Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟಿನ ಸಮಸ್ಯೆ: ನೂರಾರು ಮದುವೆಗಳು...

ನೋಟಿನ ಸಮಸ್ಯೆ: ನೂರಾರು ಮದುವೆಗಳು ರದ್ದು, ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ4 Dec 2016 8:44 AM IST
share
ನೋಟಿನ ಸಮಸ್ಯೆ: ನೂರಾರು ಮದುವೆಗಳು ರದ್ದು, ಮುಂದೂಡಿಕೆ

ಹೈದರಾಬಾದ್, ಡಿ4: ಪ್ರಸಕ್ತ ಮದುವೆ ಸೀಸನ್‌ನ ಅತ್ಯಂತ ಪವಿತ್ರ ದಿನ ಎನ್ನಲಾದ ರವಿವಾರಕ್ಕೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಿಗದಿಯಾಗಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮದುವೆಗಳು ನಗದು ಕೊರತೆಯಿಂದಾಗಿ ದಿಢೀರನೇ ಮುಂದೂಡಲ್ಪಟ್ಟಿವೆ. ಹಲವು ಮದುವೆಗಳು ರದ್ದಾಗಿವೆ.
ಕೇಂದ್ರ ಸರ್ಕಾರದ ನೋಟು ಅಮಾನ್ಯ ನಿರ್ಧಾರದ ಹಿನ್ನೆಲೆಯಲ್ಲಿ, ಮದುವೆಗಳಿಗೆ ಬ್ಯಾಂಕುಗಳು ಹಣ ನೀಡಲು ಅಗತ್ಯವಾದ ದಾಖಲೆಗಳನ್ನು ಹೊಂದಿಸಲಾಗದೇ ಮದುವೆ ಮುಂದೂಡುವುದು ಅನಿವಾರ್ಯವಾಗಿದೆ. ಮದುವೆಗಳಿಗೆ ಈ ದಾಖಲೆಗಳನ್ನು ನೀಡಿದರೆ 2.5 ಲಕ್ಷ ರೂಪಾಯಿವರೆಗೂ ಖಾತೆಯಿಂದ ಹಣ ಪಡೆಯಲು ಅವಕಾಶ ನೀಡಲಾಗಿತ್ತು.
ನಗದು ಕೊರತೆ ಇರುವ ಹಿನ್ನೆಲೆಯಲ್ಲಿ ಬ್ಯಾಂಕುಗಳು ನಿಗದಿತ ದಾಖಲೆಗೆ ಪಟ್ಟುಹಿಡಿದಿದ್ದು, ಆಧಾರ್ ಕಾರ್ಡ್, ಪಾನ್‌ಕಾರ್ಡ್‌ಗಳನ್ನು ಕಡ್ಡಾಯಗೊಳಿಸಿವೆ. ಇದರ ಜತೆಗೆ ಯಾರಿಗೆ ನಗದು ರೂಪದಲ್ಲಿ ಎಷ್ಟು ಹಣ ನೀಡಲಾಗಿದೆ ಎಂಬ ವಿವರಗಳನ್ನು ಅಫಿಡವಿಟ್ ರೂಪದಲ್ಲಿ ಸಲ್ಲಿಸುವಂತೆ ಸೂಚಿಸಿವೆ. ಜತೆಗೆ ಆನ್‌ಲೈನ್ ವರ್ಗಾವಣೆ ಮತ್ತು ಸ್ವೈಪ್ ಮೆಷಿನ್ ಮೂಲಕ ನೀಡುವ ಪಾವತಿಗಳ ವಿವರಗಳನ್ನೂ ಕಡ್ಡಾಯವಾಗಿ ನೀಡುವಂತೆ ಸೂಚಿಸಿವೆ.
ಮದುವೆಗಳಿಗೆ ಹಣ ಮಂಜೂರು ಮಾಡಲು ಹಲವು ಷರತ್ತುಗಳನ್ನು ವಿಧಿಸಿರುವ ಹಿನ್ನೆಲೆಯಲ್ಲಿ ಕೇಂದ್ರದ ಈ ಕ್ರಮ ಕೇವಲ ಕಣ್ಣೀರು ಒರೆಸುವಂಥದ್ದಾಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆವೈಸಿಯಡಿ ದಾಖಲೆಗಳನ್ನು ರೂಢಿ ಮಾಡಬೇಕೇ ಅಥವಾ ಮದುವೆ ಸಿದ್ಧತೆ ಮಾಡಬೇಕೇ ಎಂಬ ಪ್ರಶ್ನೆ ಮುಂದಿಡುತ್ತಾರೆ.
ಎಲ್ಲ ದಾಖಲೆಗಳನ್ನು ಸಲ್ಲಿಸಿದರೂ ಒಂದರಿಂದ ಎರಡು ಲಕ್ಷ ರೂಪಾಯಿಗಿಂತ ಅಧಿಕ ಹಣ ನೀಡಲು ಬ್ಯಾಂಕುಗಳು ನಿರಾಕರಿಸುತ್ತಿವೆ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬರುತ್ತಿದೆ. ನಗದು ಕೊರತೆಯ ನೆಪ ಒಡ್ಡಿ ಹೀಗೆ ಸತಾಯಿಸಲಾಗುತ್ತಿದೆ ಎನ್ನುವುದು ಮಾಧಾಪುರದ ವಿ.ಚಂದ್ರಿಕಾ ಅವರ ದೂರು. ಇವರು ಹಣದ ಕೊರತೆಯಿಂದಾಗಿ ಮಗಳ ಮದುವೆಯನ್ನು ಮುಂದೂಡಿದ್ದಾರೆ.
"ಮನೆ ಮಾರಾಟ ಮಾಡಿ ಬಂದ ಹಣವನ್ನು ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದೆ. ನನ್ನ ಹಣ ಖಾತೆಯಲ್ಲಿದ್ದರೂ ಅದನ್ನು ನನ್ನ ಏಕೈಕ ಮಗಳ ಮದುವೆಗೆ ಖರ್ಚು ಮಾಡುವಂತಿಲ್ಲ" ಎಂದು ಅವರು ಬೇಸರ ವ್ಯಕ್ತಪಡಿಸುತ್ತಾರೆ.

ಆದರೆ ಆರ್‌ಬಿಐ ಮಾರ್ಗಸೂಚಿಗೆ ಅನುಗುಣವಾಗಿ ಹಣ ನೀಡಲಾಗುತ್ತಿದೆ ಎಂದು ಆಂಧ್ರಾ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಎಂ.ಎನ್.ಸುಧಾಕರ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X