Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಕಾರಿ ಸಂಘಗಳ ಮನವಿ ಪರಿಗಣಿಸಲು...

ಸಹಕಾರಿ ಸಂಘಗಳ ಮನವಿ ಪರಿಗಣಿಸಲು ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ

ನೋಟು ರದ್ದತಿಯಿಂದ ಸಹಕಾರಿ ಸಂಘಗಳ ಚಟುವಟಿಕೆ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ9 Dec 2016 9:57 PM IST
share
ಸಹಕಾರಿ ಸಂಘಗಳ ಮನವಿ ಪರಿಗಣಿಸಲು ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ

 ಉಡುಪಿ, ಡಿ.9:  ಕೇಂದ್ರ ಸರಕಾರ ನ.8ರಂದು ನೋಟು ಅಮಾನ್ಯೀಕರಣ ಘೋಷಿಸಿದ ಹಿನ್ನೆಲೆಯಲ್ಲಿ, ರಾಜ್ಯದ ಸಹಕಾರ ಸಂಘಗಳು ಜಿಲ್ಲಾ ಸಹಕಾರ ಯೂನಿಯನ್ ಮುಖಾಂತರ ರಿಸರ್ವ್ ಬ್ಯಾಂಕಿಗೆ ಮಾಡಿರುವ ಮನವಿಯನ್ನು ವಿತ್ತ ಸಚಿವಾಲಯ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಪರಿಗಣಿಸಬೇಕು ಮತ್ತು ಈ ಸಂಬಂಧ ಸಕ್ರಿಯ ಹಾಗೂ ಜವಾಬ್ದಾರಿಯುತ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ರಾಜ್ಯ ಉಚ್ಛ ನ್ಯಾಯಾಲಯ, ಕೇಂದ್ರ ಸರಕಾರ ಹಾಗೂ ರಿವರ್ಸ್ ಬ್ಯಾಂಕಿಗೆ ನಿರ್ದೇಶಿಸಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರಕಾರ ನೋಟಿನ ಅಮಾನ್ಯೀಕಣಗೊಳಿಸಿದ ನಂತರ, ಭಾರತೀಯ ರಿಸರ್ವ್ ಬ್ಯಾಂಕ್ ಕೇಂದ್ರದ ಮೂಲ ಗಜೆಟ್ ಅಧಿಸೂಚನೆಯಲ್ಲಿ ಇಲ್ಲದಿದ್ದರೂ, ಸಹಕಾರ ಸಂಘಗಳಿಗೂ ಅವುಗಳ ಬ್ಯಾಂಕು ಖಾತೆಗಳಿಂದ ಹಣ ಹಿಂಪಡೆಯಲು ಮಿತಿ ಹೇರಿದ ಪರಿಣಾಮ ಸಂಘಗಳ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ 80ಕ್ಕೂ ಅಧಿಕ ಸಹಕಾರ ಸಂಘಗಳು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ನಿನ ನೇತೃತ್ವದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಸರಣಿ ರಿಟ್‌ಅರ್ಜಿಗಳನ್ನು ದಾಖಲಿಸಿದ್ದವು.

ಈ ಎಲ್ಲಾ ರಿಟ್ ಅರ್ಜಿಗಳನ್ನು ಡಿ.6ರಂದು ವಿಲೆಮಾಡಿ ತೀರ್ಪು ಪ್ರಕಟಿಸಿದ ನ್ಯಾಯಾಲಯ, ಕೇಂದ್ರದ ವಿತ್ತ ನೀತಿಯಲ್ಲಿ ತಾನು ಮಧ್ಯ ಪ್ರವೇಶಿಸಿ ನಗದು ಮಿತಿ ಹೇರಿಕೆ ಸಂಬಂಧದ ಅಧಿಸೂಚನೆ/ ಸುತ್ತೋಲೆಗಳನ್ನು ರದ್ದುಗೊಳಿಸ ಬೇಕೆಂಬ ವಾದಿ ಸಂಘಗಳ ಕೋರಿಕೆಯನ್ನು ಪರಿಗಣಿಸಲು ಬರುವುದಿಲ್ಲ. ಆದರೆ, ಸಹಕಾರಿ ಸಂಘಗಳು ಮಾಡಿರುವ ಮನವಿಯನ್ನು ಪರಿಶೀಲಿಸುವ ಕೇಂದ್ರ ಸರಕಾರಕ್ಕೆ ಸೂಚನೆಗಳನ್ನು ನೀಡಿದೆ ಎಂದವರು ಅಭಿಪ್ರಾಯಪಟ್ಟರು.

 ಇದರಿಂದ ವಾದಿ ಸಹಕಾರ ಸಂಘಗಳಿಗೆ ದಾವೆಯಲ್ಲಿ ಆಂಶಿಕ ಜಯ ದೊರಕಿದೆ. ಇದು ಜಿಲ್ಲೆಯ ಸಹಕಾರ ಸಂಘಗಳ ಸಂಘಟಿತ ಹೋರಾಟಕ್ಕೆ ದೊರಕಿದ ಜಯವಾಗಿದೆ ಎಂದು ಕಿಶನ್ ಹೆಗ್ಡೆ ನುಡಿದರು. ರಿಟ್ ಅರ್ಜಿಗಳು ನ್ಯಾಯಮೂರ್ತಿ ಅಶೋಕ್. ಬಿ. ಹಿಂಚಗೇರಿ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದು, ಜಿಲ್ಲೆಯ ವಾದಿ ಸಂಘಗಳ ಪರವಾಗಿ ಹಿರಿಯ ನ್ಯಾಯವಾದಿ ಹಾಗೂ ಕರ್ನಾಟಕದ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮ ಕುಮಾರ್ ಹಾಗೂ ನ್ಯಾಯವಾದಿ ಮಹೇಶ್ ಉಪ್ಪಿನ್ ಅವರು ವಾದ ಮಂಡಿಸಿದ್ದರು ಎಂದವರು ತಿಳಿಸಿದ್ದಾರೆ.

ರಿಟ್ ಅರ್ಜಿಗಳು ನ್ಯಾಯಮೂರ್ತಿ ಅಶೋಕ್. ಬಿ. ಹಿಂಚಗೇರಿ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದು, ಜಿಲ್ಲೆಯ ವಾದಿ ಸಂಘಗಳ ಪರವಾಗಿ ಹಿರಿಯ ನ್ಯಾಯವಾದಿ ಹಾಗೂ ಕರ್ನಾಟಕದ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮ ಕುಮಾರ್ ಹಾಗೂ ನ್ಯಾಯವಾದಿ ಮಹೇಶ್ ಉಪ್ಪಿನ್ ಅವರು ವಾದ ಮಂಡಿಸಿದ್ದರು ಎಂದವರು ತಿಳಿಸಿದ್ದಾರೆ.

ನೋಟು ರದ್ದತಿ ಹಾಗೂ ನಗದು ಮಿತಿ ಹೇರಿಕೆ ಸಂಬಂಧ ಈಗಾಗಲೇ ಮಹಾರಾಷ್ಟ್ರ, ಕೇರಳ ಹಾಗೂ ದಿಲ್ಲಿಯಲ್ಲೂ ದಾಖಲಾದ ರಿಟ್ ಅರ್ಜಿಗಳು ಹೈಕೋರ್ಟಿನಲ್ಲಿ ವಜಾಗೊಂಡಿವೆ. ಇದೇ ವಿಚಾರದಲ್ಲಿ, ಕೇರಳ ರಾಜ್ಯದ 7 ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ದಾಖಲಿಸಿದ ದಾವೆಯು ಸುಪ್ರೀಂ ಕೋರ್ಟಿನಲ್ಲಿ ತೀರ್ಮಾನಕ್ಕೆ ಬಾಕಿ ಇದ್ದು, ಈ ವಾರಾಂತ್ಯದಲ್ಲಿ ತೀರ್ಪು ಬರುವ ನಿರೀಕ್ಷೆ ಇದೆ.

ಈ ಹಿನ್ನೆಲೆಯಲ್ಲಿ, ನಗದು ಮಿತಿ ಹೇರಿಕೆ ಸಂಬಂಧ ಕರ್ನಾಟಕ ಉಚ್ಛ ನ್ಯಾಯಾಲಯವು ನೀಡಿರುವ ಪರಿಹಾರದ ಅದೇಶದ ಮುಂದಿನ ಕ್ರಮದ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಎಲ್ಲಾ ಸಹಕಾರ ಸಂಘಗಳ ಅಭಿಪ್ರಾಯವನ್ನು ಪಡೆದುಕೊಂಡು ಯೂನಿಯನ್ ವತಿಯಿಂದ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದೂ ಕೊಳ್ಕೆಬೈಲ್ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ನಗದು ಮಿತಿ ಹೇರಿಕೆ ಸಂಬಂಧ ಕರ್ನಾಟಕ ಉಚ್ಛ ನ್ಯಾಯಾಲಯವು ನೀಡಿರುವ ಪರಿಹಾರದ ಅದೇಶದ ಮುಂದಿನ ಕ್ರಮದ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಎಲ್ಲಾ ಸಹಕಾರ ಸಂಘಗಳ ಅಭಿಪ್ರಾಯವನ್ನು ಪಡೆದುಕೊಂಡು ಯೂನಿಯನ್ ವತಿಯಿಂದ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದೂ ಕೊಳ್ಕೆಬೈಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X