Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಲೀಂ ಮದನಿ ಯೋಜನೆಗೆ ವಿನಯಕುಮಾರ್ ಸೊರಕೆ...

ಸಲೀಂ ಮದನಿ ಯೋಜನೆಗೆ ವಿನಯಕುಮಾರ್ ಸೊರಕೆ ಮೆಚ್ಚುಗೆ

ಉಚ್ಚಿಲದಲ್ಲಿ ಮೀಲಾದ್ ಜಲ್ಸಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 Dec 2016 7:07 PM IST
share
ಸಲೀಂ ಮದನಿ ಯೋಜನೆಗೆ ವಿನಯಕುಮಾರ್ ಸೊರಕೆ ಮೆಚ್ಚುಗೆ

ಮಂಗಳೂರು, ಡಿ. 6: ಉಚ್ಚಿಲ ಸಮೀಪದ ಎಲ್ಲೂರು ಹಿರಾನಗರದಲ್ಲಿ 6 ಎಕರೆ ಪ್ರದೇಶದಲ್ಲಿ 100 ಮಂದಿ ಬಡವರಿಗೆ ಮನೆ ನಿರ್ಮಿಸಿಕೊಡುವ ದಾರುಲ್ ಅಮಾನ್‌ನ ಮುಖ್ಯಸ್ಥ ಸಲೀಂ ಮದನಿ ಕುತ್ತಾರು ಅವರ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು, ಅಭಿವೃದ್ಧಿ ಕೆಲಸಗಳಿಗೆ ಪ್ರಥಮ ಆದ್ಯತೆ ನೆಲೆಯಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಅವರು ದಾರುಲ್ ಅಮಾನ್ ಎಜುಕೇಶನಲ್ ಅಕಾಡಮಿ ವತಿಯಿಂದ ಎಲ್ಲೂರಿನ ಹಿರಾನಗಲ್ಲಿ ಸೋಮವಾರ ನಡೆದ ‘ಮೀಲಾದ್ ಜಲ್ಸಾ -2016’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಅನಾಥರ ಹಾಗೂ ಕಡುಬಡವರ ಬಗ್ಗೆ ಕಾಳಜಿಯನ್ನು ವಹಿಸಿ ಅವರಿಗೆ ಸೂರು ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯನ್ನು ಹೊಂದಿರುವ ಸಲೀಂ ಮದನಿ ಅವರು ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ರಕ್ಷಣಾ ಕವಚವಾಗಿ ನಿಂತಿದ್ದಾರೆ. ಗುರಿ ಅಥವಾ ಉದ್ದೇಶಗಳ ಈಡೇರಿಕೆಗೆ ಯೋಜನೆಗಳು ಹಲವಾರು ಇದ್ದರೂ ದೂರದೃಷ್ಟಿ ಅತ್ಯಗತ್ಯವಾಗಿದೆ. ಈ ಬಗ್ಗೆ ಯೋಜನೆಯನ್ನು ಸಿದ್ಧಪಡಿಸಿ, ಕೋರಿಕೆಯನ್ನು ಸರಕಾರಕ್ಕೆ ಸಲ್ಲಿಸಿದರೆ ಅನುದಾನ ಪಡೆಯಲು ಅವಕಾಶ ಇರುತ್ತದೆ. ಶಾಸಕನ ನೆಲೆಯಲ್ಲಿ ಸಂಸ್ಥೆಯ ಯೋಜನೆಗೆ ಎಲ್ಲಾ ಸಹಕಾರವನ್ನು ನೀಡುವುದಾಗಿ ಶಾಸಕರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ದಾರುಲ್ ಅಮಾನ್ ಎಜುಕೇಶನಲ್ ಅಕಾಡಮಿಯ ಅಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ದುವಾ ನೆರವೇರಿಸಿ, ಮಜ್ಲಿಸ್‌ನ ನೇತೃತ್ವ ವಹಿಸಿದ್ದರು. ಉಚ್ಚಿಲ ಜುಮಾ ಮಸೀದಿಯ ಖತೀಬ್ ಇಸ್ಹಾಖ್ ಫೈಝಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.

ಮೂಡಬಿದ್ರೆಯ ಮುಈನುಸ್ಸುನ್ನ ಸಂಸ್ಥೆಯ ಮುದರ್ರಿಸ್ ನೌಫಲ್ ಸಖಾಫಿ ಕಳಸ ಮಾತನಾಡಿ, ನೂತನ ವಾದಗಳಿಗೆ ಕಿವಿಗೊಡದೆ, ಸುನ್ನತ್ ಆಶಯಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಮಿನ ಹೆಸರಿನಲ್ಲಿ ಹರಿದಾಡುತ್ತಿರುವ ಬರಹಗಳ ಪೈಕಿ ಎಲ್ಲವೂ ಸತ್ಯವಲ್ಲ. ಈ ಬರಹಗಳನ್ನು ಇತರರಿಗೆ ರವಾನಿಸುವಾಗ ಎಚ್ಚರಿಕೆ ವಹಿಸುವಂತೆ ಅವರು ಯುವ ಜನತೆಗೆ ಕಿವಿಮಾತು ಹೇಳಿದರು.

 ವೌಲಾನ ಉವೈಸ್ ಮಂಝರಿ ಹುಬ್ಬಳ್ಳಿ ಮಾತನಾಡಿ, ದೇವರ ಸ್ಮರಣೆ ಮತ್ತು ಪ್ರವಾದಿ ಮುಹಮ್ಮದ್ (ಸ) ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಇಹ-ಪರ ಲೋಕದಲ್ಲಿ ವಿಜಯಿಯಾಗಲು ಸಾಧ್ಯವಿದೆ ಎಂದರು.

ದಾರುಲ್ ಅಮಾನ್ ಎಜುಕೇಶನಲ್ ಅಕಾಡಮಿಯ ಜನರಲ್ ಮ್ಯಾನೇಜರ್ ಅಲ್‌ಹಾಜ್ ಸಲೀಂ ಮದನಿ ಕುತ್ತಾರು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ, ಎಸೆಸೆಫ್ ಉಡುಪಿ ಜಿಲ್ಲಾಧ್ಯಕ್ಷ ಪಿ.ಎಂ.ಅಶ್ರಫ್ ಅಂಜದಿ, ಉಡುಪಿ ಜಿ.ಪಂ. ಸದಸ್ಯೆ ಶಿಲ್ಪ ಸುವರ್ಣ, ಮುಹಮ್ಮದ್ ಗೌಸ್, ಗುಲಾಂ ಮುಹಮ್ಮದ್, ಯಶವಂತ ಶೆಟ್ಟಿ, ಯು.ಸಿ.ಶೇಖಬ್ಬ ಉಚ್ಚಿಲ, ರಹೀಂ ಕುಂಜೂರು, ಹಾಜಿ ಎಂ.ಎಸ್.ರಝಾಕ್, ಮಯ್ಯದ್ದಿ, ಎನ್.ಎಚ್.ಸಿರಾಜ್ ಉಚ್ಚಿಲ್, ಅಡ್ವಕೇಟ್ ಹಂಝತ್ ಹೆಜಮಾಡಿ, ಉಸ್ಮಾನ್, ಉಡುಪಿ ಜಿಲ್ಲಾ ಮೀನುಗಾರಿಕಾ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಗಂಗಾಧರ ಸುವರ್ಣ, ಗಂಗಾಧರ ಕಾಪು, ಹಾಜಿ ಸಮೀವುಲ್ಲಾಹ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X