Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದುವರಿದ ನೋಟು ಗದ್ದಲ, ಸದನ ಕಲಾಪಕ್ಕೆ...

ಮುಂದುವರಿದ ನೋಟು ಗದ್ದಲ, ಸದನ ಕಲಾಪಕ್ಕೆ ಅಡ್ಡಿ

ಧೈರ್ಯವಿದ್ದರೆ ಚರ್ಚೆಗೆ ಬನ್ನಿ: ವಿಪಕ್ಷಗಳಿಗೆ ಸರಕಾರದ ಸವಾಲು

ವಾರ್ತಾಭಾರತಿವಾರ್ತಾಭಾರತಿ7 Dec 2016 11:47 PM IST
share

ಹೊಸದಿಲ್ಲಿ, ಡಿ.7: ಅಧಿಕ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿದ ಸರಕಾರದ ಕ್ರಮವನ್ನು ವಿರೋಧಿಸಿ ಸದನದಲ್ಲಿ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು ಇಂದು ಗದ್ದಲದ ಕಾರಣ ರಾಜ್ಯಸಭೆಯ ಕಲಾಪ ಬಹುತೇಕ ಸ್ಥಗಿತಗೊಂಡಿತು. ಈ ಮಧ್ಯೆ ಸದನ ಕಲಾಪಕ್ಕೆ ಅಡ್ಡಿ ಮಾಡುವ ಬದಲು ವಿಷಯದ ಕುರಿತ ಚರ್ಚೆ ಮುಂದುವರಿಸಿ ಎಂದು ವಿಪಕ್ಷಗಳಿಗೆ ಸರಕಾರ ಸವಾಲು ಹಾಕಿತು.

ಇಂದು ರಾಜ್ಯ ಸಭೆಯಲ್ಲಿ ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಘೋಷಣೆ ಕೂಗತೊಡಗಿದಾಗ ಗದ್ದಲದ ವಾತಾವರಣ ಉಂಟಾಗಿ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರ ಅವಧಿಯ ಕಾರ್ಯ ಕಲಾಪಕ್ಕೆ ತೊಂದರೆಯಾಯಿತು. ಈ ಸಂದರ್ಭ ಸದನದ ಉಪಾಧ್ಯಕ್ಷ ಪಿ.ಜೆ.ಕುರಿಯನ್ ಅಪರಾಹ್ನದವರೆಗೆ ಕಲಾಪವನ್ನು ಮುಂದೂಡಿದರು. ಅಪರಾಹ್ನದ ಬಳಿಕವೂ ಇದೇ ಸ್ಥಿತಿ ಮುಂದುವರಿದಾಗ ಸದನವನ್ನು ಅಪರಾಹ 2ಕ್ಕೆ ಮುಂದೂಡಲಾಯಿತು. ಸೂಕ್ತ ಯೋಜನೆಯಿಲ್ಲದೆ ಅನುಷ್ಠಾನಗೊಳಿಸ ಲಾದ ನೋಟು ಅಮಾನ್ಯ ನಿರ್ಧಾರದ ಬಳಿಕ ದೇಶದಾದ್ಯಂತ ಸಂಭವಿಸಿದ 84ಕ್ಕೂ ಹೆಚ್ಚು ಮಂದಿಯ ಸಾವಿಗೆ ಹೊಣೆ ಯಾರು ಎಂದು ಕಾಂಗ್ರೆಸ್ ಸದಸ್ಯರು ಪ್ರಶ್ನಿಸಿದರು. ಇದಕ್ಕೆ ಎಸ್ಪಿ ಮತ್ತು ಬಿಎಸ್ಪಿ ಸದಸ್ಯರೂ ಧ್ವನಿಗೂಡಿಸಿ, ಈ ವಿಷಯಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ವಿತ್ತ ಸಚಿವ ಅರುಣ್ ಜೇಟ್ಲೀ, ವಿಪಕ್ಷಗಳಿಗೆ ಈ ವಿಷಯದ ಬಗ್ಗೆ ಚರ್ಚೆ ನಡೆಸುವ ಇಚ್ಛೆ ಇಲ್ಲ. ದಿನಕ್ಕೊಂದು ಕಾರಣ ಹಿಡಿದು ಕಲಾಪವನ್ನು ಭಂಗಗೊಳಿಸುತ್ತಿವೆ ಎಂದರು. ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ವಿಪಕ್ಷಗಳು ಒತ್ತಾಯಿಸಿದಾಗ ಸರಕಾರ ಒಪ್ಪಿದೆ. ಪ್ರಧಾನಿ ಮೋದಿಯವರು ಸದನದಲ್ಲಿ ಉಪಸ್ಥಿತರಿರಬೇಕು ಎಂಬ ಬೇಡಿಕೆಗೂ ಒಪ್ಪಿದೆ. ಸದನದ ಒಂದು ನಿಮಿಷವನ್ನೂ ವ್ಯರ್ಥಗೊಳಿಸಬಾರದು ಎಂಬುದು ಸರಕಾರದ ಇರಾದೆಯಾಗಿದೆ. ಆದರೆ ಚರ್ಚೆಯಲ್ಲಿ ಪಾಲ್ಗೊಂಡು ವಿಷಯಕ್ಕೆ ಒಂದು ಅಂತ್ಯ ಹಾಡಲು ವಿಪಕ್ಷಗಳಿಗೆ ಮನಸ್ಸಿಲ್ಲ. ವಿಪಕ್ಷಗಳಿಗೆ ತಾಕತ್ತಿದ್ದರೆ ಚರ್ಚೆಗೆ ಮುಂದಾಗಬೇಕು ಎಂದು ಸವಾಲು ಹಾಕಿದರು. ಇದರ ಬೆನ್ನಲ್ಲೇ ಬಿಜೆಪಿ ಸದಸ್ಯರು- ‘ಹಿಮ್ಮತ್ ಹೈ ತೋ ಚರ್ಚಾ ಕರೋ’ (ಧೈರ್ಯವಿದ್ದರೆ ಚರ್ಚೆಗೆ ಬನ್ನಿ) ಎಂದು ಘೋಷಣೆ ಕೂಗತೊಡಗಿದರು. ಒಂದು ವಿಷಯದ ಮೇಲೆ ಬಹಳಷ್ಟು ಚರ್ಚೆ ನಡೆದ ಮೇಲೆ ಆ ವಿಷಯವನ್ನು ಶೂನ್ಯ ವೇಳೆಯಲ್ಲಿ ಚರ್ಚಿಸಲು ಸದನದ ಅಧ್ಯಕ್ಷರು ಹೇಗೆ ಅವಕಾಶ ಮಾಡಿಕೊಡಲು ಸಾಧ್ಯ ಎಂದು ಸದನದ ನಾಯಕರೂ ಆಗಿರುವ ಜೇಟ್ಲೀ ಪ್ರಶ್ನಿಸಿದರು. ಇದಕ್ಕೆ ಸಮ್ಮತಿ ಸೂಚಿಸಿದ ಸದನದ ಉಪಾಧ್ಯಕ್ಷ ಕುರಿಯನ್, ಚರ್ಚೆಗೆ ಸಿದ್ದರಿದ್ದೀರಾ ಎಂದು ವಿಪಕ್ಷಗಳನ್ನು ಪ್ರಶ್ನಿಸಿದರು. ಈ ವೇಳೆ ಬಿಜೆಪಿ ಸದಸ್ಯರ ಘೋಷಣೆ ನಡುವೆ ವಿಪಕ್ಷ ಸದಸ್ಯರು ಪ್ರಧಾನಿ ಮೋದಿ ಸದನಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದಾಗ ಸದನವನ್ನು ಮುಂದೂಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X