Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಮಹಿಳಾ ತಂಡಕ್ಕೆ ಸತತ ಆರನೆ...

ಭಾರತದ ಮಹಿಳಾ ತಂಡಕ್ಕೆ ಸತತ ಆರನೆ ಪ್ರಶಸ್ತಿ

ಏಷ್ಯಾಕಪ್ ಕ್ರಿಕೆಟ್ ಟೂರ್ನಿ:

ವಾರ್ತಾಭಾರತಿವಾರ್ತಾಭಾರತಿ4 Dec 2016 11:33 PM IST
share
ಭಾರತದ ಮಹಿಳಾ ತಂಡಕ್ಕೆ ಸತತ ಆರನೆ ಪ್ರಶಸ್ತಿ

ಬ್ಯಾಂಕಾಂಗ್, ಡಿ.4: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿರುವ ಭಾರತದ ಮಹಿಳಾ ಕ್ರಿಕೆಟ್ ತಂಡ ಏಷ್ಯಾಕಪ್ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ.

ರವಿವಾರ ಇಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು 17 ರನ್‌ಗಳ ಅಂತರದಿಂದ ಮಣಿಸಿರುವ ಭಾರತ ಸತತ ಆರನೆ ಬಾರಿ ಟ್ರೋಫಿಯನ್ನು ಎತ್ತಿ ಹಿಡಿಯಿತು. ಭಾರತ ಈ ವರೆಗೆ ನಡೆದ ಎಲ್ಲ ಆರೂ ಟೂರ್ನಿಯನ್ನು ಗೆದ್ದುಕೊಂಡು ಮಹತ್ತರ ಸಾಧನೆ ಮಾಡಿದೆ.

ಭಾರತ ಏಷ್ಯಾಕಪ್ ಫೈನಲ್‌ನಲ್ಲಿ ಸತತ ಎರಡನೆ ಬಾರಿ ಪಾಕಿಸ್ತಾನವನ್ನು ಮಣಿಸಿದೆ. 2012-13ರಲ್ಲಿ ಪಾಕಿಸ್ತಾನವನ್ನು ಮಣಿಸಿ ಪ್ರಶಸ್ತಿ ಜಯಿಸಿತ್ತು.

ಟೂರ್ನಮೆಂಟ್‌ನ ಆರಂಭಕ್ಕೆ ಮೊದಲು ಟ್ವೆಂಟಿ-20 ನಾಯಕತ್ವದಿಂದ ಕೆಳಗಿಳಿಸಲ್ಪಟ್ಟಿದ್ದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಮತ್ತೊಮ್ಮೆ ತಂಡಕ್ಕೆ ಆಸರೆಯಾದರು. ಮಿಥಾಲಿ ಅಜೇಯ 73 ರನ್ ಗಳಿಸಿ ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 121 ರನ್ ಗಳಿಸಲು ನೆರವಾದರು.

 ಟಾಸ್ ಜಯಿಸಿದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ವಿಕೆಟ್‌ಗೆ ಸ್ಮತಿ ಮಂಧಾನರೊಂದಿಗೆ 24 ರನ್ ಜೊತೆಯಾಟ ನಡೆಸಿದ ಮಿಥಾಲಿ ಅವರು ಎಸ್. ಮೇಘನಾ(9) ಅವರೊಂದಿಗೆ 2ನೆ ವಿಕೆಟ್‌ಗೆ 44 ರನ್ ಸೇರಿಸಿದರು.

ವೇದಾ ಕೃಷ್ಣಮೂರ್ತಿ(2) ಹಾಗೂ ಹರ್ಮನ್‌ಪ್ರೀತ್ ಕೌರ್(5) ಒಂದಕೆ ಸ್ಕೋರ್ ಗಳಿಸಿ ಔಟಾದರು. ಜುಲಾನ್ ಗೋಸ್ವಾಮಿ 10 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್‌ಗಳ ಸಹಿತ 17 ರನ್ ಕಲೆ ಹಾಕಿ ಗಮನ ಸೆಳೆದರು.

ಪಾಕಿಸ್ತಾನದ ಪರವಾಗಿ ಎಡಗೈ ಸ್ಪಿನ್ನರ್ ಆನಮ್ ಅಮೀನ್(2-24) ಯಶಸ್ವಿ ಬೌಲರ್ ಎನಿಸಿಕೊಂಡರು.

ಭಾರತೀಯ ಆಟಗಾರ್ತಿಯರು ಅತ್ಯುತ್ತಮ ಬೌಲಿಂಗ್ ಸಂಘಟಿಸಿ ಪಾಕ್ ತಂಡವನ್ನು 6 ವಿಕೆಟ್ ನಷ್ಟಕ್ಕೆ 104 ರನ್‌ಗೆ ನಿಯಂತ್ರಿಸಿ 17 ರನ್‌ಗಳ ಅಂತರದಿಂದ ಗೆಲುವು ತಂದುಕೊಟ್ಟರು. ಎಡಗೈ ಸ್ಪಿನ್ನರ್ ಏಕ್ತಾ ಬಿಷ್ಟ್ ಮತ್ತೊಮ್ಮೆ ಬೌಲಿಂಗ್‌ನಲ್ಲಿ ಮಿಂಚಿದರು. ಬಿಷ್ಟ್ ನಾಲ್ಕು ಓವರ್‌ಗಳಲ್ಲಿ 22 ರನ್ ನೀಡಿ 2 ವಿಕೆಟ್ ಉರುಳಿಸಿದರು.

ಪ್ರಸ್ತುತ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸತತ ಎರಡನೆ ಬಾರಿ ಸೋಲಿಸಿದೆ. ಲೀಗ್ ಹಂತದಲ್ಲಿ 5 ವಿಕೆಟ್‌ಗಳ ಅಂತರದಿಂದ ಪಾಕ್‌ನ್ನು ಮಣಿಸಿತ್ತು. ಈ ಗೆಲುವಿನ ಮೂಲಕ ಭಾರತ ಟೂರ್ನಿಯಲ್ಲಿ ಸತತ ಆರನೆ ಪಂದ್ಯವನ್ನು ಜಯಿಸಿ ಅಜೇಯ ದಾಖಲೆ ಕಾಯ್ದುಕೊಂಡಿದೆ.

ಮಾರ್ಚ್‌ನಲ್ಲಿ ಸ್ವದೇಶದಲ್ಲಿ ನಡೆದಿದ್ದ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನಕ್ಕೆ ಶರಣಾಗಿದ್ದ ಭಾರತ ಇದೀಗ ತಕ್ಕ ಸೇಡು ತೀರಿಸಿಕೊಂಡಿದೆ.

 2004ರಲ್ಲಿ ಆರಂಭವಾದ ಟೂರ್ನಿಯ ಆರಂಭದ ನಾಲ್ಕು ಆವೃತ್ತಿಯ ಟೂರ್ನಿಯು 50 ಓವರ್‌ಗಳ ಪಂದ್ಯವಾಗಿತ್ತು. ಆ ನಂತರ ನಡೆದ ಎರಡು ಟೂರ್ನಿ ಟ್ವೆಂಟಿ-20 ಮಾದರಿಯದ್ದಾಗಿದೆ. 2012ರಲ್ಲಿ ಗ್ವಾಂಗ್‌ಝೌನಲ್ಲಿ ನಡೆದ ಕಳೆದ ಆವೃತ್ತಿಯ ಏಷ್ಯಾಕಪ್‌ನ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿರುವ ಭಾರತ ಟ್ರೋಫಿಯನ್ನು ಜಯಿಸಿತ್ತು.

ಮಿಥಾಲಿ ರಾಜ್ ಹಾಗೂ ಏಕ್ತಾ ಬಿಷ್ಟ್ ಸಾಹಸದ ನೆರವಿನಿಂದ ಭಾರತ ಶ್ರೇಷ್ಠ ಪ್ರದರ್ಶನವನ್ನು ಪುನರಾವರ್ತಿಸಿದೆ. ಒಟ್ಟು 220 ರನ್ ಗಳಿಸಿರುವ ರಾಜ್ ಟೂರ್ನಿಯಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿದ್ದಾರೆ. 6 ಇನಿಂಗ್ಸ್‌ಗಳಲ್ಲಿ 128 ರನ್ ಗಳಿಸಿರುವ ಜವೇರಿಯಾ ಖಾನ್ ಎರಡನೆ ಸ್ಥಾನದಲ್ಲಿದ್ದಾರೆ.

ಪಾಕಿಸ್ತಾನ ವಿರುದ್ಧ ಎರಡೂ ಹೈವೋಲ್ಟೇಜ್ ಪಂದ್ಯಗಳಲ್ಲಿ ಮಿಥಾಲಿ ರಾಜ್ ತಂಡಕ್ಕೆ ಆಸರೆಯಾಗಿದ್ದರು. ಫೈನಲ್‌ನಲ್ಲಿ ಅಜೇಯ 73 ರನ್ ಗಳಿಸಿರುವ ಮಿಥಾಲಿ ಟೂರ್ನಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದರು. 112 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿರುವ ಮಿಥಾಲಿ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ದಾಖಲಿಸಿದ್ದರು.

 ಪಾಕಿಸ್ತಾನ ವಿರುದ್ಧ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಮಿಥಾಲಿ ರಾಜ್ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಸೋಲುಂಡಿತ್ತು. ಮಿಥಾಲಿ ಮಂದಗತಿಯ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇದೀಗ ತನ್ನ ತಪ್ಪನ್ನು ಮಿಥಾಲಿ ತಿದ್ದುಕೊಂಡರು.

ಉತ್ತಮ ಪ್ರದರ್ಶನ ನೀಡಿರುವ 34ರ ಹರೆಯದ ಮಿಥಾಲಿ ತಾನೂ ಈಗಲೂ ಚೆನ್ನಾಗಿ ಬ್ಯಾಟಿಂಗ್ ಮಾಡಬಲ್ಲೆ ಎಂದು ತೋರಿಸಿಕೊಟ್ಟಿದ್ದಾರೆ.

 ಮಿಥಾಲಿ ಬದಲಿಗೆ ಟ್ವೆಂಟಿ-20 ನಾಯಕತ್ವವಹಿಸಿಕೊಂಡಿದ್ದ ಆಲ್‌ರೌಂಡರ್ ಹರ್ಮನ್‌ಪ್ರೀತ್ ಕೌರ್ ಟೂರ್ನಿಯಲ್ಲಿ ತನ್ನ ಸಾಮರ್ಥ್ಯದಷ್ಟು ಪ್ರದರ್ಶನ ನೀಡಲಿಲ್ಲ. ಅವರು ಟೂರ್ನಿಯಲ್ಲಿ ಆಡಿರುವ ಏಳು ಇನಿಂಗ್ಸ್‌ನಲ್ಲಿ 30ಕ್ಕೂ ಅಧಿಕ ರನ್ ಗಳಿಸಲು ವಿಫಲರಾದರು. ಕೇವಲ 2 ವಿಕೆಟ್‌ಗಳನ್ನು ಪಡೆದರು.

ಎಡಗೈ ಸ್ಪಿನ್ ಬೌಲರ್ ಬಿಷ್ಟ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿ ತಂಡದ ಯಶಸ್ವಿ ಬೌಲರ್ ಎನಿಸಿಕೊಂಡರು.

ಸಂಕ್ಷಿಪ್ತ ಸ್ಕೋರ್

ಭಾರತದ ಮಹಿಳಾ ತಂಡ:

20 ಓವರ್‌ಗಳಲ್ಲಿ 121/5

(ಮಿಥಾಲಿ ರಾಜ್ ಅಜೇಯ 73, ಗೋಸ್ವಾಮಿ 17, ಅನಾಮ್ ಅಮಿನ್ 2-24)

ಪಾಕಿಸ್ತಾನ ಮಹಿಳಾ ತಂಡ:

20 ಓವರ್‌ಗಳಲ್ಲಿ 104/6

( ಬಿಸ್ಮಾ ಮರೂಫ್ 25, ಜಾವೇರಿಯ ಖಾನ್ 22, ಆಯೇಷಾ ಜಾಫರ್ 15, ಬಿಷ್ಟ್ 2-22, ಅನುಜಾ ಪಾಟೀಲ್ 1-18, ಜುಲಾನ್ ಗೋಸ್ವಾಮಿ 1-19, ಶಿಖಾ ಪಾಂಡೆ 1-17, ಪ್ರೀತಿ ಬೋಸ್ 1-18)

ಪಂದ್ಯಶ್ರೇಷ್ಠ: ಮಿಥಾಲಿ ರಾಜ್

ಸರಣಿಶ್ರೇಷ್ಠ: ಮಿಥಾಲಿ ರಾಜ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X