವರು ಪ್ಲಾಸ್ಟಿಕ್ ಕಾರ್ಡ್‌ಗಳ ಮೂಲಕ ಹಣ ಪಾವತಿಸಲು ಇಚ್ಛಿಸುತ್ತಿದ್ದಾರೆ. ಆದರೆ ಅದಕ್ಕೆ ಬೇಕಾಗಿರುವ ವ್ಯವಸ್ಥೆ ನಮ್ಮಲ್ಲಿಲ್ಲ ಎಂದು ಅವರು ಖೇದ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ, ಕೆಲವು ಪ್ರತಿಷ್ಠಿತ ಪ್ರಕಾಶಕರು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳ ಮೂಲಕವೂ ಪುಸ್ತಕಗಳ ವ್ಯಾಪಾರವನ್ನು ನಡೆಸುತ್ತಿದ್ದಾರೆ. ನವಕರ್ನಾಟಕ, ಸಪ್ನಾದಂತಹ ಸಂಸ್ಥೆಗಳು ಇಲ್ಲಿ ಸೈಫ್ ಮೂಲಕ ಪುಸ್ತಕ ವ್ಯಾಪಾ ರವನ್ನು ಮಾಡುತ್ತಿವೆ. ಆದರೆ ರಾಯಚೂರಿ ನಂತಹ ಪ್ರದೇಶಗಳಲ್ಲಿ ಇಂಟರ್ನೆಟ್ ಕೈಕೊಡು ತ್ತಿರುವುದರಿಂದ ಯಶಸ್ವಿಯಾಗಿ ಕಾರ್ಡ್‌ಗಳ ಮೂಲಕ ವ್ಯಾಪಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಹಳೆ ನೋಟು ಚಲಾವಣೆ!
ಇದೇ ಸಂದರ್ಭದಲ್ಲಿ ಕೆಲವರು 500 ಮತ್ತು 1000ರೂ. ಹಳೆ ನೋಟುಗಳ ಜೊತೆಗೆ ಬಂದು ಪುಸ್ತಕ ವ್ಯಾಪಾರಕ್ಕಿಳಿಯುವುದೂ ಇದೆ ಎಂದು ಪ್ರಕಾಶಕರೊಬ್ಬರು ಹೇಳುತ್ತಾರೆ.

ನೂರರ ನಗದು ಗ್ರಾಹಕರಲ್ಲಿ ತೀರಾ ಕಡಿಮೆ ಇರುವುದರಿಂದ ಅವರು ಅದನ್ನು ನೀಡಲು ಹಿಂಜರಿಯುತ್ತಾರೆ. ಕೆಲವರು 2,000 ರೂ.ಚಿಲ್ಲರೆ ಗಾಗಿಯೇ ಪುಸ್ತಕಕೊಳ್ಳಲು ಬರುತ್ತಾರೆ. 200 ಅಥವಾ 300 ರೂ.ನ ಪುಸ್ತಕಗಳಿಗೆ 2,000 ರೂ. ಚಿಲ್ಲರೆ ನೀಡುವುದು ತುಂಬಾ ಕಷ್ಟವಾಗುತ್ತದೆ ಎಂದು ಅವರು ಗೋಳು ತೋಡಿಕೊಂಡಿದ್ದಾರೆ.


ಕೆಲವು ಸಣ್ಣ ಪುಟ್ಟ ಪ್ರಕಾಶಕರು ಹಳೆಯ ನೋಟುಗಳನ್ನು ತೆಗೆದುಕೊಂಡು ತಮ್ಮ ಪುಸ್ತಕ ಗಳನ್ನು ಮಾರುತ್ತಿರುವುದು ಕಂಡು ಬಂತು. 500 ರೂ. ಬೆಲೆಯ ಪುಸ್ತಕಗಳನ್ನು ಕೊಂಡರೆ ಹಳೆಯ ನೋಟುಗಳನ್ನು ತೆಗೆದುಕೊಳ್ಳುತ್ತೇವೆ ಎಂಬ ಆಫರ್‌ಗಳನ್ನು ಸಣ್ಣ ಪುಟ್ಟ ಪ್ರಕಾಶಕರು ನೀಡುತ್ತಿದ್ದಾರೆ. ಈ ಮೂಲಕ ತಮ್ಮ ಪುಸ್ತಕಗಳನ್ನು ಮಾರಾಟ ಮಾಡಲು ಅವರು ದಾರಿಯೊಂದನ್ನು ಕಂಡುಕೊಂಡಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿರುವ ಗ್ರಾಮೀಣ ಪ್ರದೇಶದ ಸಾಹಿತ್ಯಾಸಕ್ತರಲ್ಲಿ ನಾವು ಕಾರ್ಡ್‌ಗಳ ಮೂಲಕ ಪುಸ್ತಕಗಳನ್ನು ಮಾರು ವುದು ಅಷ್ಟು ಸುಲಭವಿಲ್ಲ. ಇದೇ ಸಂದರ್ಭ ದಲ್ಲಿ ಹಳೆ ನೋಟುಗಳ ಚಲಾವಣೆಗೆ ಅನುಕೂಲ ವಾಗುತ್ತದೆಯೆಂಬ ಕಾರಣಕ್ಕಾಗಿಯಾದರೂ ಕೆಲವರು ಪುಸ್ತಕ ಕೊಳ್ಳುತ್ತಿದ್ದಾರೆ ಎನ್ನುವುದು ಓರ್ವ ಪ್ರಕಾಶಕರ ಸಂತಸದ ಮಾತು.
ಹಳೆ ನೋಟುಗಳನ್ನು ಪಡೆದುಕೊಳ್ಳದೇ ಇದ್ದರೆ ಅಷ್ಟರಮಟ್ಟಿಗೂ ಪುಸ್ತಕಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ. ಅದಕ್ಕಿಂತ, ಹಳೆ ನೋಟುಗಳ ಮೂಲಕ ಒಂದಿಷ್ಟಾದರೂ ವ್ಯಾಪಾರ ಮಾಡುವುದು ವ್ಯಾವಹಾರಿಕ ದೃಷ್ಟಿ ಯಿಂದ ಲಾಭದಾಯಕ ಎಂದು ಅವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X