Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಗತ್ತಿನ ಅತ್ಯಂತ ತೂಕದ ಮಹಿಳೆಗೆ...

ಜಗತ್ತಿನ ಅತ್ಯಂತ ತೂಕದ ಮಹಿಳೆಗೆ ಭಾರತದಿಂದ ನೆರವು

ವಿವರಗಳಿಗೆ ಕ್ಲಿಕ್ ಮಾಡಿ

ವಾರ್ತಾಭಾರತಿವಾರ್ತಾಭಾರತಿ6 Dec 2016 6:42 PM IST
share
ಜಗತ್ತಿನ ಅತ್ಯಂತ ತೂಕದ ಮಹಿಳೆಗೆ ಭಾರತದಿಂದ ನೆರವು

ಕೈರೋ, ಡಿ. 6: ಈಜಿಪ್ಟ್‌ನ 36 ವರ್ಷದ ಪ್ರಜೆ, ಜಗತ್ತಿನ ಅತಿ ಭಾರದ ಮಹಿಳೆಗೆ ಚಿಕಿತ್ಸೆ ಪಡೆಯಲು ಭಾರತದ ವೀಸಾ ನಿರಾಕರಿಸಲಾಗಿತ್ತು ಎನ್ನುವ ವಿಷಯ ಬೆಳಕಿಗೆ ಬಂದಿದೆ.

ಆದರೆ, ಈ ವಿಷಯವನ್ನು ಮಹಿಳೆಯ ವೈದ್ಯರು ಟ್ವಿಟರ್ ಮೂಲಕ ಭಾರತದ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್‌ರ ಗಮನಕ್ಕೆ ತಂದ ಬಳಿಕ ಈ ವಿವಾದ ಅಂತ್ಯಗೊಂಡಿದೆ.

ಮುಂಬೈಯ ಸರ್ಜನ್ ಡಾ. ಮುಫ್ಪಿ ಲಕ್ಡಾವಾಲಾ ನಿನ್ನೆ ವಿದೇಶ ಸಚಿವರಿಗೆ ಈ ವಿಷಯವನ್ನು ಟ್ವೀಟ್ ಮಾಡಿದ್ದರು. ‘‘ಮೇಡಂ, ತನ್ನ ಪ್ರಾಣ ಉಳಿಸುವಂತೆ 500 ಕೆಜಿ ತೂಗುವ ಈಜಿಪ್ಟ್‌ನ ಇಮಾನ್ ಅಹ್ಮದ್ ನನ್ನಲ್ಲಿ ವಿನಂತಿಸಿದ್ದಾರೆ. ಅವರಿಗೆ ವೈದ್ಯಕೀಯ ವೀಸಾವೊಂದನ್ನು ದೊರಕಿಸಿಕೊಡಲು ದಯವಿಟ್ಟು ನನಗೆ ಸಹಾಯ ಮಾಡಿ. ಸಾಮಾನ್ಯ ಪ್ರಕ್ರಿಯೆಯಲ್ಲಿ ವೀಸಾ ನಿರಾಕರಿಸಲಾಗಿದೆ’’ ಎಂಬುದಾಗಿ ಅವರು ಟ್ವೀಟ್ ಮಾಡಿದ್ದರು.

ಮೂತ್ರಪಿಂಡದ ವೈಫಲ್ಯಕ್ಕಾಗಿ ಈಗ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಶ್ಮಾ ಅದೇ ದಿನ ವೈದ್ಯರಿಗೆ ಟ್ವೀಟ್ ಮಾಡಿದ್ದಾರೆ. ‘‘ಈ ವಿಷಯವನ್ನು ನನ್ನ ಗಮನಕ್ಕೆ ತಂದಿರುವುದಕ್ಕಾಗಿ ಧನ್ಯವಾದ. ನಾವು ಅವರಿಗೆ ಖಂಡಿತವಾಗಿಯೂ ಸಹಾಯ ಮಾಡುತ್ತೇವೆ’’ ಎಂಬುದಾಗಿ ಸುಶ್ವಾ ಟ್ವೀಟ್ ಮಾಡಿದರು.

ಇಮಾನ್ ಅಹ್ಮದ್ ಅಬ್ದುಲಾಟಿ ಈಜಿಪ್ಟ್‌ನ ಅಲೆಕ್ಸಾಂಡ್ರಿಯದಲ್ಲಿ ವಾಸಿಸುತ್ತಿದ್ದಾರೆ. 25 ವರ್ಷಗಳ ಹಿಂದೆ ಅವರು 11 ವರ್ಷದವರಾಗಿದ್ದಾಗ ಅವರು 500 ಕೆಜಿ ತೂಗಿದ್ದರು. ಅಂದಿನಿಂದ ಅವರು ತನ್ನ ಮನೆಯಿಂದ ಹೊರಬಂದಿಲ್ಲ. ಅವರಿಗೆ ನಡೆಯಲು ಅಥವಾ ಹಾಸಿಗೆಯಲ್ಲಿ ಹೊರಳಲೂ ಆಗುತ್ತಿಲ್ಲ ಎಂದು ‘ಅಲ್‌ಅರೇಬಿಯ.ನೆಟ್’ ವರದಿ ಮಾಡಿದೆ.

ಅಬ್ದುಲಾಟಿಯ ಸಮಸ್ಯೆ ಹುಟ್ಟಿನಿಂದಲೇ ಆರಂಭವಾಗಿತ್ತು. ಆಕೆ ಹುಟ್ಟುವಾಗಲೇ 5 ಕೆಜಿ ತೂಗುತ್ತಿದ್ದರು. ಆಕೆಯ ಭಾರವನ್ನು ಹೊರಲು ಕಾಲುಗಳಿಗೆ ಅಸಾಧ್ಯವಾದ ಕಾರಣ ಅವರು ಚಿಕ್ಕವರಿರುವಾಗಲೇ ಅಂಬೆಗಾಲಿನಲ್ಲಿ ನಡೆಯಲು ಆರಂಭಿಸಿದರು. ವಯಸ್ಸು 11 ಆದಾಗ ಆಕೆ ಇನ್ನಷ್ಟು ತೂಕವನ್ನು ಸೇರಿಸಿಕೊಂಡರು.

ಆಗ ಅವರು ಶಾಲೆಗೆ ಹೋಗುವುದನ್ನು ನಿಲ್ಲಿಸಿದರು. ಬಳಿಕ ಅವರು ಮೆದುಳಿನ ಪಾರ್ಶ್ವವಾಯುವಿಗೆ ಒಳಗಾದರು. ಅದರಿಂದಾಗಿ ಅವರು ಇಂದಿಗೂ ಹಾಸಿಗೆಯನ್ನು ಬಿಟ್ಟು ಏಳಲು ಸಾಧ್ಯವಾಗಿಲ್ಲ.

ಗಡ್ಕರಿ, ವೆಂಕಯ್ಯಗೂ ಚಿಕಿತ್ಸೆ ನೀಡಿದ್ದ ವೈದ್ಯ
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ವೆಂಕಯ್ಯ ನಾಯ್ಡು, ಕೈಗಾರಿಕೋದ್ಯಮಿ ದಿಲೀಪ್ ಪಿರಾಮಾಳ್, ರಾಜಕಾರಣಿಗಳಾದ ಅನಿಲ್ ದೇಶ್‌ಮುಖ್ ಮತ್ತು ನಿತಿನ್ ರಾವುತ್ ಹಾಗೂ ಬಾಲಿವುಡ್ ತಾರೆ ಸಲ್ಮಾನ್ ಖಾನ್‌ರ ತಾಯಿ ಸಲ್ಮಾ ಅವರಿಗೂ ಬೊಜ್ಜು ಕರಗಿಸುವ ಚಿಕಿತ್ಸೆಯನ್ನು ವೈದ್ಯ ಡಾ. ಲಕ್ಡಾವಾಲ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X