Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಗೆ ತಿಂಗಳು: ಕಡಿಮೆಯಾಗಿಲ್ಲ...

ನೋಟು ರದ್ದತಿಗೆ ತಿಂಗಳು: ಕಡಿಮೆಯಾಗಿಲ್ಲ ಜನರ ಗೋಳು!

ವಾರ್ತಾಭಾರತಿವಾರ್ತಾಭಾರತಿ8 Dec 2016 7:30 PM IST
share
ನೋಟು ರದ್ದತಿಗೆ ತಿಂಗಳು: ಕಡಿಮೆಯಾಗಿಲ್ಲ ಜನರ ಗೋಳು!

ಮುಂಬೈ, ಡಿ.8: ನೋಟು ರದ್ದತಿಯ ಒಂದು ತಿಂಗಳ ಬಳಿಕವೂ ಮುಂಬೈ ಮಹಾನಗರ ಹಾಗೂ ನೆರೆಹೊರೆಯ ಪ್ರದೇಶಗಳಲ್ಲಿ ಜನರು ನಗದು ಹಣಕ್ಕಾಗಿ ಪಡಿಪಾಟಲು ಪಡುತ್ತಿದ್ದಾರೆ. ಇದರಿಂದಾಗಿ ಅವರ ಮಾಸಿಕ ಪಾವತಿಗಳು ಹಾಗೂ ವ್ಯವಹಾರಗಳಿಗೆ ತೊಂದರೆ ಮುಂದುವರಿದಿದೆ.

ನಿಷ್ಕ್ರಿಯ ಎಟಿಎಂಗಳು ಇನ್ನೂ ಕಾರ್ಯಾಚರಣೆ ಆರಂಭಿಸದಿರುವುದು ಈ ಸಂಕಷ್ಟಕ್ಕೆ ಮುಖ್ಯ ಕಾರಣವೆಂದು ಜನರು ಹೇಳುತ್ತಿದ್ದಾರೆ.

ಸಣ್ಣ ಅಥವಾ ದೊಡ್ಡ ವ್ಯವಹಾರಗಳಿಗೆ ನಗದು ರಹಿತ ವಿಧಾನವನ್ನು ಪ್ರತಿಯೊಬ್ಬನೂ ಅಳವಡಿಸಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡುತ್ತಿದ್ದಾರೆ. ಹಾಗಾದರೆ, ದೇಶದಲ್ಲಿ ಇಷ್ಟೊಂದು ಎಟಿಎಂಗಳು ಯಾಕೆ? ಅವುಗಳನ್ನು ಕಿತ್ತು ತೆಗೆಯಿರಿ. ಅವು ಹೇಗೂ ಉಪಯುಕ್ತವಾಗಿಲ್ಲ. ಈ ಎಟಿಎಂಗಳು ನಗದುರಹಿತವಾಗಿವೆಯೆಂದು ನೊಂದ, ಘಾಟ್ಕೋಪರ್‌ನ ಬಟ್ಟೆ ವ್ಯಾಪಾರಿ ಕಲ್ಪೇಶ್ ಜೈನ್ ಎಂಬವರು ಹರಿಹಾಯ್ದಿದ್ದಾರೆ.

ಇಂದು ಮುಂಜಾನೆ ಸಹ ಮುಂಬೈಗರು ಹಾಗೂ ಹೊರ ವಲಯದಲ್ಲಿ ವಾಸಿಸುವ ಜನರು ತಿಂಗಳ ಪಾವತಿಗಳಿಗೆ ಹಣಕ್ಕಾಗಿ ಎಟಿಎಂಗಳ ಮುಂದೆ ಸಾಲುಗಟ್ಟಿರುವುದು ಕಂಡುಬಂದಿದೆ. ನಗದಿನ ಕೊರತೆಯಿಂದ ಬ್ಯಾಂಕುಗಳು ಗ್ರಾಹಕರಿಗೆ ಹಣ ನೀಡಲು ನಿರಾಕರಿಸುತ್ತಿದ್ದುದರಿಂದ ಹಲವರು ನಿರಾಶರಾಗಿದ್ದರು.

ಕಮಲಾ ಮಿಲ್ ಕಾಂಪೌಂಡ್‌ನ ಬ್ಯಾಂಕ್ ಶಾಖೆಯೊಂದು ಕಳೆದೆರಡು ದಿನಗಳಿಂದ ನಗದು ಪಾವತಿಯನ್ನು ನಿಲ್ಲಿಸಿದೆ. ತಾವು ಕೇವಲ ಠೇವಣಿಗಳನ್ನಷ್ಟೇ ಸ್ವೀಕರಿಸುತ್ತೇವೆಂಬ ಫಲಕವನ್ನು ಹೊರಗೆ ಹಾಕಿದ್ದಾರೆಂದು ಲೋವರ್ ಪರೇಲ್‌ನ ವಾರಿಸ್‌ಶೇಖ್ ಎಂಬವರು ತಿಳಿಸಿದ್ದಾರೆ.

ಒಂದು ತಿಂಗಳು ಕಳೆದರೂ ಹಣ ಚಲಾವಣೆಯಲ್ಲಿ ಗಮನಾರ್ಹ ಪ್ರಗತಿಯಾಗಿಲ್ಲ. ತಾವೀಗಲೂ ಹಣವಿಲ್ಲದ ಬ್ಯಾಂಕ್ ಹಾಗೂ ಎಟಿಎಂಗಳ ಮುಂದೆ ಉದ್ದದ ಕ್ಯೂಗಳಲ್ಲಿ ನಿಲ್ಲುವಂತಾಗಿದೆಯೆಂದು ಠಾಣೆ ಜಿಲ್ಲೆಯ ವಿಮಲಾ ತ್ರಿಪಾಠಿಯೆಂಬ ಗೃಹಿಣಿ ಅಸಮಾಧಾನ ಹೊರ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X