Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಗದ್ದಲ ಮುಂದುವರಿಕೆ: ಲೋಕಸಭೆ ಕಲಾಪ...

ನೋಟು ಗದ್ದಲ ಮುಂದುವರಿಕೆ: ಲೋಕಸಭೆ ಕಲಾಪ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ5 Dec 2016 9:08 PM IST
share
ನೋಟು ಗದ್ದಲ ಮುಂದುವರಿಕೆ: ಲೋಕಸಭೆ ಕಲಾಪ ಮುಂದೂಡಿಕೆ

ಹೊಸದಿಲ್ಲಿ, ಡಿ.5: ಯಾವ ನಿಯಮದಡಿ ನೋಟು ಅಮಾನ್ಯ ನಿರ್ಧಾರ ಕುರಿತ ಚರ್ಚೆಯನ್ನು ಕೈಗೆತ್ತಿಕೊಳ್ಳಬೇಕು ಎಂಬ ಬಗ್ಗೆ ನಿರ್ಧಾರಕ್ಕೆ ಬರಲಾಗದೆ ಲೋಕಸಭೆಯಲ್ಲಿ ದಿನದ ಕಲಾಪ ರದ್ದಾಯಿತು.

 ನೋಟು ಅಮಾನ್ಯ ನಿರ್ಧಾರದ ಅನುಷ್ಠಾನದಲ್ಲಿ ಯಾವುದಾದರೂ ಕೊರತೆಯಾಗಿದ್ದರೆ ಈ ಕುರಿತು ವಿಪಕ್ಷಗಳು ನೀಡುವ ಸಲಹೆಯನ್ನು ಸ್ವೀಕರಿಸಲು ಸಿದ್ಧ ಎಂದು ಸರಕಾರ ತಿಳಿಸಿತು. ಯಾವ ನಿಯಮದಡಿ ಚರ್ಚೆ ನಡೆಸಬೇಕೆಂದು ಸ್ಪೀಕರ್ ನಿರ್ಧರಿಸಲಿ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಆದರೆ ನಿಮಯ 184ರಡಿ ಚರ್ಚೆ ನಡೆಯಬೇಕೆಂದು ವಿಪಕ್ಷಗಳು ಪಟ್ಟು ಹಿಡಿದವು. ಈ ನಿಯಮದಡಿಯ ಚರ್ಚೆಯಲ್ಲಿ ಧ್ವನಿಮತಕ್ಕೆ ಅವಕಾಶವಿದೆ. ಅದಾಗ್ಯೂ ಧ್ವನಿಮತಕ್ಕೆ ಅವಕಾಶ ನೀಡದ ನಿಯಮ 193ರಡಿ ಚರ್ಚೆ ನಡೆಯಲು ಯತ್ನ ನಡೆಯಿತು ಮತ್ತು ಟಿಆರ್‌ಎಸ್ ನಾಯಕ ಎ.ಪಿ.ಜಿತೇಂದರ್ ರೆಡ್ಡಿಯನ್ನು ಚರ್ಚೆ ಆರಂಭಿಸಲು ಸ್ವೀಕರ್ ಆಹ್ವಾನಿಸಿದರು. ಇದನ್ನು ವಿಪಕ್ಷಗಳು ಒಪ್ಪಲಿಲ್ಲ. ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಮಾತನಾಡಿ, ಕಳೆದ ಎರಡು ವಾರಗಳಿಂದ ನೋಟು ಅಮಾನ್ಯ ನಿರ್ಧಾರದ ಬಗ್ಗೆ ಸದಸ್ಯರು ಚರ್ಚೆಗೆ ಕಾಯುತ್ತಿದ್ದಾರೆ. ಈಗ ನಿಯಮ 193ರಡಿ ಚರ್ಚೆ ಆರಂಭಿಸಲಾಗಿದೆ ಎಂದರು.

  ಜಿತೇಂದರ್ ರೆಡ್ಡಿ ಮಾತನಾಡಲು ಮುಂದಾದಾಗ ಅವರನ್ನು ಸುತ್ತುವರಿದ ತೃಣಮೂಲ ಕಾಂಗ್ರೆಸ್ ಸದಸ್ಯರು ಅವರ ಮೈಕ್ರೋಫೋನ್ ಎಳೆದುಕೊಂಡು ಘೋಷಣೆ ಕೂಗುತ್ತಾ ಗದ್ದಲ ಆರಂಭಿಸಿದರು. ಈ ಮಧ್ಯೆ ಸದನದ ಬಾವಿಗೆ ಇಳಿದ ಕಾಂಗ್ರೆಸ್ ಸದಸ್ಯರು ಸರಕಾರದ ವಿರುದ್ಧ ಘೋಷಣೆ ಆರಂಭಿಸಿದರು. ಈ ಗದ್ದಲದ ಮಧ್ಯೆ ರೆಡ್ಡಿ ಚರ್ಚೆ ಆರಂಭಿಸದರೂ ಅವರ ಮಾತು ಗದ್ದಲದಲ್ಲಿ ಮುಳುಗಿ ಹೋಯಿತು. ಅನಿವಾರ್ಯವಾಗಿ ಸದನದ ಕಲಾಪವನ್ನು ಅಪರಾಹ್ನ 2.10ಕ್ಕೆ ಮುಂದೂಡಲಾಯಿತು. ಕಲಾಪ ಮುಂದೂಡಿದ ಬಳಿಕ ರೆಡ್ಡಿಯರನ್ನು ಸುತ್ತುವರಿದಿದ್ದ ತೃಣಮೂಲ ಕಾಂಗ್ರೆಸ್ ಸದಸ್ಯರು ರೆಡ್ಡಿಯವರಿಗೆ ಹಸ್ತಲಾಘವ ನೀಡುತ್ತಿದ್ದುದು ಕಂಡು ಬಂದಿತು. ಬಳಿಕ ಗೃಹಸಚಿವ ರಾಜನಾಥ್ ಸಿಂಗ್ ಅವರ ಬಳಿ ಹೋದ ರೆಡ್ಡಿ ಕೆಲ ಹೊತ್ತು ಮಾತಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X