Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆಯಲ್ಲಿ ಮುಂದುವರಿದ ಬಿಕ್ಕಟ್ಟು: ...

ಲೋಕಸಭೆಯಲ್ಲಿ ಮುಂದುವರಿದ ಬಿಕ್ಕಟ್ಟು: ಕ್ಷಮೆ ಕೇಳುವಂತೆ ಪ್ರತಿಪಕ್ಷಕ್ಕೆ ಸರಕಾರದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Dec 2016 4:40 PM IST
share
ಲೋಕಸಭೆಯಲ್ಲಿ ಮುಂದುವರಿದ ಬಿಕ್ಕಟ್ಟು:  ಕ್ಷಮೆ ಕೇಳುವಂತೆ ಪ್ರತಿಪಕ್ಷಕ್ಕೆ ಸರಕಾರದ ಆಗ್ರಹ

ಹೊಸದಿಲ್ಲಿ,ಡಿ.9: ಪ್ರತಿಭಟನೆಯಲ್ಲಿ ನಿರತ ಪ್ರತಿಪಕ್ಷಗಳಿಗೆ ಶುಕ್ರವಾರ ತಿರುಗೇಟು ನೀಡಿದ ಸರಕಾರವು ಸಂಸತ್ತಿನ ಕಲಾಪಗಳಿಗೆ ವ್ಯತ್ಯಯವನ್ನುಂಟು ಮಾಡಿದ್ದಕ್ಕೆ ಕ್ಷಮೆ ಯಾಚಿಸುವಂತೆ ಅವುಗಳನ್ನು ಆಗ್ರಹಿಸಿತು. ಇದರೊಂದಿಗೆ ನೋಟು ನಿಷೇಧ ಕುರಿತಂತೆ ಕಳೆದ 16 ದಿನಗಳಿಂದ ಕಾಡುತ್ತಿರುವ ಬಿಕ್ಕಟ್ಟು ಇಂದು ಇನ್ನಷ್ಟು ತೀವ್ರಗೊಂಡಿದ್ದು, ಪ್ರತಿಪಕ್ಷಗಳಿಂದ ಇನ್ನೊಂದು ಸುತ್ತಿನ ಪ್ರತಿಭಟನೆಗಳಿಗೆ ಕಾರಣವಾಗಿದೆ.

ಬೆಳಿಗ್ಗೆ ಸದನವು ಸಮಾವೇಶಗೊಂಡ ಬಳಿಕ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೆಲವು ವಿಷಯಗಳನ್ನು ಮಂಡಿಸಲು ಎದ್ದುನಿಂತರು. ಈ ವೇಳೆ ಪ್ರತಿಪಕ್ಷವನ್ನು ಗುರಿಯಾಗಿಸಿಕೊಂಡು ದಾಳಿಗೆ ಮುಂದಾದ ಬಿಜೆಪಿ ಸದಸ್ಯರು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ನಿನ್ನೆ ವ್ಯಕ್ತಪಡಿಸಿದ ಅಭಿಪ್ರಯವನ್ನು ನೆನಪಿಸಿದರು.

ಇದರೊಂದಿಗೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ಯುದ್ಧ ನಡೆದು ಕೋಲಾಹಲ ಸೃಷ್ಟಿಯಾದಾಗ ಸ್ಪೀಕರ್ ಸದನವನ್ನು ಪೂರ್ವಾಹ್ನ 11:30ರವರೆಗೆ ಮುಂದೂಡಿದರು.

 ಸದನವು ಮರುಸಮಾವೇಶಗೊಂಡಾಗ ನೋಟು ನಿಷೇಧ ಕುರಿತು ಚರ್ಚೆಗೆ ಪ್ರತಿಪಕ್ಷ ಸಿದ್ಧವಿದೆ ಮತ್ತು ಅದಕ್ಕಾಗಿ ನಿರಂತರವಾಗಿ ಮನವಿ ಮಾಡಿಕೊಳ್ಳುತ್ತಲೇ ಇದೆ ಎಂದು ಖರ್ಗೆ ಹೇಳಿದರು.

ಇದಕ್ಕೆ ತಕ್ಷಣವೇ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಅವರು, ಪ್ರತಿಪಕ್ಷವು ಕಳೆದ 16 ದಿನಗಳಿಂದಲೂ ಕಲಾಪವನ್ನು ವ್ಯತ್ಯಯಗೊಳಿ ಸುತ್ತ,ಸದನವನ್ನು ಒತ್ತೆಯಾಳಾಗಿರಿಸಿಕೊಂಡಿದೆ. ಹೆಚ್ಚಿನ ಪಕ್ಷಗಳು ಚರ್ಚೆಯನ್ನು ಬಯಸಿವೆ. ಆದರೆ ಕಾಂಗ್ರೆಸ್,ಟಿಎಂಸಿ ಮತ್ತು ಎಡಪಕ್ಷಗಳ ಸದಸ್ಯರು ಸದನವು ಕಾರ್ಯ ನಿರ್ವಹಿಸಲು ಅವಕಾಶ ನೀಡುತ್ತಿಲ್ಲ. ಸ್ವತಃ ರಾಷ್ಟ್ರಪತಿಗಳೇ ಕಲಾಪ ವ್ಯತ್ಯಯದ ವಿರುದ್ಧ ಮಾತನಾಡುವ ಸ್ಥಿತಿಯೇರ್ಪಟ್ಟಿದೆ. ಇದಕ್ಕಾಗಿ ಪ್ರತಿಪಕ್ಷಗಳು ದೇಶದ ಜನತೆಯ ಕ್ಷಮೆಯನ್ನು ಯಾಚಿಸಲೇಬೇಕು ಎಂದು ಹೇಳಿದರು.

ರಾಷ್ಟ್ರಪತಿಗಳು ಸೂಚಿಸಿರುವಂತೆ ಪ್ರತಿಭಟನೆಗಳು ಮತ್ತು ಧರಣಿಗಳನ್ನು ನಡೆಸಲು ಜಂತರ್ ಮಂತರ್ ಅತ್ಯುತ್ತಮ ಸ್ಥಳವಾಗಿದೆಯೇ ಹೊರತು ಸಂಸತ್ತಿನಲ್ಲಿ ಅವು ನಡೆಯಬಾರದು. ಆದ್ದರಿಂದ ಪ್ರತಿಪಕ್ಷಗಳು ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಹೇಳಿದರು.

ಸದನದಲ್ಲಿ ನಿರಂತರವಾಗಿ ಮುಂದುವರಿದಿರುವ ಬಿಕ್ಕಟಿನ ಬಗ್ಗೆ ಬುಧವಾರ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದ ಹಿರಿಯ ಬಿಜೆಪಿ ನಾಯಕ ಎಲ್.ಕೆ.ಆಡ್ವಾಣಿ ಅವರು ಒಂದು ಹಂತದಲ್ಲಿ ಕುಪಿತ ಆಡಳಿತ ಪಕ್ಷದ ಸದಸ್ಯರನ್ನು ಸಮಾಧಾನಿಸುತ್ತಿದ್ದುದು ಕಂಡು ಬಂದಿತು.

 ಕೋಲಾಹಲ ಮುಂದುವರಿದಾಗ ಸ್ಪೀಕರ್ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು.

  ಸದನವು ಮರುಸಮಾವೇಶಗೊಂಡಾಗಲೂ ಕೋಲಾಹಲ ಮುಂದುವರಿದಿದ್ದು, ಅದರ ನಡುವೆಯೇ ಸ್ಪೀಕರ್ ಸದನವನ್ನು ದಿನದ ಮಟ್ಟಿಗೆ ಮುಂದೂಡುವ ಮುನ್ನ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್ ಅವರು ಮಸೂದೆಯೊಂದನ್ನು ಮಂಡಿಸಿದರು. ಶನಿವಾರದಿಂದ ನಾಲ್ಕು ದಿನಗಳ ರಜೆಯಿದ್ದು, ಸದನವು ಬುಧವಾರ ಮತ್ತೆ ಸಮಾವೇಶಗೊಳ್ಳಲಿದೆ.

 ಡಿ.13ಕ್ಕೆ ರಜೆಯಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ ಸದನವು 2001ರ ಸಂಸತ್ ದಾಳಿಯನ್ನು ಮತ್ತು ಎಂಟು ದಿಲ್ಲಿ ಪೊಲೀಸ್,ಸಿಆರ್‌ಪಿಎಫ್ ಮತ್ತು ಸಂಸತ್ ಭದ್ರತಾ ಸಿಬ್ಬಂದಿಗಳ ಬಲಿದಾನವನ್ನು ನೆನಪಿಸಿಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X