Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 14,000 ಕೋ.ರೂ.ಕಪ್ಪುಹಣ ಘೋಷಿಸಿದ್ದ ಶಾ...

14,000 ಕೋ.ರೂ.ಕಪ್ಪುಹಣ ಘೋಷಿಸಿದ್ದ ಶಾ ಈಗ ವಿಚಾರಣಾಧಿಕಾರಿಗಳ ಎದುರು ತುಟಿ ಬಿಚ್ಚುತ್ತಿಲ್ಲ

ವಾರ್ತಾಭಾರತಿವಾರ್ತಾಭಾರತಿ6 Dec 2016 4:20 PM IST
share
14,000 ಕೋ.ರೂ.ಕಪ್ಪುಹಣ ಘೋಷಿಸಿದ್ದ ಶಾ ಈಗ ವಿಚಾರಣಾಧಿಕಾರಿಗಳ ಎದುರು ತುಟಿ ಬಿಚ್ಚುತ್ತಿಲ್ಲ

ಅಹ್ಮದಾಬಾದ್.ಡಿ.6: ಕಮಿಷನ್ ಆಸೆಗಾಗಿ ಪ್ರಭಾವಿ ವ್ಯಕ್ತಿಗಳದ್ದೆನ್ನಲಾಗಿರುವ 13,860 ಕೋ.ರೂ.ಗಳ ಬೃಹತ್ ಕಪ್ಪುಹಣವನ್ನು ಆದಾಯ ಬಹಿರಂಗ ಯೋಜನೆಯಡಿ ಘೋಷಿಸಿ ಪೇಚಿಗೆ ಸಿಲುಕಿರುವ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ ಶಾ ಈಗ ಆದಾಯ ತೆರಿಗೆ ಅಧಿಕಾರಿಗಳ ಪಾಲಿಗೆ ಕಬ್ಬಿಣದ ಕಡಲೆಯಂತಾಗಿದ್ದಾನೆ. ಜಪ್ಪಯ್ಯ ಎಂದರೂ ಆತ ಬಾಯಿ ಬಿಡುತ್ತಿಲ್ಲ.

ಸೋಮವಾರ ಆರು ಗಂಟೆಗಳ ಕಾಲ ನಡೆಸಿದ ವಿಚಾರಣೆ ವೇಳೆ ಆತ ತ ದಿಗೆ ಸಹಕರಿಸಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. 1,560 ಕೋ.ರೂ.ಗಳ ಮೊದಲ ಕಂತಿನ ತೆರಿಗೆ ತುಂಬುವ ಸಮಯ ಸನ್ನಿಹಿತವಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಶಾ ಸೋಮವಾರ ಟಿವಿ ಸ್ಟುಡಿಯೊವೊಂದರಲ್ಲಿ ದಿಢೀರ್ ಪ್ರತ್ಯಕ್ಷನಾದ ಬಳಿಕ ಯಾರ ಕಪ್ಪುಹಣವನ್ನು ಬಿಳಿ ಮಾಡಲು ತಾನು ಮುಂದಾಗಿದ್ದೆನೋ ಅವರ ಹೆಸರುಗಳನ್ನು ಬಹಿರಂಗಗೊಳಿಸುವುದಾಗಿ ಹೇಳಿದ್ದ.

ಉಪ ನಿರ್ದೇಶಕ(ತನಿಖೆ) ವಿನಯ್ ಕೌಶಲ್ ನೇತೃತ್ವದ ಆದಾಯ ತೆರಿಗೆ ಅಧಿಕಾರಿಗಳ ತಂಡವು ಶಾ ವಿಚಾರಣೆಯನ್ನು ದಾಖಲಿಸಿಕೊಂಡಿದೆ. ಆತ ತನಿಖೆಗೆ ಸಹಕರಿಸುತ್ತಿಲ್ಲ. ಮಾಹಿತಿಗಳನ್ನು ನೀಡಲು 2-3 ದಿನಗಳ ಸಮಯಾವಕಾಶ ಕೋರಿದ್ದಾನೆ. ಅಲ್ಲದೆ ತನ್ನ ಪತ್ನಿ ಅನಾರೋಗ್ಯಕ್ಕೆ ಗುರಿಯಾಗಿದ್ದಾಳೆ ಎಂದೂ ಹೇಳಿಕೊಂಡಿದ್ದಾನೆ. ಆತ ತನಿಖೆಗೆ ಸಹಕರಿಸದಿದ್ದರೆ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಿರ್ದೇಶಕ(ತನಿಖೆ) ಪಿ.ಸಿ.ಮೋದಿ ತಿಳಿಸಿದರು. ತನಿಖೆಯ ವೇಳೆ ಹೃದ್ರೋಗಿಯಾಗಿರುವ ಶಾ ಹುಷಾರಿಲ್ಲ ಎಂದು ಹೇಳಿದ್ದರಿಂದ ಅಧಿಕಾರಿಗಳು ವೈದ್ಯರ ತಂಡವೊಂದನ್ನು ಕರೆಸಿದ್ದರು.

ಆದಾಯ ತೆರಿಗೆ ಇಲಾಖೆಯು 15 ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಗಳ ಸಂದರ್ಭ ವಶಪಡಿಸಿಕೊಂಡಿರುವ ದಾಖಲೆಗಳು ಈಗ ಕರ್ನಾಟಕಕ್ಕೆ ಸ್ಥಳಾಂತರ ಗೊಂಡಿರುವ ಗುಜರಾತಿನ ಓರ್ವ ರಾಜಕಾರಣಿ ಮತ್ತು ರಾಜಕೋಟ್‌ನ ಟ್ರಾವೆಲ್ ಉದ್ಯಮಿ ಜೊತೆಗೆ ಶಾ ನಿಕಟ ಸಂಬಂಧ ಹೊಂದಿದ್ದ ಎನ್ನುವುದನ್ನು ಬೆಟ್ಟುಮಾಡುತ್ತಿವೆ. ಶಾ ಘೋಷಿಸಿದ್ದ ಕಪ್ಪುಹಣ ಈ ವ್ಯಕ್ತಿಗಳಿಗೆ ಸೇರಿದ್ದೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಮೂಲವೊಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X