Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಯಲಲಿತಾ ಮತ್ತು ಕರಾವಳಿಯ ನಂಟು

ಜಯಲಲಿತಾ ಮತ್ತು ಕರಾವಳಿಯ ನಂಟು

ವಾರ್ತಾಭಾರತಿವಾರ್ತಾಭಾರತಿ6 Dec 2016 8:06 PM IST
share
ಜಯಲಲಿತಾ ಮತ್ತು ಕರಾವಳಿಯ ನಂಟು

ಮಂಗಳೂರು,ಡಿ.6:ತಮಿಳು ನಾಡಿನ ಮುಖ್ಯ ಮಂತ್ರಿ ಜಯಲಲಿತಾ ಬಾಲ್ಯದಿಂದಲೇ ಕರಾವಳಿಯ ಜನರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನುವುದಕ್ಕೆ ಹಲವು ಪುರಾವೆಗಳಿವೆ.

ಅವರು  ತಾಯಿಯ ಜೊತೆ ಬಾಲ ನಟಿಯಾಗಿ  ಕರಾವಳಿಯ ಮತ್ತು ತುಳು ರಂಗ ಭೂಮಿಯ ಖ್ಯಾತ ನಿರ್ದೇಶಕ ಆರೂರು ಪಟ್ಟಾಭಿಯವರ ಮೂಲಕ ಕನ್ನಡ ಚಿತ್ರ ರಂಗವನ್ನು ಪ್ರವೇಶಿಸಿರುವುದು ಎಂದು ಆರೂರು ಪಟ್ಟಾಭಿಯವರ ಕುಟುಂಬದ ಸದಸ್ಯರಾದ ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ.

         ತುಳು ಚಲನ ಚಿತ್ರದ ‘ಬೀಸತ್ತಿ ಬಾಬು ’,‘ಕರಿಯಣಿ ಕಟ್ಟಂದಿ ಕಂಡನಿ’,ಮೊದಲಾದ ಖ್ಯಾತ ಚಿತ್ರಗಳ ನಿರ್ದೇಶಕ ಆರೂರು ಪಟ್ಟಾಭಿಯವರು ಕರಾವಳಿಯ ಆರೂರಿನವರು.

1961ರಲ್ಲಿ ಜಯಲಲಿತಾ ತನ್ನ ತಾಯಿ (ವೇದವಲ್ಲಿ) ನಟಿ ಸಂಧ್ಯಾ ಜೊತೆ ಮದ್ರಾಸಿನಲ್ಲಿ ಆರೂರು ಪಟ್ಟಾಭಿಯವರ ‘ಶ್ರೀ ಶೈಲ ಮಹಾತ್ಮೆ ’ಎಂಬ ಕನ್ನಡ ಚಲನಚಿತ್ರದ ಮೂಲಕ ತನ್ನ ಹನ್ನೆರಡನೆ ವಯಸ್ಸಿನಲ್ಲಿ ಬಾಲನಟಿಯಾಗಿ ನಟಿಸುತ್ತಾರೆ.ತಾಯಿಯೂ ಆ ಸಂದರ್ಭದಲ್ಲಿ ಮೈಸೂರು ತೊರೆದು ಸಿನಿಮಾ ನಟಿಯಾಗಿಮದ್ರಾಸು ಸೇರಿದ್ದರು.‘‘ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರಾದ ಆರೂರು ಪಟ್ಟಾಭಿಯವರು ಆ ಕಾಲದಲ್ಲಿ ಅತ್ಯಂತ ಹೆಚ್ಚು ತುಳು ಚಲನಚಿತ್ರವನ್ನು ನಿರ್ದೇಶಿಸಿದವರು.ಈ ಕಪ್ಪು ಬಿಳುಪು ಚಲನಚಿತ್ರ ರಾಷ್ಟ್ರಮಟ್ಟದ ಪುರಸ್ಕಾರವನ್ನು ಪಡೆದಿದೆ.

ಮತ್ತೊಂದು ವಿಶೇಷವೆಂದರೆ ಈ ಚಲನ ಚಿತ್ರದಲ್ಲಿ ಆರೂರು ಪಟ್ಟಾಭಿಯವರ ಪತ್ನಿ ಸಿ.ಎಸ್.ಸರೋಜಿನಿಯವರು ಒಂದು ಹಾಡು ಹಾಡಿದ್ದಾರೆ. ಜಯಲಲಿತಾ ಕೊಲ್ಲೂರು ಮುಕಾಂಬಿಕೆಯ ಪರಮ ಭಕ್ತೆಯಾಗಿದ್ದ ಕಾರಣ ಕೆಲವು ಬಾರಿ ಕೊಲ್ಲೂರಿಗೆ ಬಂದ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಹಾದು ಹೋಗಿದ್ದಾರೆ’’ಎಂದು ಜಯಲಲಿತಾ ಅವರು ಕರಾವಳಿ ತುಳುನಾಡಿನ ಜೊತೆಗೆ ಇದ್ದ ಸಂಪರ್ಕದ ಬಗ್ಗೆ ಪ್ರದೀಪ್ ಕುಮಾರ್ ಕಲ್ಕೂರ ನೆನಪಿಸಿಕೊಳ್ಳುತ್ತಾರೆ.

     ಕರಾವಳಿಯಲ್ಲಿ ನೆಲೆಸಿರುವ ತಮಿಳರು ತಮಿಳುನಾಡಿನ ಮುಖ್ಯ ಮಂತ್ರಿ ಜಯಲಲಿತ ಜೊತೆಗಿಂತ ಹೆಚ್ಚಾಗಿ ಕರ್ನಾಟಕ ರಾಜ್ಯದ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕಾರಣದಿಂದ ಸಾರ್ವಜನಿಕ ಸಂತಾಪ ಕಾರ್ಯಕ್ರಮಗಳು ಹೆಚ್ಚಾಗಿ ಕಂಡು ಬರಲಿಲ್ಲ.ಆದರೆ ಬಡವರ ಬಗ್ಗೆ ಜನಸಾಮಾನ್ಯರ ಬಗ್ಗೆ ಕಾಳಜಿ ಹೊಂದಿದ್ದ ಮಹಿಳಾ ನಾಯಕಿ ಜಯಲಲಿತಾ ಆಗಿದ್ದರು . ಅವರಿಗೆ ಈ ರೀತಿಯ ಸಾವು ಬರಬಾರದಿತ್ತು ಎನ್ನುವ ಅನುಕಂಪ ,ಸಂತಾಪ ಕರಾವಳಿಯ ಸಾರ್ವಜನಿಕ ವಲಯದಲ್ಲೂ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X