Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದ.ಕೊರಿಯ ಅಧ್ಯಕ್ಷೆಗೆ ವಾಗ್ದಂಡನೆ...

ದ.ಕೊರಿಯ ಅಧ್ಯಕ್ಷೆಗೆ ವಾಗ್ದಂಡನೆ :234-56 ಮತಗಳ ಅಗಾಧ ಅಂತರದಿಂದ ಮಸೂದೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ9 Dec 2016 8:30 PM IST
share
ದ.ಕೊರಿಯ ಅಧ್ಯಕ್ಷೆಗೆ ವಾಗ್ದಂಡನೆ :234-56 ಮತಗಳ ಅಗಾಧ ಅಂತರದಿಂದ ಮಸೂದೆ ಅಂಗೀಕಾರ

ಸಿಯೋಲ್, ಡಿ. 9: ಬೃಹತ್ ಭ್ರಷ್ಟಾಚಾರ ಹಗರಣವೊಂದರಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕೊರಿಯ ಅಧ್ಯಕ್ಷೆ ಪಾರ್ಕ್ ಗುಯನ್ ಹೈ ವಿರುದ್ಧ ಸಂಸತ್ತಿನಲ್ಲಿ ಮಂಡಿಸಲಾಗಿರುವ ವಾಗ್ದಂಡನೆ ಮಸೂದೆಯನ್ನು ಸಂಸದರು ಇಂದು ಅನುಮೋದಿಸಿದ್ದಾರೆ.

ಇದರೊಂದಿಗೆ, ಅಧ್ಯಕ್ಷೆಯ ಹಲವಾರು ನಿರಂಕುಶ ಅಧಿಕಾರಗಳು ಮೊಟಕುಗೊಂಡಿವೆ.

ನ್ಯಾಶನಲ್ ಅಸೆಂಬ್ಲಿಯಲ್ಲಿ ಅಂಗೀಕಾರಗೊಂಡ ಮಸೂದೆಯು ಪಾರ್ಕ್‌ರ ಅಧಿಕಾರಗಳನ್ನು ಪ್ರಧಾನಿಗೆ ವರ್ಗಾಯಿಸುತ್ತದೆ. ಅದೇ ವೇಳೆ, ಅಧಿಕಾರ ವರ್ಗಾವಣೆ ಕುರಿತ ನಿರ್ಧಾರವನ್ನು ಅನುಮೋದಿಸಿ ಅಧ್ಯಕ್ಷೆಯನ್ನು ಅಧಿಕಾರದಿಂದ ಶಾಶ್ವತವಾಗಿ ತೆಗೆದುಹಾಕುವುದೇ ಎಂಬ ಕುರಿತ ನಿರ್ಧಾರವನ್ನು ಸಾಂವಿಧಾನಿಕ ನ್ಯಾಯಾಲಯವು ತೆಗೆದುಕೊಳ್ಳುತ್ತದೆ.

ನ್ಯಾಯಾಲಯವು ತನ್ನ ನಿರ್ಧಾರಕ್ಕೆ ಬರಲು ಆರು ತಿಂಗಳ ಸಮಯಾವಕಾಶವನ್ನು ತೆಗೆದುಕೊಳ್ಳಬಹುದು. ಈ ಅವಧಿಯಲ್ಲಿ ಪಾರ್ಕ್ ಅಧ್ಯಕ್ಷೀಯ ಬ್ಲೂ ಹೌಸ್‌ನಲ್ಲಿ ನೆಲೆಸಬಹುದು.

ವಾಗ್ದಂಡನೆ ಮಸೂದೆ ಅಂಗೀಕಾರಗೊಳ್ಳಲು ಮೂರನೆ ಎರಡು ಸಂಸದರ ಬೆಂಬಲ ಅಗತ್ಯವಾಗಿತ್ತು. ಆದರೆ, ಮಸೂದೆಯು 300 ಸದಸ್ಯ ಬಲದ ಸದನದಲ್ಲಿ 234-56 ಮತಗಳ ಭರ್ಜರಿ ಅಂತರದಿಂದ ಅಂಗೀಕಾರಗೊಂಡಿತು.

‘‘ಅಧ್ಯಕ್ಷೆ ಪಾರ್ಕ್ ಗುಯನ್ ಹೈ ಅವರನ್ನು ವಾಗ್ದಂಡನೆಗೆ ಗುರಿಪಡಿಸುವ ಮಸೂದೆ ಅಂಗೀಕಾರಗೊಂಡಿದೆ ಎಂಬುದಾಗಿ ನಾನು ಘೋಷಿಸುತ್ತೇನೆ’’ ಎಂದು ಸ್ಪೀಕರ್ ಚುಂಗ್ ಸೆ-ಕ್ಯುನ್ ಪ್ರಕಟಿಸಿದರು.

ಖಾಸಗಿ ಟ್ರಸ್ಟ್‌ಗಳಿಗೆ ದೇಶದ ಕೈಗಾರಿಕೋದ್ಯಮಿಗಳಿಂದ ದೇಣಿಗೆ ಸಂಗ್ರಹಿಸಲು ತನ್ನ ಖಾಸಾ ಸ್ನೇಹಿತೆಗೆ ಅಧಿಕಾರ ನೀಡಿದ ಆರೋಪವನ್ನು ಪಾರ್ಕ್ ಎದುರಿಸುತ್ತಿದ್ದಾರೆ. ಆ ಸ್ನೇಹಿತೆಯು ಅಧ್ಯಕ್ಷೆಯ ಹೆಸರು ಮತ್ತು ಪದವಿಯನ್ನು ದುರ್ಬಳಕೆ ಮಾಡಿಕೊಂಡು ಭಾರೀ ಪ್ರಮಾಣದಲ್ಲಿ ಖಾಸಗಿ ಟ್ರಸ್ಟ್‌ಗಳಿಗೆ ದೇಣಿಗೆ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ಇದರಿಂದ ಕೆರಳಿರುವ ದೇಶದ ಜನರು, ಲಕ್ಷಗಟ್ಟಳೆ ಸಂಖ್ಯೆಯಲ್ಲಿ ಹಲವು ದಿನಗಳ ಕಾಲ ಅಧ್ಯಕ್ಷೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಉಸ್ತುವಾರಿ ಅಧ್ಯಕ್ಷರಾಗಿ ಪ್ರಧಾನಿ ಅಧಿಕಾರ ಸ್ವೀಕಾರ

ದಕ್ಷಿಣ ಕೊರಿಯ ಅಧ್ಯಕ್ಷೆ ಪಾರ್ಕ್ ಗುಯನ್ ಹೈ ವಿರುದ್ಧದ ವಾಗ್ದಂಡನೆ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಬಳಿಕ, ಅಧ್ಯಕ್ಷೆಯ ಅಧಿಕಾರಗಳನ್ನು ಅಮಾನತಿನಲ್ಲಿಡಲಾಗಿದೆ ಎಂದು ಅವರ ಕಚೇರಿ ತಿಳಿಸಿದೆ.

 ಪ್ರಧಾನಿ ಹ್ವಾಂಗ್ ಕ್ಯೊ-ಅಹನ್ ಉಸ್ತುವಾರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಸ್ಥಿರ ಸರಕಾರ ಮುಂದುವರಿಯುವಂತೆ ತಾನು ನೋಡಿಕೊಳ್ಳುವೆ ಎಂದು ಅವರು ಸಚಿವ ಸಂಪುಟ ಸಭೆಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X