Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ ಕ್ರಮದಿಂದ...

ನೋಟು ರದ್ದತಿ ಕ್ರಮದಿಂದ ಕೃಷಿಕರು,ಕಾರ್ಮಿಕರಿಗೆ ನೆರವಾಗಲಿದೆ:ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ8 Dec 2016 4:50 PM IST
share
ನೋಟು ರದ್ದತಿ ಕ್ರಮದಿಂದ ಕೃಷಿಕರು,ಕಾರ್ಮಿಕರಿಗೆ ನೆರವಾಗಲಿದೆ:ಪ್ರಧಾನಿ

ಹೊಸದಿಲ್ಲಿ,ಡಿ.8: ತನ್ನ ನೋಟು ರದ್ದತಿ ನಿರ್ಧಾರವನ್ನು ಇಂದು ಬಲವಾಗಿ ಸಮರ್ಥಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು,ಅದನ್ನು ಹಿಂದು ‘ಯಜ್ಞ ’ ಅಥವಾ ತ್ಯಾಗಕ್ಕೆ ಹೋಲಿಸಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಮೋದಿ ಈ ಬಾರಿ ಗ್ರಾಮೀಣ ಭಾರತಕ್ಕೆ ಮತ್ತು ನಗದು ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ದಿನಗೂಲಿ ಕಾರ್ಮಿಕರಿಗೆ ಅದರಿಂದಾಗುವ ಲಾಭಗಳ ಬಗ್ಗೆ ಮಾತನಾಡಿದ್ದಾರೆ.

ನೋಟು ನಿಷೇಧದಂತಹ ಕ್ರಮಗಳ ಬಗ್ಗೆ ತಾನು ದೇಶಕ್ಕೆ ಎಚ್ಚರಿಕೆ ನೀಡಿದ್ದೆ ಎಂದಿರುವ ಅವರು, ಅಲ್ಪಸಮಯದ ಈ ನೋವು ದೀರ್ಘಾವಧಿಯ ಗಳಿಕೆಗಳಿಗೆ ಸುಗಮ ಮಾರ್ಗವನ್ನು ಕಲ್ಪಿಸಲಿದೆ ಎಂದಿದ್ದಾರೆ.

‘‘ಭ್ರಷ್ಟಾಚಾರ,ಭಯೋತ್ಪಾದನೆ ಮತ್ತು ಕಪ್ಪುಹಣದ ವಿರುದ್ಧ ನಡೆಯುತ್ತಿರುವ ಯಜ್ಞದಲ್ಲಿ ಹೃತ್ಪೂರ್ವಕವಾಗಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವುದಕ್ಕಾಗಿ ಭಾರತದ ಜನರಿಗೆ ನನ್ನ ವಂದನೆಗಳು’’ ಎಂದು ಟ್ವೀಟಿಸಿರುವ ಅವರು, ದೇಶದ ಬೆನ್ನೆಲುಬಾಗಿರುವ ಕೃಷಿಕರು,ವ್ಯಾಪಾರಿಗಳು ಮತ್ತು ಕಾರ್ಮಿಕರ ಮೇಲೆ ತನ್ನ ಗಮನವನ್ನು ಕೇಂದ್ರೀಕರಿಸಿದ್ದಾರೆ.

 ಸರಕಾರದ ನಿರ್ಧಾರವು ಈ ದೇಶದ ಆರ್ಥಿಕ ಬೆನ್ನೆಲುಬು ಆಗಿರುವ ಕೃಷಿಕರು,ವ್ಯಾಪಾರಿಗಳು ಮತ್ತು ಕಾರ್ಮಿಕರಿಗೆ ಹಲವಾರು ಲಾಭಗಳನ್ನು ತರಲಿದೆ. ಇನ್ನು ಮುಂದೆ ಗ್ರಾಮೀಣ ಭಾರತದ ಪ್ರಗತಿ ಮತ್ತು ಸಮೃದ್ಧಿಗೆ ಭ್ರಷ್ಟಾಚಾರ ಮತ್ತು ಕಪ್ಪುಹಣ ತಡೆಯನ್ನುಂಟುಮಾಡದು. ನಮ್ಮ ಗ್ರಾಮೀಣ ಜನರಿಗೆ ಅವರ ಹಕ್ಕುಗಳು ದೊರೆಯಲೇಬೇಕು ಎಂದು ಹೇಳಿರುವ ಮೋದಿ,ನೋಟು ರದ್ದತಿಯು ನಗದುರಹಿತ, ತಾಂತ್ರಿಕವಾಗಿ ಮುಂದುವರಿದ ಭಾರತದತ್ತ ಹೆಜ್ಜೆ ಹಾಕಲು ಒಂದು ‘ಐತಿಹಾಸಿಕ ಅವಕಾಶ‘ವಾಗಿದೆ ಎಂದು ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

‘‘ನನ್ನ ಯುವಸ್ನೇಹಿತರೇ,ನೀವು ಭಾರತವನ್ನು ಭ್ರಷ್ಟಾಚಾರ ಮುಕ್ತವಾಗಿಸುವ ಮತ್ತು ಹೆಚ್ಚೆಚ್ಚು ನಗದುರಹಿತ ವಹಿವಾಟುಗಳನ್ನು ಸಾಧ್ಯವಾಗಿಸುವ ಬದಲಾವಣೆಗಳ ಮಧ್ಯವರ್ತಿಗಳಾಗಿದ್ದೀರಿ. ನಾವೆಲ್ಲರೂ ಸೇರಿ ಭಾರತವು ಕಪ್ಪುಹಣವನ್ನು ಸೋಲಿಸುವಂತೆ ಮಾಡೋಣ. ಇದು ಬಡವರು,ನವ ಮಧ್ಯಮ ವರ್ಗದವರು,ಮಧ್ಯಮ ವರ್ಗದವರು ಮತ್ತು ಮುಂದಿನ ಪೀಳಿಗೆಗಳಿಗೆ ಲಾಭವನ್ನು ತರಲಿದೆ ’’ಎಂದು ಮೋದಿ ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X