Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಸಭೆ ಆವರಣದಲ್ಲಿ ಮಹಾನ್ ಪುರುಷರ...

ವಿಧಾನಸಭೆ ಆವರಣದಲ್ಲಿ ಮಹಾನ್ ಪುರುಷರ ಸಂದೇಶಗಳನ್ನು ಬರೆಯಿಸಿ

ಸಂಸ್ಕೃತಿ ಮತ್ತು ರಾಜಕಾರಣ ಗೋಷ್ಠಿಯಲ್ಲಿ ಡಾ.ಮಲ್ಲಿಕಾ ಘಂಟಿ ಅಭಿಮತ

ವಾರ್ತಾಭಾರತಿವಾರ್ತಾಭಾರತಿ4 Dec 2016 12:04 AM IST
share
ವಿಧಾನಸಭೆ ಆವರಣದಲ್ಲಿ ಮಹಾನ್ ಪುರುಷರ ಸಂದೇಶಗಳನ್ನು ಬರೆಯಿಸಿ

ಸರಕಾರವು ಜನಪರ ಯೋಜನೆಗಳನ್ನು ಜಾರಿಗೆ ತರುವ ಸಂದರ್ಭದಲ್ಲಿ ದಿಗ್ಗಜ ಸಾಹಿತಿಗಳನ್ನು ಕರೆದು ಚರ್ಚಿಸಿ ಅವರು ನೀಡುವ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು; ಇದ್ಯಾವುದೂ ಆಗದ ಪರಿಣಾಮ ಯೋಜನೆಗಳೆಲ್ಲವು ಪೇಪರ್‌ನಲ್ಲಿಯೇ ಉಳಿಯುವಂತಾಗಿವೆ.
 ಡಾ.ಮಲ್ಲಿಕಾ ಘಂಟಿ, ಕನ್ನಡ ವಿವಿ ಕುಲಪತಿ

ಮಹಾನ್ ಪುರುಷರ ಸಂದೇಶಗಳು ಇಲ್ಲದೇ ವಿಧಾನಸೌಧ ಭಣಭಣವೆನ್ನುತ್ತಿದೆ ಎಂದು ತಮ್ಮದೇ ಉತ್ತರ ಕರ್ನಾಟಕ ಶೈಲಿಯ ಭಾಷೆಯಲ್ಲಿ ಹೇಳಿದ ಕನ್ನಡ ವಿವಿ ಕುಲಪತಿ ಡಾ.ಮಲ್ಲಿಕಾ ಘಂಟಿ ಅವರು, ವಿಧಾನಸೌಧದಲ್ಲಿ ಅದರ ಆವರಣದಲ್ಲಿ ಬಸವಶ್ವೇರರು ಸೇರಿದಂತೆ ಮಹಾನ್ ಪುರುಷರ, ಪರಂಪರೆ ಇತಿಹಾಸ ನೆನಪಿಸುವ ಸಂದೇಶಗಳನ್ನು ಬರೆಯಿಸಬೇಕು ಎಂದು ಅವರು ಹೇಳಿದರು.
ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆ ದಿನವಾದ ಶನಿವಾರ ನಡೆದ ಸಂಸ್ಕೃತಿ ಮತ್ತು ರಾಜಕಾರಣ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಮೂಲಕವಾದರೂ ವಿಧಾನಸೌಧದ ಒಳಗೆ ಪ್ರವೇಶಿಸುವವರಿಗೆ ಪರಂಪರೆ ಇತಿಹಾಸ, ಮಹಾನ್ ಪುರುಷರ ಸಂದೇಶಗಳು ತಿಳಿಸಿದಂತಾಗುತ್ತದೆ ಮತ್ತು ಅವರಲ್ಲಿ ಅಡಗಿರುವ ದೌರ್ಜನ್ಯ ಮತ್ತು ಕ್ರೌರ್ಯದ ಮನಸ್ಸು ಬದಲಾಯಿಸಲು ಸಹಕಾರಿಯಾಗುತ್ತದೆ ಹಾಗೂ ಕೆಲಸ ಮಾಡಲು ಪ್ರೇರೇಪಣೆ ಒದಗಿಸಿದಂತಾಗುತ್ತದೆ ಎಂದರು.
ಸರಕಾರವು ಜನಪರ ಯೋಜನೆಗಳನ್ನು ಜಾರಿಗೆ ತರುವ ಸಂದರ್ಭದಲ್ಲಿ ದಿಗ್ಗಜ ಸಾಹಿತಿಗಳನ್ನು ಕರೆದು ಚರ್ಚಿಸಿ ಅವರು ನೀಡುವ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು; ಇದ್ಯಾವುದೂ ಆಗದ ಪರಿಣಾಮ ಯೋಜನೆಗಳೆಲ್ಲವು ಪೇಪರ್‌ನಲ್ಲಿಯೇ ಉಳಿಯುವಂತಾಗಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸಾಹಿತಿ ಮತ್ತು ರಾಜಕಾರಣದ ಮಧ್ಯೆ ಅಧಿಕಾರಷಾಹಿ ವರ್ಗ ತಡೆಗೊಡೆಯಾಗಿದೆ ಎಂದು ವ್ಯಾಖ್ಯಾನಿಸಿದ ಅವರು ರಾಜಕಾರಣಿ ಗಳನ್ನು ತಿದ್ದಿತಿಡಬಹುದಾದ ಶಕ್ತಿ ಸಾಹಿತಿಗಳಲ್ಲಿದೆ; ಆದರೇ ಅಧಿಕಾರಿಗಳನ್ನು ತಿದ್ದುವರ್ಯಾರು ಎಂಬ ಪ್ರಶ್ನೆ ಎದುರಾಗಿದೆ ಎಂದರು.
ಸಾಹಿತಿಗಳಿಗೆ ರಾಜಕೀಯ ಪ್ರಜ್ಞೆ ಮತ್ತು ರಾಜಕಾರಣಿಗಳಿಗೆ ಸಾಹಿತ್ಯ ಪ್ರಜ್ಞೆ ಆವಶ್ಯಕವೆಂಬುದನ್ನು ಒತ್ತಿ ಹೇಳಿದ ಡಾ.ಮಲ್ಲಿಕಾ ಘಂಟಿ ಅವರು, ಆ ಪ್ರಜ್ಞೆ ಇರದ ಕಾರಣ ಅಪನಂಬಿಕೆ ಉಂಟಾಗುತ್ತಿದೆ ಮತ್ತು ವರ್ತಮಾನದ ಆಶಯಗಳನ್ನು ಈಡೇರಿಸಲು ಆಗುತ್ತಿಲ್ಲ ಎಂದು ವಿವರಿಸಿದರು.
ಖಾಕಿ, ಖಾವಿ ಮತ್ತು ಖಾದಿಗಳಿಗೆ ಅಂತಕರಣ ಮೂಡಿಸುವ ಕೆಲಸ ಮಾಡಬೇಕಿರುವುದು ಆವಶ್ಯವೆಂಬುದನ್ನು ವಿವಿಧ ಉದಾರಣೆಗಳ ಮೂಲಕ ವಿವರಿಸಿದ ಘಂಟಿ ಅವರು, ರಾಜಕಾರಣ, ಧರ್ಮ ಮತ್ತು ಸಂಸ್ಕೃತಿಗೆ ಬಹುದೊಡ್ಡ ಪರಂಪರೆ ಇದ್ದು,ಅದನ್ನು ನೋಡುವ ಕಣ್ಣುಗಳು ಸರಿಯಾಗಿರದ ಕಾರಣ ನಮ್ಮನ್ನು ನಾವು ಅರಿಯಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದರು.
ಸಾಹಿತ್ಯ ಮತ್ತು ತಾತ್ವಿಕ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯನ್ನು ವ್ಯಕ್ತಪಡಿಸಿದರೆ ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರಿಗೆ ಆದ ಗತಿಯನ್ನು ನಾವು ನೆನಪಿಸಿಕೊಳ್ಳಬೇಕಿದೆ ಎಂದು ಹೇಳಿದ ಡಾ.ಘಂಟಿ ಅವರು, ಈ ಕಾರಣದಿಂದಲೇ ಸಾಹಿತ್ಯ ಮತ್ತು ತಾತ್ವಿಕವಾಗಿ ಮಾತನಾಡಲಾರದ ಸ್ಥಿತಿ ಉಂಟಾಗಿದೆ ಎಂದರು.
ಸಾಹಿತ್ಯ ಮತ್ತು ರಾಜಕಾರಣದ ವಿಷಯದ ಕುರಿತು ಮಾತನಾಡಿದ ಡಾ.ಬಂಜಗೆರೆ ಜಯಪ್ರಕಾಶ ಅವರು, ಸಾಹಿತ್ಯವು ಸದಾ ಪ್ರಭುತ್ವದೊಂದಿಗೆ ಸಂಘರ್ಷ ಮಾಡುವಂತದ್ದು, ಇದರ ಗುಣ ಜನರ ಆಶಯಗಳನ್ನು ಅಭಿವ್ಯಕ್ತಪಡಿಸುವ ಮತ್ತು ನಾಳೆಗಾಗಿ ಜನರನ್ನು ಪ್ರೋತ್ಸಾಹಿಸುವ ಕೆಲಸ ಮಾಡುವಂತದ್ದಾಗಿದೆ ಎಂದರು.
 ರಾಜಕೀಯ ಮತ್ತು ಸಾಮಾಜಿಕ ಚಲನೆ ಕುರಿತು ಮಾಜಿ ಸಚಿವ ಎಚ್.ವಿಶ್ವನಾಥ ಮತ್ತು ಧರ್ಮ ಮತ್ತು ರಾಜಕಾರಣದ ಕುರಿತು ಶಾಸಕ ವೈ.ಎಸ್.ವಿ.ದತ್ತಾ ಅವರು ವಿಷಯ ಮಂಡಿಸಿದರು. ಸಮ್ಮೇಳನಾಧ್ಯಕ್ಷ ಡಾ.ಬರಗೂರು ರಾಮಚಂದ್ರಪ್ಪ, ಕಸಾಪ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ಮತ್ತಿತರರು ಇದ್ದರು.
ಮಲ್ಲಿಕಾರ್ಜುನ ಯಂಡಿಗೇರಿ ಸ್ವಾಗತಿಸಿದರು. ಲಿಂಗಯ್ಯ ಹಿರೇಮಠ ನಿರೂಪಿಸಿದರು. ಶ್ರೀಶೈಲ ಕರಿಶಂಕರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X