Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನೆಯಲ್ಲಿ ಕಳ್ಳತನ ಮಾಡಿ ಶಿಕ್ಷಕಿ ಜೊತೆ...

ಮನೆಯಲ್ಲಿ ಕಳ್ಳತನ ಮಾಡಿ ಶಿಕ್ಷಕಿ ಜೊತೆ ಬಾಲಕ ಪರಾರಿ

ಫಾಲೋ ದಿ ಟೀಚರ್ !

ವಾರ್ತಾಭಾರತಿವಾರ್ತಾಭಾರತಿ5 Dec 2016 3:38 PM IST
share
ಮನೆಯಲ್ಲಿ ಕಳ್ಳತನ ಮಾಡಿ ಶಿಕ್ಷಕಿ ಜೊತೆ ಬಾಲಕ ಪರಾರಿ

ಬರೇಲಿ,ಡಿ.5: 14ರ ಹರೆಯದ ಬಾಲಕನೋರ್ವ ಮನೆಯಿಂದ 8,000 ರೂ.ನಗದು ಮತ್ತು ಚಿನ್ನಾಭರಣಗಳನ್ನು ಕದ್ದುಕೊಂಡು ತನ್ನ ಶಾಲೆಯ 22ರ ಹರೆಯದ ಶಿಕ್ಷಕಿಯೊಡನೆ ಪರಾರಿಯಾಗಿದ್ದಾನೆ. ಶಿಕ್ಷಕಿ ಶಾಲೆಯ ಮಾಲಕನ ಮಗಳಾಗಿದ್ದಾಳೆ.

ಡಿ.1ರ ರಾತ್ರಿ ಬಾಲಕ ಪರಾರಿಯಾಗಿದ್ದು, ಆತ ಕಾಣೆಯಾಗಿರುವ ವಿಷಯ ಮನೆಯವರಿಗೆ ಮರುದಿನ ಬೆಳಿಗ್ಗೆಯಷ್ಟೇ ಗೊತ್ತಾಗಿತ್ತು. ತನ್ಮಧ್ಯೆ ಯುವತಿಯ ಮನೆಯವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಯುವತಿಯ ಪ್ರಚೋದನೆಯ ಮೇರೆಗೆ ತನ್ನ ಮಗ ಈ ಕೃತ್ಯವೆಸಗಿದ್ದಾನೆ. ಆಕೆಯ ನಡತೆ ಚೆನ್ನಾಗಿಲ್ಲ. ನಗನಾಣ್ಯಗಳ ಕಳ್ಳತನ ಮಾಡುವಂತೆ ಮತ್ತು ತನ್ನೊಂದಿಗೆ ಪರಾರಿ ಯಾಗುವಂತೆ ಆಕೆ ತನ್ನ ಮಗನಿಗೆ ಪುಸಲಾಯಿಸಿದ್ದಾಳೆ ಎಂದು ಇಲ್ಲಿಯ ಫರೀದ್‌ಪುರದ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿರುವ ಬಾಲಕನ ತಂದೆ ರಣವೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಬಾಲಕನ ಕುಟುಂಬವೇ ಈ ಪರಾರಿ ಯೋಜನೆಯನ್ನು ರೂಪಿಸಿದೆ. ತನ್ನ ಶಾಲೆಯಲ್ಲಿ ಕಲಿಸುತ್ತಿದ್ದ ಬಾಲಕನ ಕುಟುಂಬದ ಓರ್ವರನ್ನು ತಾನು ಕೆಲಸದಿಂದ ತೆಗೆದುಹಾಕಿದ್ದೆ. ಪ್ರತೀಕಾರ ತೀರಿಸಿಕೊಳ್ಳಲು ಆ ಕುಟುಂಬ ಈ ಸಂಚನ್ನು ನಡೆಸಿದೆ ಎಂದು ಯವತಿಯ ತಂದೆ ತಿಳಿಸಿದ್ದಾರೆ.

ಇದೊಂದು ವಿಲಕ್ಷಣ ಪ್ರಕರಣ. ತನ್ನ ಕುಟುಂಬದ ಸೂಚನೆಯ ಮೇರೆಗೆ ಬಾಲಕ ಯುವತಿಯನ್ನು ಅಪಹರಿಸಿದ್ದಾನೆ ಎಂದು ಆಕೆಯ ಕುಟುಂಬದವರು ದೂರಿದ್ದಾರೆ. ನಾವು ಬಾಲಕನ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆದರೆ ಮೇಲ್ನೋಟಕ್ಕೆ ಇದು ಹಾಗೆ ಕಂಡುಬರುತ್ತಿಲ್ಲ. ಬಹುಶಃ ಅವರಿಬ್ಬರೂ ಪರಸ್ಪರ ಪ್ರೇಮಿಸುತ್ತಿರಬೇಕು ಮತ್ತು ತಮ್ಮ ಕುಟುಂಬಗಳನ್ನು ಎದುರಿಸಲಾಗದೆ ಪರಾರಿಯಾಗಿರುವಂತಿದೆ. ಸದ್ಯಕ್ಕೆ ನಾವು ತನಿಖೆಯನ್ನು ಮುಂದುವರಿಸಿದ್ದೇವೆ ಎಂದು ಎಸ್‌ಪಿ ಯಮುನಾ ಪ್ರಸಾದ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X