Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಹೇಳಿದ ಸ್ವೈಪ್ ಮೆಶೀನ್ ಬಳಸುವ...

ಪ್ರಧಾನಿ ಹೇಳಿದ ಸ್ವೈಪ್ ಮೆಶೀನ್ ಬಳಸುವ ಬಿಕ್ಷುಕನ ವೀಡಿಯೊದ ಸತ್ಯ ಇಲ್ಲಿದೆ

ವಾರ್ತಾಭಾರತಿವಾರ್ತಾಭಾರತಿ8 Dec 2016 2:16 PM IST
share
ಪ್ರಧಾನಿ ಹೇಳಿದ ಸ್ವೈಪ್ ಮೆಶೀನ್ ಬಳಸುವ ಬಿಕ್ಷುಕನ ವೀಡಿಯೊದ ಸತ್ಯ ಇಲ್ಲಿದೆ

ಹೊಸದಿಲ್ಲಿ, ಡಿ.8: ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉತ್ತರ ಪ್ರದೇಶದ ಮುರಾದಾಬಾದ್ ನಗರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭ ಜನರಿಗೆ ಕ್ಯಾಶ್ ಲೆಸ್ ಆರ್ಥಿಕತೆಯ ಮಹತ್ವ ಹೇಳುವ ಸಲುವಾಗಿ ಭಿಕ್ಷೆ ಬೇಡುವ ವ್ಯಕ್ತಿಯೊಬ್ಬನ ಬಳಿ ಸ್ವೈಪ್ ಮೆಶೀನ್ ಇರುವ ವಾಟ್ಸ್ ಅಪ್ ವೀಡಿಯೊವೊಂದನ್ನು ಉಲ್ಲೇಖಿಸಿ ಜನರು ಹೆಚ್ಚು ಹೆಚ್ಚಾಗಿ ಕ್ಯಾಶ್ ಲೆಸ್ ವ್ಯವಹಾರಗಳಿಗೆ ಒತ್ತು ನೀಡಬೇಕೆಂದು ಹೇಳಿದ್ದರು. ಅವರ ಈ ಉಲ್ಲೇಖದಿಂದಾಗಿ ಆ ಭಿಕ್ಷುಕನ ವೀಡಿಯೊ ಕೂಡ ವೈರಲ್ ಆಗಿತ್ತು. ಆದರೆ ಪ್ರಧಾನಿ ತಮ್ಮ ಭಾಷಣದಲ್ಲಿ ತಮಗೆ ಆ ವೀಡಿಯೊ ಸತ್ಯಾಸತ್ಯತೆಯ ಬಗ್ಗೆ ಹೆಚ್ಚು ತಿಳಿದಿಲ್ಲ ಎಂದು ಬರೆದಿದ್ದರು.

ಪ್ರಧಾನಿ ತಮ್ಮ ಭಾಷಣದಲ್ಲಿ ಆ ಭಿಕ್ಷುಕನ ಬಗ್ಗೆ ಉಲ್ಲೇಖಿಸಿದಂದಿನಿಂದ ಹಲವು ಮಾಧ್ಯಮ ಮಂದಿ ಆತನನ್ನು ಹುಡುಕುವ ಯತ್ನ ಮಾಡಿದ್ದರು. ಕೊನೆಗೆ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ತನಿಖೆಯ ಫಲಶ್ರುತಿಯೆಂಬಂತೆ ಆ ವೀಡಿಯೊವನ್ನು ಹೈದರಾಬಾದ್ ನಗರದ ಜೂಲಿ ಹಿಲ್ಸ್ ಪ್ರದೇಶದಲ್ಲಿ ಚಿತ್ರೀಕರಿಸಲಾಗಿತ್ತು ಹಾಗೂ ಅದು ನ್ಯೂಮರೋ ಗ್ರಾಫಿಕ್ಸ್ ಕ್ರಿಯೇಟಿವ್ ಸೊಲ್ಯುಶನ್ಸ್‌ಪ್ರೈವೇಟ್ ಲಿ. ಎಂಬ ಕಂಪೆನಿಯ ಪ್ರಚಾರಾರ್ಥ ವೀಡಿಯೋ ಆಗಿತ್ತೆಂದು ತಿಳಿದು ಬಂದಿತ್ತು. ಆ ವೀಡಿಯೊವನ್ನು 2013ರ ನವೆಂಬರ್ ತಿಂಗಳಲ್ಲಿ ಚಿತ್ರೀಕರಿಸಲಾಗಿತ್ತು ಹಾಗೂ ಭಿಕ್ಷುಕನೊಂದಿಗೆ ಆ ವೀಡಿಯೊದಲ್ಲಿ ಕಾಣಿಸುವ ಮಹಿಳೆ ಕಂಪೆನಿಯ ಸಹ ಸಂಸ್ಥಾಪಕಿ ಕುಲಪ್ರೀತ್ ಕೌರ್ ಎಂದೂ ತಿಳಿದು ಬಂದಿತ್ತು.

ಜನರು ತಮ್ಮಲ್ಲಿ ಚೇಂಜ್ ಇಲ್ಲದ ಕಾರಣ ಟ್ರಾಫಿಕ್ ಸಿಗ್ನಲ್ ಬಳಿ ಕಾಣಸಿಗುವ ಭಿಕ್ಷುಕರಿಗೆ ಭಿಕ್ಷೆ ನೀಡುತ್ತಿಲ್ಲವೆಂದು ತಿಳಿದ ಕಂಪೆನಿ ಇಂತಹ ಒಂದು ವಿಶಿಷ್ಟ ವೀಡಿಯೊವನ್ನು ಟ್ರಾಫಿಕ್ ಸಿಗ್ನಲ್ ಬಳಿಯಲ್ಲಿಯೇ ಕೆಂಪು ದೀಪದಿಂದ ಹಸಿರು ದೀಪಕ್ಕೆ ತಿರುಗುವುದರೊಳಗಾಗಿ ಮೊಬೈಲ್ ಮೂಲಕ ಚಿತ್ರೀಕರಿಸಲಾಗಿತ್ತು ಎಂದು ಕೌರ್ ಹೇಳಿದ್ದಾರೆ.

ಬಂಜಾರ ಹಿಲ್ಸ್ ನ ಸಾಯಿ ಗುರುಮಂದಿರದ ಹೊರಗಿರುವ ಭಿಕ್ಷುಕರ ಪೈಕಿ ಒಬ್ಬನಿಗೆ ಸ್ವಲ್ಪ ಹಣ ನೀಡಿ ನಟಿಸುವಂತೆ ಹೇಳಿ ಆತನ ಕೈಗೆ ಸ್ವೈಪ್ ಮೆಶೀನ್ ನೀಡಲಾಗಿತ್ತು. ಆತ ಅಂತೆಯೇ ನಟಿಸಿ ಸ್ವೈಪ್ ಮೆಶೀನ್ ತಮ್ಮ ಕೈಗಿತ್ತು ಅಲ್ಲಿಂದ ಹೊರಟು ಹೋಗಿದ್ದ. ಆತನ ಹೆಸರು ಕೇಳಲು ಮರೆತಿದ್ದೆ ಎಂದು ಕೌರ್ ಹೇಳಿದ್ದಾರೆ.

ತಾವು ಆ ವೀಡಿಯೋ ತಯಾರಿಸುವಾಗ ತಮಗೆ ನೋಟು ಅಮಾನ್ಯಗೊಳ್ಳುವ ವಿದ್ಯಮಾನದ ಬಗ್ಗೆ ಏನೂ ತಿಳಿದಿರಲಿಲ್ಲ. ಅದನ್ನು 2014ರಲ್ಲಿ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಲಾಗಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X