Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮ, ದೇವರ ಹೆಸರಿನಲ್ಲಿ ವೌಢ್ಯಾಚರಣೆ...

ಧರ್ಮ, ದೇವರ ಹೆಸರಿನಲ್ಲಿ ವೌಢ್ಯಾಚರಣೆ ದುರಂತದ ಸಂಗತಿ

ಆಹಾರವನ್ನು ಬಡವರಿಗೆ ಹಂಚಿ, ಲೋಕ ಕಲ್ಯಾಣಕ್ಕೆ ಮುಂದಾಗಲು ಕರೆ

ವಾರ್ತಾಭಾರತಿವಾರ್ತಾಭಾರತಿ4 Dec 2016 11:17 PM IST
share
ಧರ್ಮ, ದೇವರ ಹೆಸರಿನಲ್ಲಿ ವೌಢ್ಯಾಚರಣೆ ದುರಂತದ ಸಂಗತಿ

ಸುದರ್ಶನ ಹೋಮಕ್ಕೆ ಪ್ರಗತಿಪರ ಚಿಂತಕರ ಖಂಡನೆ
ದಾವಣಗೆರೆ, ಡಿ.4: ನಗರದ ಮೋತಿ ವೀರಪ್ಪಕಾಲೇಜು ಮೈದಾನದ ಆವರಣದಲ್ಲಿ ಸುದರ್ಶನ ಹೋಮ ನಡೆಯುತ್ತಿರುವುದನ್ನು ಖಂಡಿಸಿ ಪ್ರಗತಿಪರ ಚಿಂತಕರು ಪ್ರತಿಭಟನೆ ನಡೆಸಿದರು.

ರವಿವಾರ ನಗರದ ಜಯದೇವ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಸವಪ್ರಭು ಸ್ವಾಮೀಜಿ, ದೇವರು, ಧರ್ಮದ ಹೆಸರಿನಲ್ಲಿ ತಿನ್ನುವ ಆಹಾರ ಮತ್ತು ಬಟ್ಟೆಯನ್ನು ಹೋಮಕ್ಕೆ ಹಾಕಿ ವ್ಯರ್ಥ ಮಾಡುತ್ತಿರುವುದು ಖಂಡನೀಯ ಎಂದ ಅವರು, ಹೋಮದ ಹೆಸರಿನಲ್ಲಿ ಹಾಲು, ತುಪ್ಪ, ರೇಷ್ಮೆ ಬಟ್ಟೆ ಸೇರಿದಂತೆ ವಿವಿಧ ಆಹಾರ ಪದಾರ್ಥ ಬೆಂಕಿಗೆ ಹಾಕಲಾಗುತ್ತಿದೆ. ಇದರಿಂದ ನಾವು ಬಳಸುವ ಪದಾರ್ಥವನ್ನು ಆಹುತಿ ಮಾಡಿದಂತಾಗುತ್ತದೆ. ಇದರ ಬದಲಾಗಿ ಬಡವರಿಗೆ ಹಾಲು, ತುಪ್ಪವನ್ನು ಹಂಚಬೇಕು. ಆ ಮೂಲಕ ಲೋಕಕಲ್ಯಾಣ ಮಾಡಿದಂತಾಗುತ್ತದೆ ಎಂದರು.

12ನೆ ಶತಮಾನದಲ್ಲಿ ಬಸವಾದಿ ಶರಣರು ಕಾಯಕ ಮಾಡಿ ಬಂದಂತಹ ಹಣದಲ್ಲಿ ದಾಸೋಹ ಮಾಡುತ್ತಿದ್ದರು. ಅಂದು ನಿಜವಾದ ಲೋಕ ಕಲ್ಯಾಣವಾಗುತ್ತಿತ್ತು. ಈಗಲೂ ನಾವು ಅದನ್ನು ಪ್ರತಿಪಾದಿಸಬೇಕು. ಅನಾಥರಿಗೆ, ಬಡವರು, ದೀನದಲಿತರಿಗೆ ಸಹಾಯ ಹಸ್ತ ಚಾಚುವುದರ ಮೂಲಕ ಅವರಲ್ಲಿ ದೇವರನ್ನು ಕಾಣುವ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಪ್ರತಿಪಾದಿಸಿದರು.

ವೌಢ್ಯಾಚರಣೆ ವಿರುದ್ಧ ಹೋರಾಟ ನಡೆಸುತ್ತಿರುವ ಕ್ರಿಯಾ ಸಮಿತಿಯ ಸಂಚಾಲಕ ಶಿವನಕೆರೆ ಬಸವ ಲಿಂಗಪ್ಪಅವರ ಮನೆ ಮೇಲೆ ಕಿಡಿಗೇಡಿಗಳು ಕಳೆದ ರಾತ್ರಿ ಕಲ್ಲು ಎಸೆದಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.

ಶಿವನಕೆರೆ ಬಸವಲಿಂಗಪ್ಪಮಾತನಾಡಿ, ಮಧ್ಯರಾತ್ರಿ 1:35ರ ಸುಮಾರಿನಲ್ಲಿ ತಾನು ಮನೆಯಲ್ಲಿ ಇದ್ದ ವೇಳೆ ಯಾರೋ ಕಲ್ಲು ತೂರಿ ಮನೆಯ ಕಿಟಕಿ ಗಾಜುಗಳು ಪುಡಿ ಮಾಡಿದ್ದಾರೆ. ಸುದರ್ಶನ ಹೋಮದ ವಿರುದ್ಧ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಈ ರೀತಿ ಕಲ್ಲು ತೂರಾಟ ನಡೆಸಿ ಬೆದರಿಸುವ ಪ್ರಯತ್ನ ನಡೆದಿರಬಹುದು ಎಂದರು.
ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪಮಾತನಾಡಿ, ಧರ್ಮ ಮತ್ತು ದೇವರ ಹೆಸರಿನಲ್ಲಿ ವೌಢ್ಯಾಚರಣೆ ಮಾಡುತ್ತಿರುವುದು ವಿಷಾದಕರ ಸಂಗತಿ ಎಂದರು.
ಪ್ರತಿಭಟನೆಯಲ್ಲಿ ಪತ್ರಕರ್ತ ಬಿ.ಎನ್. ಮಲ್ಲೇಶ್, ಕೆ.ಎಲ್. ಭಟ್, ಅನಿಷ್ ಪಾಷಾ, ಸುಮತಿ ಜಯಪ್ಪ, ರಾಘು ದೊಡ್ಮನಿ, ಆವರಗೆರೆ ಚಂದ್ರು, ಆವರಗೆರೆ ವಾಸು, ಸಾಗರ್ ಮತ್ತಿತರರಿದ್ದರು. ದೇಶದಲ್ಲಿ ವೈಚಾರಿಕತೆ ಮತ್ತು ಜ್ಞ್ಞಾನ ಜಾಗೃತಿ ಮೂಡಿಸುತ್ತಿರುವವರ ಮೇಲೆ ಪದೇಪದೇ ಹಲ್ಲೆಗಳು ನಡೆಯುತ್ತಿರುವುದು ವಿಷಾದನೀಯ ಸಂಗತಿ. ಮೂಢನಂಬಿಕೆಗಳ ವಿರುದ್ಧ ಹೋರಾಡಿದ ಸಾಹಿತಿ ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು. ಆದರೆ ಆರೋಪಿಗಳನ್ನು ಪತ್ತೆ ಹಚ್ಚದಿರುವುದು ವಿಷಾದನೀಯ. ಬಸವಪ್ರಭು ಸ್ವಾಮೀಜಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X