Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೋಹಿಂಗ್ಯಾ ನರಮೇಧದ ವಿರುದ್ಧ ಮಲೇಶ್ಯ...

ರೋಹಿಂಗ್ಯಾ ನರಮೇಧದ ವಿರುದ್ಧ ಮಲೇಶ್ಯ ಆಕ್ರೋಶ

ಸೂ ಕಿ ಮಧ್ಯ ಪ್ರವೇಶಕ್ಕೆ ಅಧ್ಯಕ್ಷ ನಜೀಬ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Dec 2016 11:55 PM IST
share
ರೋಹಿಂಗ್ಯಾ ನರಮೇಧದ ವಿರುದ್ಧ ಮಲೇಶ್ಯ ಆಕ್ರೋಶ

  ಕೌಲಾಲಂಪುರ,ಡಿ.4: ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರ ಭೀಕರ ನರಮೇಧವನ್ನು ತಡೆಗಟ್ಟಲುಆಂಗ್ ಸಾನ್ ಸೂ ಕಿ ಮಧ್ಯಪ್ರವೇಶಿಸಬೇಕೆಂದು ಮಲೇಶ್ಯದ ಪ್ರಧಾನಿ ನಜೀಬ್ ರಝಾಕ್ ಆಗ್ರಹಿಸಿದ್ದಾರೆ. ರೋಹಿಂಗ್ಯಾ ಮುಸ್ಲಿಮರ ಹತ್ಯಾಕಾಂಡವನ್ನು ನಿಲ್ಲಿಸುವಲ್ಲಿ ನೊಬೆಲ್ ಶಾಂತಿ ಪುರಸ್ಕೃತೆಯಾದ ಆಂಗ್ ಸಾನ್ ಸೂಕಿ ನಿಷ್ಕ್ರಿಯತೆಯನ್ನು ಪ್ರದರ್ಶಿಸುತ್ತಿದ್ದಾರೆಂದು ಅವರು ಟೀಕಿಸಿದ್ದಾರೆ.

ಕೌಲಾಲಂಪುರದಲ್ಲಿ ಬೃಹತ್ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರ ದಮನವನ್ನು ಮ್ಯಾನ್ಮಾರ್ ಸರಕಾರ ತಕ್ಷಣವೇ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ನಿರಂತರ ಅತ್ಯಾಚಾರ, ನರಮೇಧ ಹಾಗೂ ದೌರ್ಜನ್ಯಗಳಿಂದಾಗಿ ಪ್ರತಿ ದಿನವೂ ಸಾವಿರಾರು ರೋಹಿಂಗ್ಯಾ ಮುಸ್ಲಿಮರು ಮನೆಮಾರು ತೊರೆದು ಪಲಾಯನಗೈಯುತ್ತಿದ್ದಾರೆಂದು ನಜೀಬ್ ನೋವು ವ್ಯಕ್ತಪಡಿಸಿದರು.

‘‘ ಇನ್ನು ಇದು ಸಾಕು... ಎಂದು ನಾವು ಆಂಗ್‌ಸಾನ್ ಸೂಕಿ ಅವರಿಗೆ ಹೇಳಲು ಬಯಸುತ್ತೇವೆ. ನಾವು ಮುಸ್ಲಿಮರನ್ನು ಹಾಗೂ ಇಸ್ಲಾಮನ್ನು ರಕ್ಷಿಸಬೇಕಾಗಿದೆ ಎಂದು ನಜೀಬ್, ಬೆಂಬಲಿಗರ ಘೋಷಣೆಗಳ ನಡುವೆ ಹೇಳಿದರು.

ರೋಹಿಂಗ್ಯಾಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲು ಅಂತಾರಾಷ್ಟ್ರೀಯ ಇಸ್ಲಾಂ ಸಹಕಾರ ಸಂಘಟನೆ ಕಾರ್ಯಪ್ರವೃತ್ತವಾಗಬೇಕೆಂದು ಅವರು ಆಗ್ರಹಿಸಿದರು.

ರೋಹಿಂಗ್ಯಾಗಳ ಹತ್ಯಾಕಾಂಡವನ್ನು ನಿಲ್ಲಿಸಲು ವಿಶ್ವಸಂಸ್ಥೆ ಏನನ್ನಾದರೂ ಮಾಡಬೇಕೆಂದು ಅವರು ಕರೆ ನೀಡಿದರು. ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರು ಜನಾಂಗೀಯ ಹತ್ಯೆಯನ್ನು ಜಗತ್ತು ಮೂಕಪ್ರೇಕ್ಷಕನಾಗಿ ವೀಕ್ಷಿಸಬಾರದೆಂದು ಅವರು ಹೇಳಿದರು.

 ಮ್ಯಾನ್ಮಾರ್‌ನ ಉತ್ತರದಲ್ಲಿರುವ ರಾಖೈನ್ ರಾಜ್ಯದಲ್ಲಿ ಸೇನೆಯ ದಮನ ಕಾರ್ಯಾಚರಣೆಗೆ ಹೆದರಿ ಇತ್ತೀಚಿನ ವಾರಗಳಲ್ಲಿ 10 ಸಾವಿರಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರು ನೆರೆಯ ಬಾಂಗ್ಲಾದೇಶಕ್ಕೆ ಪರಾರಿಯಾಗಿದ್ದಾರೆ.

    ಬಾಂಗ್ಲಾದಲ್ಲಿ ಆಶ್ರಯ ಪಡೆದಿರುವ ರೋಹಿಂಗ್ಯಾಗಳು ಭದ್ರತಾಪಡೆಗಳು ನಡೆಸುತ್ತಿರುವ ಸಾಮೂಹಿಕ ಅತ್ಯಾಚಾರ, ದೌರ್ಜನ್ಯ ಹಾಗೂ ಹತ್ಯಾಕಾಂಡದ ಬೀಭತ್ಸ ಕತೆಗಳನ್ನು ಸುದ್ದಿಗಾರರ ಮುಂದೆ ಬಹಿರಂಗಪಡಿಸಿದ್ದಾರೆ. ಆದರೆ ಮ್ಯಾನ್ಮಾರ್ ಸೇನೆಯು ರೋಹಿಂಗ್ಯಾಗಳ ಮೇಲೆ ಯಾವುದೇ ದೌರ್ಜನ್ಯ ನಡೆದಿರುವುದನ್ನು ತಳ್ಳಿಹಾಕಿದೆ. ಈ ಪ್ರದೇಶಕ್ಕೆ ವಿದೇಶಿ ಪತ್ರಕರ್ತರು ಹಾಗೂ ಸ್ವತಂತ್ರ ತನಿಖಾಧಿಕಾರಿಗ ಪ್ರವೇಶವನ್ನು ಕೂಡಾ ಅದು ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X