ಭರತನಾಟ್ಯ : ಸ್ವಾತಿ ಭಟ್ ರಾಜ್ಯಮಟ್ಟಕ್ಕೆ ಆಯ್ಕೆ
.jpg)
ಕೊಣಾಜೆ, ಡಿ.6 : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ಶ್ರೀ ವಿದ್ಯಾವಿನಾಯಕ ಯುವಕಮಂಡಲ ಹಾಗೂ ರಜತ ಸೇವಾ ಟ್ರಸ್ಟ್ ಹಳೆಯಂಗಡಿ ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಯುವಜನೋತ್ಸವದ ಭರತನಾಟ್ಯ ಸ್ಪರ್ಧೆಯಲ್ಲಿ ಅಸೈಗೊಳಿಯ ಸ್ವಾತಿ ಭಟ್ ಪಿ. ಅವರು ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ವಿದ್ವಾನ್ ಪ್ರಮೋದ್ ಉಳ್ಳಾಲ್ ಅವರ ಶಿಷ್ಯೆಯಾಗಿದ್ದು, ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾಳೆ.
Next Story





