ಬೆಳ್ತಂಗಡಿ: ಕಾಯಿಲೆಯಿಂದ ವ್ಯಕ್ತಿಯ ಆತ್ಮಹತ್ಯೆ
ಬೆಳ್ತಂಗಡಿ, ಡಿ.5 : ಉಜಿರೆ ಗ್ರಾಮದ ರೆಂಜಾಳದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಲ್ಲಿನ ನಿವಾಸಿ ಚಂದ್ರಶೇಖರ (43) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು.
ಕಾಯಿಲೆಯಿಂದ ಬಳಲುತ್ತಿದ್ದ ಇವರು ಮನನೊಂದು ಭಾನುವಾರ ಸಂಜೆ ಮನೆಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದು , ತಕ್ಷಣ ಇವರನ್ನು ಪತ್ನಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಒಂದು ಮಗುವನ್ನು ಅಗಲಿದ್ದಾರೆ.
Next Story