Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ಯಾಶ್ ಲೆಸ್ ಆಗಿ ಎಂದು ಹೇಳುತ್ತಿರುವ...

ಕ್ಯಾಶ್ ಲೆಸ್ ಆಗಿ ಎಂದು ಹೇಳುತ್ತಿರುವ ನಮ್ಮ ದೇಶದಲ್ಲಿ ಅತ್ಯಗತ್ಯವಾದ ಇಂಟರ್‌ನೆಟ್ ಪರಿಸ್ಥಿತಿ ಹೇಗಿದೆ ನೋಡಿ

ವಾರ್ತಾಭಾರತಿವಾರ್ತಾಭಾರತಿ8 Dec 2016 2:26 PM IST
share
ಕ್ಯಾಶ್ ಲೆಸ್ ಆಗಿ ಎಂದು ಹೇಳುತ್ತಿರುವ ನಮ್ಮ ದೇಶದಲ್ಲಿ ಅತ್ಯಗತ್ಯವಾದ ಇಂಟರ್‌ನೆಟ್ ಪರಿಸ್ಥಿತಿ ಹೇಗಿದೆ ನೋಡಿ

ಹೊಸದಿಲ್ಲಿ, ಡಿ.8: ನೋಟು ಅಮಾನ್ಯಗೊಳಿಸಿದ ಆರಂಭದ ದಿನಗಳಲ್ಲಿ ಕಾಳಧನ ಹಾಗೂ ಭ್ರಷ್ಟಾಚಾರ ನಿಯಂತ್ರಣ ಎಂದೆಲ್ಲ ಹೇಳುತ್ತಿದ್ದ ಕೇಂದ್ರ ಸರಕಾರ ಇದೀಗ ಕ್ಯಾಶ್ ಲೆಸ್ ಇಕಾನಮಿಯ ಮಂತ್ರ ಜಪಿಸುತ್ತಿದೆ. ತಮ್ಮ ಇತ್ತೀಚಿಗಿನ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೂಡ ಪ್ರಧಾನಿ ಇದನ್ನೇ ಹೇಳಿದ್ದರಲ್ಲದೆ ಜನರು ಡಿಜಿಟಲ್ ವ್ಯವಹಾರಗಳನ್ನು ಅಭ್ಯಸಿಸಬೇಕೆಂದು ಕರೆ ನೀಡಿದ್ದರು. ಇಂಟರ್ ನೆಟ್ ಬ್ಯಾಂಕಿಂಗ್ ವಿಧಾನವನ್ನೂ ಕಲಿಯಬೇಕೆಂಬ ಸಲಹೆಯನ್ನು ಅವರು ನೀಡಿದ್ದರು. ಕ್ಯಾಶ್ ಲೆಸ್ ಆರ್ಥಿಕತೆಸುರಕ್ಷಿತ ಎಂದೂ ಅವರು ಹೇಳಿಕೊಂಡಿದ್ದರು.

ಆದರೆ ಭಾರತ ಕ್ಯಾಶ್ ಲೆಸ್ ಆರ್ಥಿಕತೆಗೆ ಬದಲಾಗುವುದು ಅಷ್ಟೊಂದು ಸುಲಭಸಾಧ್ಯವಲ್ಲ. ಭಾರತದಲ್ಲಿ ತಾಂಡವವಾಡುತ್ತಿರುವ ಅನಕ್ಷರತೆ, ಜನರಿಗೆ ತಂತ್ರಜ್ಞಾನದ ಬಗ್ಗೆ ಮಾಹಿತಿಯ ಕೊರತೆ, ಇಂಟರ್‌ನೆಟ್ ಸೌಲಭ್ಯವಿಲ್ಲದೇ ಇರುವುದು-ಇಂತಹ ಹಲವು ಸಮಸ್ಯೆಗಳು ಕ್ಯಾಶ್ ಲೆಸ್ ಇಕಾನಮಿಗೆ ಅಡೆತಡೆಗಳಾಗಿವೆ. ಮೇಲಾಗಿ ಹಲವಾರು ಬಾರಿ ಸರಕಾರವೇ ಗಲಭೆ ಹಾಗೂ ಹಿಂಸೆಯ ಸಂದರ್ಭಗಳಲ್ಲಿ ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿದ ನಿದರ್ಶನಗಳಿವೆ.

ದೇಶವೊಂದು ಕ್ಯಾಶ್ ಲೆಸ್ ಇಕಾನಮಿ ಆಗಬೇಕಾದಲ್ಲಿ ನಿರಂತರ ಇಂಟರ್‌ನೆಟ್ ಸಂಪರ್ಕ ಅತ್ಯಗತ್ಯವಾಗಿದ್ದು ಇಂಟರ್‌ನೆಟ್ ಸಂಪರ್ಕ ಕಡಿತಗೊಂಡಲ್ಲಿ ಕ್ಯಾಶ್‌ಲೆಸ್ ವ್ಯವಹಾರಗಳಿಗೆ ದೊಡ್ಡ ತೊಡಕಾಗಲಿದೆ.

2014ರಿಂದ ಸರಕಾರ 250ಕ್ಕೂ ಹೆಚ್ಚು ದಿನಗಳ ಕಾಲ ದೇಶದ ವಿವಿಧೆಡೆಗಳಲ್ಲಿ ಇಂಟರ್‌ನೆಟ್ ಸಂಪರ್ಕ ಕಡಿತಗೊಳಿಸಿದೆ. ಈ ವರ್ಷದಲ್ಲೇ 200 ದಿನಗಳ ಕಾಲಇಂಟರ್ ನೆಟ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದರೆ ಕಳೆದ ವರ್ಷ 30 ದಿನಗಳ ಕಾಲ ಈ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಈ ವರ್ಷಶೇ 60 ರಷ್ಟು ಇಂಟರ್ ನೆಟ್ ಸಂಪರ್ಕ ಕಡಿತ ಜಮ್ಮು ಕಾಶ್ಮೀರದಲ್ಲಿ ಉಗ್ರ ಬುರ್ಹಾನ್ ವನಿ ಹತ್ಯೆಯ ನಂತರದ ಹಿಂಸೆಯ ನೆಪವೊಡ್ಡಿ ಮಾಡಲಾಗಿತ್ತು. ಸತತ 133 ದಿನಗಳ ಕಾಲ ಅಲ್ಲಿ ಮೊಬೈಲ್ ಇಂಟರ್‌ನೆಟ್ ಸಂಪರ್ಕ ಇರಲಿಲ್ಲ.

ಈ ವರ್ಷ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಹರ್ಯಾಣದಲ್ಲಿನ ಜಾಟ್ ಮೀಸಲಾತಿ ಚಳುವಳಿ ಸಂದರ್ಭ 10 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿತ್ತು.

ಪ್ರಧಾನಿಯ ತವರು ರಾಜ್ಯವಾದ ಗುಜರಾತ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಂದರ್ಭಗಳಲ್ಲಿಯೂ ನಕಲು ಮಾಡುವುದನ್ನು ತಡೆಯಲು ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ನಡೆದ ಪಟಿದಾರ್ ಚಳವಳಿ ಸಂದರ್ಭವೂ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X