Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಜಮಾಡಿ- ಕುಂದಾಪುರದವರೆಗೆ ರಾ.ಹೆ 66...

ಹೆಜಮಾಡಿ- ಕುಂದಾಪುರದವರೆಗೆ ರಾ.ಹೆ 66 ಕಾಮಗಾರಿ ಸಂದರ್ಭ ಅಪಘಾತದಲ್ಲಿ ಮೃತಪಟ್ಟವರು ಎಷ್ಟು ಮಂದಿ?

ಸಚಿವ ಪ್ರಮೋದ್ ನೀಡಿದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ4 Dec 2016 6:03 PM IST
share
ಹೆಜಮಾಡಿ- ಕುಂದಾಪುರದವರೆಗೆ ರಾ.ಹೆ 66 ಕಾಮಗಾರಿ ಸಂದರ್ಭ ಅಪಘಾತದಲ್ಲಿ ಮೃತಪಟ್ಟವರು ಎಷ್ಟು ಮಂದಿ?

ಉಡುಪಿ, ಡಿ.4: ಭಾರತದಲ್ಲಿ ಪ್ರತಿವರ್ಷ ರಸ್ತೆ ಅಪಘಾತಕ್ಕೆ 6ಲಕ್ಷ ಮಂದಿ ಬಲಿಯಾಗುತ್ತಿದ್ದಾರೆ. ಇದು ಚೀನಾ ದೇಶಕ್ಕಿಂತ ಹೆಚ್ಚು. ಕಳೆದ ಆರು ವರ್ಷ ಗಳಿಂದ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಹೆಜಮಾಡಿಯಿಂದ ಕುಂದಾಪುರದವರೆಗೆ ಒಟ್ಟು 600 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಮೀನುಗಾರಿಕೆ, ಯುವ ಜನ ಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ರೆಡ್‌ಕ್ರಾಸ್ ಭವನದಲ್ಲಿ ಇಂದು ನಡೆದ ರಾಜ್ಯ ಆಡಳಿತ ಸಮಿತಿಯ ಸಭೆಯಲ್ಲಿ ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸೆಯ ಕುರಿತ ಆನ್‌ಲೈನ್ ಮೂಲಕ ದೂರ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಮ್ಮ ದೇಶದಲ್ಲಿನ ಭ್ರಷ್ಟಾಚಾರದಿಂದಾಗಿ ವಾಹನ ಚಲಾಯಿಸಲು ಬಾರದ ವರಿಗೂ ಲೈಸನ್ಸ್ ಸಿಗುತ್ತದೆ. ಒಂದು ಅರ್ಥದಲ್ಲಿ ಇದು ಜನರನ್ನು ಕೊಲ್ಲಲು ನೀಡುತ್ತಿರುವ ಲೈಸನ್ಸ್ ಆಗಿದೆ. ಅದೇ ರೀತಿ ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಆಗುತ್ತಿರುವ ವಿಳಂಬ ಮತ್ತು ಪ್ರಥಮ ಚಿಕಿತ್ಸೆಯ ಕೊರತೆಯಿಂದ ಹೆಚ್ಚು ಮಂದಿ ಸಾಯುತ್ತಿದ್ದಾರೆ ಎಂದು ಅವರು ಹೇಳಿದರು.

ವಾಹನ ಚಾಲಕರಿಗೆ ಪ್ರಥಮ ಚಿಕಿತ್ಸೆ ಕುರಿತು ಮಾಹಿತಿ ಹಾಗೂ ತರಬೇತಿ ನೀಡಿದ್ದಲ್ಲಿ ಅಪಘಾತದಿಂದ ಹೆಚ್ಚು ಮಂದಿ ಸಾಯುವುದನ್ನು ತಡೆಯಲು ಸಾಧ್ಯವಿದೆ. ಅದೇ ರೀತಿ ಚಾಲಕರಿಗೆ ವಾಹನ ಚಲಾಯಿಸುವ ಕುರಿತು ನಿಯಮಗಳ ಬಗ್ಗೆಯೂ ತರಬೇತಿ ನೀಡುವ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಹಾಸನ ರೆಡ್‌ಕ್ರಾಸ್ ಸಭಾಪತಿ ಮೋಹನ್ ಗೌಡ, ಗದಗ ಸಭಾಪತಿ ಶ್ರೀನಿವಾಸ ಹುಯಿಲುಗೋಳ, ಅಂತಾರಾಷ್ಟ್ರೀಯ ಮಟ್ಟದ ವಿಪತ್ತು ನಿರ್ವಹಣೆಯ ತರಬೇತುದಾರ ಡಾ.ಕುಮಾರ್ ವಿ.ಎಲ್.ಎಸ್. ಸಹಿತ ಹಲವು ಮಂದಿಯನ್ನು ಸನ್ಮಾನಿಸಲಾಯಿತು. ವೈದ್ಯಕೀಯ ನೆರವು ಮತ್ತು ಸಲಕರಣೆಗಳನ್ನು ವಿತರಿಸಲಾಯಿತು.

ಜಿನೇವಾ ಒಪ್ಪಂದ ದಿನಾಚರಣೆಯಲ್ಲಿ ಅತಿಹೆಚ್ಚು ನಿಧಿ ಸಂಗ್ರಹಣೆ ಮಾಡಿದ ಮಣಿಪಾಲ ಮಾಧವ ಪೈ ಮೆಮೋರಿಯಲ್ ಕಾಲೇಜು, ಹಿರಿಯಡ್ಕ ಸರಕಾರಿ ಪದವಿ ಕಾಲೇಜು, ಅಜ್ಜರಕಾಡು ಮಹಿಳಾ ಸರಕಾರಿ ಕಾಲೇಜುಗಳಿಗೆ ಕ್ರಮವಾಗಿ 10ಸಾವಿರ, 8ಸಾವಿರ ಮತ್ತು 6ಸಾವಿರ ರೂ. ವೌಲ್ಯದ ಪುಸ್ತಕಗಳನ್ನು ವಿತರಿಸಲಾಯಿತು.

ರೆಡ್‌ಕ್ರಾಸ್ ಕರ್ನಾಟಕ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ರಾಜ್ಯ ಉಪಾಧ್ಯಕ್ಷ ಅಪ್ಪ ರಾವ್, ಜಿಲ್ಲಾ ಸಭಾಪತಿ ಉಮೇಶ್ ಪ್ರಭು, ಉಪಾಧ್ಯಕ್ಷ ಡಾ.ಅಶೋಕ್ ಕುಮಾರ್ ಉಪಸ್ಥಿತರಿದ್ದರು.

ರಾಜ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಯರಾಮ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪ್ರಥಮ ಚಿಕಿತ್ಸಾ ತರಬೇತಿಯ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X