Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಜಾಬ್‌ಧಾರಿ ಪೊಲೀಸ್ ಅಧಿಕಾರಿಯನ್ನು...

ಹಿಜಾಬ್‌ಧಾರಿ ಪೊಲೀಸ್ ಅಧಿಕಾರಿಯನ್ನು ‘ಐಸಿಸ್’ ಎಂದು ಕರೆದ ದುಷ್ಕರ್ಮಿ

ವಾರ್ತಾಭಾರತಿವಾರ್ತಾಭಾರತಿ5 Dec 2016 9:18 PM IST
share
ಹಿಜಾಬ್‌ಧಾರಿ ಪೊಲೀಸ್ ಅಧಿಕಾರಿಯನ್ನು ‘ಐಸಿಸ್’ ಎಂದು ಕರೆದ ದುಷ್ಕರ್ಮಿ

 ನ್ಯೂಯಾರ್ಕ್, ಡಿ. 5: ಹಿಜಾಬ್‌ಧಾರಿ ಮುಸ್ಲಿಮ್ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಬಿಳಿಯ ವ್ಯಕ್ತಿಯೊಬ್ಬ ‘ಐಸಿಸ್’ ಎಂದು ಕರೆದು, ‘ನಿಮ್ಮ ದೇಶಕ್ಕೆ ಹಿಂದಿರುಗಿ’ ಎಂದು ಹೇಳಿದ ಘಟನೆ ಬ್ರೂಕ್ಲಿನ್‌ನಲ್ಲಿ ಶನಿವಾರ ನಡೆದಿದೆ. ಅಷ್ಟೇ ಅಲ್ಲದೆ, ಮಹಿಳೆಯ 16 ವರ್ಷದ ಮಗನನ್ನು ದುಷ್ಕರ್ಮಿಯು ದೂಡಿ ಹಾಕಿದ್ದಾನೆ.

ಅಮೆರಿಕದಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಜಯ ಗಳಿಸಿದ ಬಳಿಕ, ಹಿಜಾಬ್‌ಧಾರಿ ಮಹಿಳೆಯರ ಮೇಲೆ ಆಕ್ರಮಣಗಳು ಹೆಚ್ಚಾಗುತ್ತಿರುವುದನ್ನು ಸ್ಮರಿಸಬಹುದಾಗಿದೆ.

ಕರ್ತವ್ಯದಲ್ಲಿರದ ಪೊಲೀಸ್ ಅಧಿಕಾರಿ ಅಮಲ್ ಎಲ್ಸೋಕರಿ ಬ್ರೂಕಿನ್‌ನಲ್ಲಿ ತನ್ನ ಮಗನನ್ನು ಬಿಟ್ಟು ಹೋಗಿದ್ದರು. ತನ್ನ ಕಾರನ್ನು ನಿಲ್ಲಿಸಿ ಅವರು ವಾಪಸಾದಾಗ, ಬಿಳಿಯ ವ್ಯಕ್ತಿಯೊಬ್ಬ ತನ್ನ ಮಗನನ್ನು ತಳ್ಳುವುದನ್ನು ಗಮನಿಸಿದರು.

ಅಲ್ಲಿಗೆ ಮಹಿಳೆ ಹೋದಾಗ, ಆ ವ್ಯಕ್ತಿಯು ಮಹಿಳೆಯನ್ನು ಉದ್ದೇಶಿಸಿ, ‘‘ಐಸಿಸ್, ನಾನು ನಿನ್ನ ಗಂಟಲು ಕತ್ತರಿಸುತ್ತೇನೆ, ನಿನ್ನ ದೇಶಕ್ಕೆ ವಾಪಸ್ ಹೋಗು’’ ಎಂದು ಹೇಳಿದನೆನ್ನಲಾಗಿದೆ.ಬಳಿಕ ದುಷ್ಕರ್ಮಿಯು ಪರಾರಿಯಾದನು. ಆತನನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.


ಶೌರ್ಯ ಪ್ರಶಸ್ತಿ ಪಡೆದಿದ್ದ ‘ಹೀರೊ’

ಅಮಲ್ ಎಲ್ಸೋಕರಿ ಕರ್ತವ್ಯದಲ್ಲಿರುವಾಗಲೂ ಹಿಜಾಬ್ ಧರಿಸುತ್ತಾರೆ. ಅವರು 2014ರ ಎಪ್ರಿಲ್‌ನಲ್ಲಿ ಉರಿಯುತ್ತಿರುವ ಕಟ್ಟಡದ ಒಳಗೆ ಧಾವಿಸಿ ಓರ್ವ ವೃದ್ಧ ಮತ್ತು ಹೆಣ್ಣು ಮಗುವೊಂದನ್ನು ರಕ್ಷಿಸಿದ್ದರು. ಅದಕ್ಕಾಗಿ ನ್ಯೂಯಾರ್ಕ್ ನಗರದ ಮೇಯರ್ ಅವರನ್ನು ‘ಹೀರೊ’ ಎಂಬುದಾಗಿ ಕರೆದಿದ್ದರು.

ಅಮೆರಿಕದ ಮೇಲೆ 2001 ಸೆಪ್ಟಂಬರ್ 11ರಂದು ನಡೆದ ಭಯೋತ್ಪಾದಕ ದಾಳಿ ನಡೆದ ಬಳಿಕ ಅಮಲ್ ಪೊಲೀಸ್ ಪಡೆಗೆ ಸೇರ್ಪಡೆಗೊಂಡಿದ್ದರು. ‘‘ಅಂದು ನಡೆದ ಭಯೋತ್ಪಾದಕ ದಾಳಿ ಇಸ್ಲಾಮ್‌ನ ಬೋಧನೆಗಳಿಗೆ ವಿರುದ್ಧವಾಗಿದೆ ಎಂಬುದನ್ನು ತೋರಿಸುವುದಕ್ಕಾಗಿ ಅಮಲ್ ಪೊಲೀಸ್ ಇಲಾಖೆಗೆ ಸೇರಿದ್ದಾರೆ’’ ಎಂಬುದಾಗಿ 2014ರಲ್ಲಿ ನಡೆದ ಔತಣಕೂಟವೊಂದರಲ್ಲಿ ಮೇಯರ್ ಡಿ ಬ್ಲಾಸಿಯೊ ಶ್ಲಾಘಿಸಿದ್ದರು.
ತನ್ನ ಶೌರ್ಯಕ್ಕಾಗಿ ಐದು ಮಕ್ಕಳ ತಾಯಿ ಶೌರ್ಯ ಪದಕವನ್ನೂ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X