Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡೂವರೆ ತಿಂಗಳ ಬಳಿಕ ಏಕದಿನ ಪಂದ್ಯ ಆಡಲು...

ಎರಡೂವರೆ ತಿಂಗಳ ಬಳಿಕ ಏಕದಿನ ಪಂದ್ಯ ಆಡಲು ಧೋನಿ ಸಜ್ಜು

ವಾರ್ತಾಭಾರತಿವಾರ್ತಾಭಾರತಿ4 Dec 2016 11:42 PM IST
share
ಎರಡೂವರೆ ತಿಂಗಳ ಬಳಿಕ ಏಕದಿನ ಪಂದ್ಯ ಆಡಲು ಧೋನಿ ಸಜ್ಜು

ಹೊಸದಿಲ್ಲಿ, ಡಿ.14: ಭಾರತದ ಸೀಮಿತ ಓವರ್ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಸುಮಾರು ಎರಡೂವರೆ ತಿಂಗಳ ಬಳಿಕ ಮೊದಲ ಬಾರಿ ಅಂತಾರಾಷ್ಟ್ರೀಯ ಪಂದ್ಯ ಆಡಲು ಸಜ್ಜಾಗುತ್ತಿದ್ದಾರೆ.

ವಿಶಾಖಪಟ್ಟಣದಲ್ಲಿ ಅ.29 ರಂದು ನ್ಯೂಝಿಲೆಂಡ್‌ನ ವಿರುದ್ಧ ಕೊನೆಯ ಬಾರಿ ಪಂದ್ಯವನ್ನು ಆಡಿರುವ ಧೋನಿ ಜನವರಿ 15 ರಂದು ಪುಣೆಯಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಆಡಲಿದ್ದಾರೆ. ಧೋನಿ ಎರಡೂವರೆ ತಿಂಗಳ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ.

ಶಿಷ್ಟಾಚಾರದ ಪ್ರಕಾರ ಗಾಯಗೊಂಡ ಆಟಗಾರನನ್ನು ರಾಷ್ಟ್ರೀಯ ಆಯ್ಕೆಗೆ ಪರಿಗಣಿಸಬೇಕಾದರೆ ಕನಿಷ್ಠ ಒಂದು ಪ್ರಥಮ ದರ್ಜೆ ಪಂದ್ಯ ಆಡಿರಬೇಕಾಗುತ್ತದೆ. ಆದರೆ, ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಧೋನಿಗೆ ಈ ನಿಯಮ ಅನ್ವಯಿಸುವುದಿಲ್ಲ.

ಧೋನಿ ಜಾರ್ಖಂಡ್‌ನ ಪರ ವಿಜಯ ಹಝಾರೆ ಟ್ರೋಫಿಯನ್ನು ಆಡುವುದರೊಂದಿಗೆ 2015ರಲ್ಲಿ ಆಸ್ಟ್ರೇಲಿಯ ವಿರುದ್ಧ ಸೀಮಿತ ಓವರ್ ಪಂದ್ಯಕ್ಕೆ ತಯಾರಿಯಾಗಿದ್ದರು.

ಈ ಬಾರಿಯ ವಿಜಯ ಹಝಾರೆ ಟ್ರೋಫಿ ಫೆ.25 ರಿಂದ ಆರಂಭವಾಗಲಿದೆ. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಕೊನೆಗೊಂಡ 4 ವಾರಗಳ ಬಳಿಕ ಈ ಟೂರ್ನಿ ಆರಂಭವಾಗಲಿದೆ.

ಏಕದಿನದ ಇತರ ಸ್ಪೆಷಲಿಸ್ಟ್ ಆಟಗಾರರು ತಮ್ಮ ರಾಜ್ಯದ ಪರ ರಣಜಿ ಪಂದ್ಯಗಳನ್ನು ಆಡುತ್ತಿದ್ದಾರೆ. ಧೋನಿಗೆ ಇಂತಹ ಆಯ್ಕೆ ಇನ್ನಷ್ಟೇ ಲಭಿಸಬೇಕಾಗಿದೆ.

 ಭಾರತದ ಆಟಗಾರರು ಇತರ ಖಾಸಗಿ ಲೀಗ್‌ಗಳಲ್ಲಿ ಆಡದಂತೆ ಬಿಸಿಸಿಐ ನಿರ್ಬಂದ ಹೇರಿದೆ. ಈ ಹಿನ್ನೆಲೆಯಲ್ಲಿ ಧೋನಿಗೆ ಈಗ ನಡೆಯುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ಲೀಗ್‌ನಲ್ಲಿ(ಬಿಪಿಎಲ್) ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ಈಗ ನಡೆಯುತ್ತಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಜಾರ್ಖಂಡ್ ತಂಡ ನಾಕೌಟ್ ಹಂತಕ್ಕೆ ಅರ್ಹತೆ ಪಡೆದಿದೆ. ಇಶಾನ್ ಕಿಶನ್ ವಿಕೆಟ್‌ಕೀಪಿಂಗ್ ನಡೆಸುತ್ತಿರುವ ಹಿನ್ನೆಲೆಯಲ್ಲಿ ಧೋನಿ ಈ ತನಕ ಜಾರ್ಖಂಡ್ ತಂಡದ ಪರ ಕೇವಲ ಬ್ಯಾಟ್ಸ್‌ಮನ್ ಆಗಿ ಆಡುವ ಸಾಧ್ಯತೆ ಗೋಚರಿಸುತ್ತಿಲ್ಲ.

‘‘ಧೋನಿ ರಣಜಿ ಟ್ರೋಫಿ ಪಂದ್ಯ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ನಮ್ಮಲ್ಲಿ ಮಾಹಿತಿಯಿಲ್ಲ. ಅವರು ಈಗಾಗಲೇ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಅವರು ಜಾರ್ಖಂಡ್ ತಂಡದೊಂದಿಗೆ ನಿರಂತರ ಅಭ್ಯಾಸ ನಡೆಸುತ್ತಿದ್ದಾರೆ ಎಂಬ ಮಾಹಿತಿ ನಮಗೆ ಲಭಿಸಿದೆ’’ ಎಂದು ಹಿರಿಯ ಕ್ರಿಕೆಟಿಗರ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‌ಕೆ ಪ್ರಸಾದ್ ರವಿವಾರ ತಿಳಿಸಿದ್ದಾರೆ.

 ‘‘ಧೋನಿ ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಆಡುವುದಿಲ್ಲ. ಹೀಗಾಗಿ ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡುವ ಪ್ರಶ್ನೆಯೇ ಉದ್ಬವಿಸದು. ಜಾರ್ಖಂಡ್ ತಂಡಕ್ಕೆ ಅವರು ಮೆಂಟರ್ ಆಗಿದ್ದಾರೆ. ಅವರು ವಿಜಯ್ ಹಝಾರೆ ಟ್ರೋಫಿಯಲ್ಲಿ ಜಾರ್ಖಂಡ್ ಪರ ಆಡಲಿದ್ದಾರೆ’’ ಎಂದು ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ಶರ್ಮ ಸ್ಪಷ್ಟಪಡಿಸಿದ್ದಾರೆ.

ಜಾರ್ಖಂಡ್ ತಂಡ ದಿಲ್ಲಿಯ ಕರ್ನೈಲ್ ಸಿಂಗ್ ಸ್ಟೇಡಿಯಂನಲ್ಲಿ ಮಹಾರಾಷ್ಟ್ರದ ವಿರುದ್ಧ ಆಡುತ್ತಿದ್ದಾಗ ಧೋನಿ ತನ್ನ ರಾಜ್ಯ ತಂಡದೊಂದಿಗೆ ಇದ್ದರು. ಧೋನಿ ಡ್ರೆಸಿಂಗ್ ರೂಮ್‌ನಲ್ಲಿ ಕುಳಿತುಕೊಂಡು ವರುಣ್ ಆ್ಯರೊನ್ ನೇತೃತ್ವದ ಜಾರ್ಖಂಡ್ ತಂಡವನ್ನು ಹುರಿದುಂಬಿಸುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X