Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ ಕಲಾಪಕ್ಕೆ ವ್ಯತ್ಯಯ: ಸ್ಫೋಟಿಸಿದ...

ಸಂಸತ್ ಕಲಾಪಕ್ಕೆ ವ್ಯತ್ಯಯ: ಸ್ಫೋಟಿಸಿದ ರಾಷ್ಟ್ರಪತಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ8 Dec 2016 7:49 PM IST
share
ಸಂಸತ್ ಕಲಾಪಕ್ಕೆ ವ್ಯತ್ಯಯ: ಸ್ಫೋಟಿಸಿದ ರಾಷ್ಟ್ರಪತಿ ಆಕ್ರೋಶ

ಹೊಸದಿಲ್ಲಿ,ಡಿ.8: ಸಂಸತ್ ಕಲಾಪಗಳಿಗೆ ವ್ಯತ್ಯಯವನ್ನುಂಟು ಮಾಡುತ್ತಿರುವುದಕ್ಕಾಗಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿಯರು ನಿನ್ನೆಯಷ್ಟೇ ಸಂಸದರನ್ನು ಕಟುವಾಗಿ ಟೀಕಿಸಿದ್ದ ಬೆನ್ನಿಗೇ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಆಕ್ರೋಶ ಇಂದು ಸ್ಫೋಟಗೊಂಡಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಬಿಕ್ಕಟ್ಟು ಮುಂದುವರಿದಿರುವ ಬಗ್ಗೆ ಸಂಸದರನ್ನು ತೀವ್ರ ತರಾಟೆಗೆತ್ತಿಕೊಂಡಿರುವ ಅವರು,‘‘ದಯವಿಟ್ಟು ನಿಮ್ಮ ಕೆಲಸವನ್ನು ಮಾಡಿ ’’ ಎಂದು ಅವರಿಗೆ ಕಿವಿಮಾತು ಹೇಳಿದ್ದಾರೆ.

ನ.16ರಂದು ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಗೊಂಡಾಗಿನಿಂದಲೂ ನೋಟು ರದ್ದತಿ ಕುರಿತು ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ಜಟಾಪಟಿಯಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆಗಳು ಪದೇಪದೇ ಮುಂದೂಡಿಕೆಯಾಗುತ್ತಿವೆ. ನಿಮ್ಮ ಕೆಲಸವನ್ನು ಮಾಡಿ. ಸಂಸತ್ತಿನಲ್ಲಿ ಕಲಾಪಗಳನ್ನು ನಡೆಸಲೆಂದೇ ನೀವಿದ್ದೀರಿ. ಸಂಸತ್ತಿನ ಕಲಾಪಗಳಿಗೆ ವ್ಯತ್ಯಯವನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಮುಖರ್ಜಿ ಹೇಳಿದರು.

ರಕ್ಷಣಾ ಇಲಾಖೆಯ ಕಾರ್ಯಕ್ರಮದಲ್ಲಿ ‘ಪ್ರಬಲ ಪ್ರಜಾಪ್ರಭುತ್ವಕ್ಕಾಗಿ ಸುಧಾರಣೆಗಳು’ ಕುರಿತು ಉಪನ್ಯಾಸ ನೀಡಿದ ಅವರು, ಜನರು ದೇಶಕ್ಕಾಗಿ ಕೆಲಸ ಮಾಡಲೆಂದು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸುತ್ತಾರೆಯೇ ಹೊರತು ಪ್ರತಿಭಟನೆಗಳನ್ನು ಮಾಡುವುದಕ್ಕಲ್ಲ. ಸಂಸದೀಯ ಕಲಾಪಗಳಿಗೆ ವ್ಯತ್ಯಯವನ್ನುಂಟು ಮಾಡುವುದು ಒಂದು ವಾಡಿಕೆಯಾಗಿಬಿಟ್ಟಿದೆ ಮತ್ತು ಇದು ತನಗೆ ಕಳವಳವನ್ನುಂಟು ಮಾಡಿದೆ ಎಂದರು.

ಪ್ರತಿಭಟನೆಗಳನ್ನು ಬೇರೆ ಕಡೆಗಳಲ್ಲಿ ನಡೆಬಹುದು ಎಂದ ಅವರು,ಸಾರ್ವಜನಿಕ ಮಹತ್ವದ ವಿಷಯಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗಳನ್ನು ನಡೆಸುವಂತೆ ಸಂಸದರನ್ನು ಆಗ್ರಹಿಸಿದರು.

ಮತ್ತೆ ಸಂಸತ್ತು ಮುಂದೂಡಿಕೆ
ಮತದಾನಕ್ಕೆ ಅವಕಾಶ ಕಲ್ಪಿಸುವ ನಿಯಮದಡಿ ನೋಟು ರದ್ದತಿ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಸತತ 15ನೆಯ ದಿನವಾದ ಗುರುವಾರವೂ ಲೋಕಸಭೆಯ ಕಲಾಪಗಳು ವ್ಯತ್ಯಯಗೊಂಡವು.

 ಬೆಳಿಗ್ಗೆ ಸದನವು ಸಮಾವೇಶಗೊಂಡ ಬೆನ್ನಿಗೇ ವಿಷಯವನ್ನು ಪ್ರಸ್ತಾಪಿಸಲು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಾದಾಗ ಅನುಮತಿಯನ್ನು ನಿರಾಕರಿಸಿದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಪ್ರಶ್ನೆವೇಳೆಗೆ ಚಾಲನೆ ನೀಡಿದರು.

ತಕ್ಷಣ ಕಾಂಗ್ರೆಸ್,ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳ ಸದಸ್ಯರು ಸದನದ ಅಂಗಳಕ್ಕೆ ನುಗ್ಗಿ ನೋಟು ರದ್ದತಿಯ ಕುರಿತು ಚರ್ಚೆಗೆ ಆಗ್ರಹಿಸಿದರು. ಈ ಬೇಡಿಕೆಯನ್ನು ಒಪ್ಪಲು ಸ್ಪೀಕರ್ ನಿರಾಕರಿಸಿದಾಗ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗತೊಡಗಿದರು. ಗದ್ದಲ ನಿಲ್ಲದಿದ್ದಾಗ ವಿಚಲಿತರಾದ ಸ್ಪೀಕರ್ ತಮ್ಮ ಪ್ರತಿಭಟನೆಗಳಿಂದ ಇಡೀ ಸದನಕ್ಕೆ ತೊಂದರೆಯನ್ನುಂಟು ಮಾಡದಂತೆ ಪ್ರತಿಪಕ್ಷ ಸದಸ್ಯರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಎಸ್‌ಪಿ ಮತ್ತು ಎನ್‌ಸಿಪಿ ಸದಸ್ಯರೂ ತಮ್ಮ ಆಸನಗಳಿಂದ ಎದ್ದು ನಿಂತು ಪ್ರತಿಭಟನಾ ನಿರತ ಸದಸ್ಯರಿಗೆ ಬೆಂಬಲ ವ್ಯಕ್ತಪಡಿಸಿದರು.

ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದ ಮಹಾಜನ್,ಅದು ಮರುಸಮಾವೇಶಗೊಂಡಾಗಲೂ ಕೋಲಾಹಲ ಮುಂದುವರಿದಿದ್ದರಿಂದ ದಿನದ ಮಟ್ಟಿಗೆ ಮುಂದೂಡಿದರು. ಅತ್ತ ರಾಜ್ಯಸಭೆಯಲ್ಲಿಯೂ ಚಿತ್ರಣ ಭಿನ್ನವಾಗಿರಲಿಲ್ಲ. ಪ್ರತಿಪಕ್ಷ ಸದಸ್ಯರ ಗದ್ದಲ-ಕೋಲಾಹಲಗಳಿಂದ ಸದನವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X