Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವದ ಗಜಗಾತ್ರದ ಮಹಿಳೆಯನ್ನು ಮುಂಬೈಗೆ...

ವಿಶ್ವದ ಗಜಗಾತ್ರದ ಮಹಿಳೆಯನ್ನು ಮುಂಬೈಗೆ ಕರೆ ತರಲು ಹರಸಾಹಸ

ವಾರ್ತಾಭಾರತಿವಾರ್ತಾಭಾರತಿ8 Dec 2016 12:40 PM IST
share
ವಿಶ್ವದ ಗಜಗಾತ್ರದ ಮಹಿಳೆಯನ್ನು ಮುಂಬೈಗೆ ಕರೆ ತರಲು ಹರಸಾಹಸ

 ಮುಂಬೈ, ಡಿ.8: ಕಳೆದ ಎರಡು ದಶಕಗಳಿಂದ ಹಾಸಿಗೆಯಲ್ಲಿ ಮಲಗಿರುವ 500 ಕೆಜಿ ತೂಕದ ಈಜಿಪ್ಟ್ ಪ್ರಜೆ 36ರ ಪ್ರಾಯದ ಇಮಾನ್ ಅಹ್ಮದ್‌ರನ್ನು ಶಸ್ತ್ರಚಿಕಿತ್ಸೆಗಾಗಿ ಕೈರೋದಿಂದ ಮುಂಬೈಗೆ ತರುವುದು ದೊಡ್ಡ ಸವಾಲಾಗಿದೆ. ಯಾವ ವಿಮಾನಗಳೂ ಇಮಾನ್‌ರನ್ನು ಭಾರತಕ್ಕೆ ಕರೆತರಲು ಒಪ್ಪುತ್ತಿಲ್ಲ.

ಕೇಂದ್ರ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ವಿಶ್ವದ ಅತ್ಯಂತ ಭಾರದ ಮಹಿಳೆ ಇಮಾನ್‌ಗೆ ಶಸ್ತ್ರಚಿಕಿತ್ಸೆಗಾಗಿ ಮುಂಬೈಗೆ ಆಗಮಿಸಲು ಮೆಡಿಕಲ್ ವೀಸಾದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಆದರೆ, ಇಮಾನ್‌ರನ್ನು ನಗರಕ್ಕೆ ಕರೆ ತರುವುದೇ ದೊಡ್ಡ ತಲೆನೋವಾಗಿ ಕಾಡುತ್ತಿದೆ.

ಕೈರೋಗೆ ನೇರ ಸಂಪರ್ಕದ ವಿಮಾನಗಳಿಲ್ಲ. ಖಾಸಗಿ ವಿಮಾನಗಳು ಅಸಹಾಯಕತೆ ವ್ಯಕ್ತಪಡಿಸಿವೆ. ಯಾವ ಏರ್‌ಲೈನ್ಸ್‌ಗಳು ಇಮಾನ್‌ಗೆ ಚಾರ್ಟರ್ಟ್ ವಿಮಾನ ಒದಗಿಸಲು ಒಪ್ಪುತ್ತಿಲ್ಲ. ಇಮಾನ್‌ರನ್ನು ಕರೆತರಬೇಕಾದರೆ ವಿಮಾನದ ಆಕಾರವನ್ನು ಬದಲಿಸಬೇಕಾಗಿದೆ.

 ಏರ್‌ಇಂಡಿಯದ ಸ್ಟ್ರಚರ್‌ಗಳಲ್ಲಿ 136 ಕೆಜಿಗಿಂತ ಕಡಿಮೆ ಇರುವ ರೋಗಿಗಳನ್ನು ಸಾಗಿಸಬಹುದು. ನಮ್ಮ ವಿಮಾನದಲ್ಲಿ ಪ್ರಯಾಣಿಸುವವರು 136ಕ್ಕಿಂತ ಹೆಚ್ಚು ತೂಕವಿದ್ದರೆ ಅವರಿಗೆ ಸ್ಟ್ರಚರ್ ಸೇವೆ ಒದಗಿಸಲಾಗುವುದಿಲ್ಲ ಎಂದು ಏರ್‌ಇಂಡಿಯಾ ಹೇಳಿದೆ.

‘‘ವಿಮಾನಕ್ಕೆ ಅಧಿಕೃತ ಮನವಿ ಮಾಡಿದರೆ ಅದನ್ನು ಪರಿಗಣಿಸಲಾಗುತ್ತದೆ. ಪ್ರಸ್ತುತ ಏರ್‌ಇಂಡಿಯಾ ವಿಮಾನ ಆಫ್ರಿಕಕ್ಕೆ ಹಾರಾಟ ನಡೆಸುತ್ತಿಲ್ಲ. ಜರ್ಮನಿಯ ಫ್ರಾಂಕ್‌ಫರ್ಟ್ ಹತ್ತಿರದ ಏರ್‌ಪೋರ್ಟ್ ಆಗಿದೆ. ಅಹ್ಮದ್‌ರನ್ನು ಭಾರತಕ್ಕೆ ಕರೆ ತರುವ ಬಗ್ಗೆ ಕಾರ್ಯಪ್ರವೃತರಾಗಲು ನಾವು ಸಿದ್ಧವಿದ್ದೇವೆ’’ ಎಂದು ಏರ್‌ಇಂಡಿಯಾ ಆಡಳಿತ ನಿರ್ದೇಶಕಿ ಅಶ್ವನಿ ಲೊಹಾನಿ ಹೇಳಿದ್ದಾರೆ.

ಇಮಾನ್ ಅಹ್ಮದ್ ಮುಂಬೈನ ಸೈಫೀ ಹಾಸ್ಪಿಟಲ್‌ನಲ್ಲಿ ವೇಟ್ ಸರ್ಜರಿಗೆ ಒಳಗಾಗಲಿದ್ದಾರೆ. ಸರ್ಜರಿಯ ಬಳಿಕ ಅಹ್ಮದ್ ಮೂರು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.

‘‘ಇಮಾನ್‌ರನ್ನು ಮುಂಬೈಗೆ ತರುವುದೇ ದೊಡ್ಡ ಸವಾಲು. ಪ್ರಯಾಣ ಹಾಗೂ ಚಿಕಿತ್ಸೆಯ ವೆಚ್ಚಕ್ಕಾಗಿ ನಿಧಿ ಸಂಗ್ರಹಿಸಲು ‘ಸೇವ್ ಇಮಾನ್’ ಆನ್‌ಲೈನ್ ಅಭಿಯಾನ ಆರಂಭಿಸಿದ್ದೇವೆ. ನಾವು 450 ಕೆಜಿ ತೂಕದ ಆಪರೇಶನ್ ಟೇಬಲ್‌ನ್ನು ವ್ಯವಸ್ಥೆ ಮಾಡಿದ್ಧೇವೆ. ಅದರಲ್ಲಿ ಆಪರೇಶನ್ ಮಾಡಬಹುದು. ಉಳಿದ ಸಾಧನಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಇಮಾನ್‌ರನ್ನು ಭಾರತಕ್ಕೆ ಕರೆತರಲು ಹಲವು ಏರ್ ಆ್ಯಂಬುಲೆನ್ಸ್‌ನ್ನು ಸಂಪರ್ಕಿಸಲಾಗಿದೆ. ಯಾರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಇದೀಗ ಖಾಸಗಿ ಏರ್‌ಲೈನ್ಸ್‌ನೊಂದಿಗೆ ಮಾತುಕತೆ ನಡೆಯುತ್ತಿದೆ. ನಾನು ಉಚಿತ ಶಸ್ತ್ರಚಿಕಿತ್ಸೆ ನೀಡುವುದಾಗಿ ಭರವಸೆ ನೀಡಿದ್ದೇನೆ’’ಎಂದು ಸೈಫಿ ಆಸ್ಪತ್ರೆಯ ವೈದ್ಯ ಡಾ.ಮುಫಾಝಲ್ ಲಕ್ಡಾವಾಲಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X