Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. " ನೋಟು ರದ್ದತಿ ಸಂಪೂರ್ಣ ವಿಫಲ" :...

" ನೋಟು ರದ್ದತಿ ಸಂಪೂರ್ಣ ವಿಫಲ" : ಆರೆಸ್ಸೆಸ್ ಕಾರ್ಮಿಕ ಸಂಘ ಬಿಎಂಎಸ್

ವಾರ್ತಾಭಾರತಿವಾರ್ತಾಭಾರತಿ10 Dec 2016 7:31 PM IST
share
 ನೋಟು ರದ್ದತಿ ಸಂಪೂರ್ಣ ವಿಫಲ : ಆರೆಸ್ಸೆಸ್ ಕಾರ್ಮಿಕ ಸಂಘ ಬಿಎಂಎಸ್

ಹೊಸದಿಲ್ಲಿ,ಡಿ.10: 500 ಮತ್ತು 1,000 ರೂ.ಗಳ ನೋಟುಗಳನ್ನು ಯಾವುದೇ ಪೂರ್ವಸಿದ್ಧತೆಗಳಿಲ್ಲದೇ ದಿಢೀರ್‌ನೆ ನಿಷೇಧಿಸಿದ ಪ್ರಧಾನಿ ನರೇಂದ್ರ ಮೋದಿಯವರ ಕ್ರಮವನ್ನು ಕಟುವಾಗಿ ಟೀಕಿಸಿರುವ ಆರೆಸ್ಸೆಸ್‌ನ ಕಾರ್ಮಿಕ ಘಟಕ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ದ ಅಧ್ಯಕ್ಷ ಬೈಜನಾಥ ರಾಯ್ ಅವರು, ನೋಟು ರದ್ದತಿ ಪ್ರಕ್ರಿಯೆಯು ಸಂಪೂರ್ಣವಾಗಿ ವಿಫಲಗೊಂಡಿದೆ ಎಂದು ಹೇಳಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ಬೆಳವಣಿಗೆಯು ತೀವ್ರವಾಗಿ ಕುಂಠಿತಗೊಂಡಿದೆ ಮತ್ತು ನೋಟು ರದ್ದತಿಗೊಂಡ ಒಂದು ತಿಂಗಳಲ್ಲಿ ಪರಿಸ್ಥಿತಿಯು ಇನ್ನಷ್ಟು ಹದಗೆಟ್ಟಿದೆ. ಸರಕಾರದ ಈ ಕ್ರಮದಿಂದಾಗಿ ದಿನಗೂಲಿ ಕಾರ್ಮಿಕರು ಅತ್ಯಂತ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಸದ್ಯ ಕೇರಳ ಪ್ರವಾಸದಲ್ಲಿರುವ ರಾಯ್ ಆಂಗ್ಲ ಸುದ್ದಿ ಜಾಲತಾಣದೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನೋಟು ರದ್ದತಿ ಕ್ರಮ ಖಂಡಿತವಾಗಿಯೂ ಆರ್ಥಿಕತೆಗೆ ಉತ್ತಮ ಹೆಜ್ಜೆಯಾಗಿದೆ. ಆದರೆ ಸುದೀರ್ಘ ಕಾಲದ ನಂತರವೇ ಫಲ ನೀಡುತ್ತದೆ. ಕಳೆದೊಂದು ತಿಂಗಳಲ್ಲಿ ಈ ಕ್ರಮದಿಂದ ಜನಸಾಮಾನ್ಯರು ಹೇಗೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎನ್ನುವುದನ್ನು ಮಾತ್ರ ನಾವು ಕಾಣುತ್ತಿದ್ದೇವೆ ಎಂದರು.

ದೇಶಾದ್ಯಂತ ಜನರು ಹಣಕ್ಕಾಗಿ ಸರದಿ ಸಾಲುಗಳಲ್ಲಿ ನಿಂತಿದ್ದಾರೆ. ಇದು ನೋಟು ರದ್ದತಿ ನಿರ್ಧಾರವನ್ನು ಕೈಗೊಂಡವರ ಪೂರ್ವಸಿದ್ಧತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತದೆ. ಒಂದು ತಿಂಗಳಾದರೂ ದೇಶವಿನ್ನೂ ಸಹಜಸ್ಥಿತಿಗೆ ಮರಳಿಲ್ಲ. ಇದು ಕ್ರಮದ ಅನುಷ್ಠಾನದ ಬಗ್ಗೆಯೂ ಹಲವರು ಪ್ರಶ್ನೆಗಳನ್ನು ಸೃಷ್ಟಿಸಿದೆ ಎಂದ ಅವರು, ಸರಕಾರವು ಇಷ್ಟೊಂದು ಬೃಹತ್ ಪ್ರಮಾಣದ ಯೋಜನೆಯನ್ನು ಪ್ರಕಟಿಸುವ ಮುನ್ನ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿತ್ತು. ಆದರೆ ದೇಶಾದ್ಯಂತ ನಡೆಯುತ್ತಿರುವುದನ್ನು ನೋಡಿದರೆ ಅಂತಹ ಯಾವುದೇ ಪೂರ್ವಸಿದ್ಧತೆಗಳು ಆಗಿರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಇಂತಹ ಕ್ರಮವು ಉಂಟು ಮಾಡಬಹುದಾದ ತೊಂದರೆಗಳನ್ನು ಮೊದಲೇ ಅಂದಾಜಿಸುವಲ್ಲಿ ಸರಕಾರವು ವಿಫಲಗೊಂಡಿದೆ ಎಂದರು.

ಪೂರ್ವ ಸಿದ್ಧತೆಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಜನರು ಹಳೆಯ ನೋಟುಗಳನ್ನು ತಮ್ಮ ಖಾತೆಗಳಲ್ಲಿ ಜಮೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕ ಖಾತೆಗಳನ್ನು ಅದು ತೆರೆಸಬೇಕಿತ್ತು. ಮುಖ್ಯವಾಗಿ,ಬ್ಯಾಂಕುಗಳು ಇಷ್ಟೊಂದು ಅಗಾಧ ಸವಾಲನ್ನು ಎದುರಿಸಲು ಸಜ್ಜಾಗಿವೆಯೇ ಎನ್ನುವದನ್ನು ಖಚಿತಪಡಿಸಿಕೊಳ್ಳಬೇಕಾಗಿತ್ತು ಎಂದರು.

ಅತ್ಯಂತ ಸಂಕಷ್ಟಕ್ಕೊಳಗಾದವರು ಬ್ಯಾಂಕ್ ಖಾತೆಗಳನ್ನು ಹೊಂದಿರದ ದಿನಗೂಲಿ ಕಾರ್ಮಿಕರು ಎಂದ ಅವರು, ಸರಕಾರವು ಇವನ್ನೆಲ್ಲ ಸಂಪೂರ್ಣವಾಗಿ ಕಡೆಗಣಿಸಿದೆ. ನೋಟು ರದ್ದತಿ ಕ್ರಮದ ಉದ್ದೇಶವನ್ನು ತಾನು ಶಂಕಿಸುತ್ತಿಲ್ಲವಾದರೂ ಅನುಷ್ಠಾನ ಮಾತ್ರ ನಿರೀಕ್ಷಿತ ರೀತಿಯಲ್ಲಿ ಎಂದರು.

ಕಳೆದ ಮೂರು ವರ್ಷಗಳಲ್ಲಿ 20 ಲಕ್ಷಕ್ಕೂ ಅಧಿಕ ಉದ್ಯೋಗಗಳು ನಷ್ಟಗೊಂಡಿವೆ ಮತ್ತು ಈ ಅವಧಿಯಲ್ಲಿ ಕೇವಲ 1,35,000 ಉದ್ಯೋಗಳು ಸೃಷ್ಟಿಯಾಗಿವೆ. ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಹೇಳಬೇಕಾದರೆ ಅಸಂಘಟಿತ ಕ್ಷೇತ್ರದಲ್ಲಿಯ ಜನರು ತೀವ್ರ ಬಾಧಿತರಾಗಿದ್ದಾರೆ ಮತ್ತು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಕಪ್ಪುಹಣವನ್ನು ಹೊರಗೆ ತರುವುದು ನೋಟು ರದ್ದತಿಯ ಉದ್ದೇಶವಾಗಿತ್ತು, ಆದರೆ ಅದು ಸಂಪೂರ್ಣವಾಗಿ ವಿಫಲಗೊಂಡಿದೆ. ಕಪ್ಪುಹಣವಿದ್ದವರು ಅದನ್ನು ಬಿಳಿ ಮಾಡಿಕೊಳ್ಳುವ ದಾರಿಗಳನ್ನು ಕಂಡುಕೊಂಡಿದ್ದಾರೆ. ದೇಶಾದ್ಯಂತ ಇತ್ತೀಚಿಗೆ ಬೃಹತ್ ಪ್ರಮಾಣದಲ್ಲಿ ನೋಟುಗಳನ್ನು ವಶಪಡಿಸಿಕೊಂಡಿರುವುದು ಕಪ್ಪುಹಣ ಮತ್ತೆ ಮರಳಿ ಬಂದಿದೆ ಎನ್ನುವುದನ್ನು ಸೂಚಿಸುತ್ತಿದೆ ಎಂದ ಅವರು, ನಗದು ರಹಿತ ವ್ಯವಹಾರ ಮಾತ್ರ ಕಪ್ಪುಹಣ ತಡೆಗೆ ಉಳಿದಿರುವ ಮಾರ್ಗವಾಗಿದೆ. ಆದರೆ ನಮ್ಮಂತಹ ದೇಶದಲ್ಲಿ ಅದು ಸಾಧ್ಯವಿಲ್ಲ. ಆರ್ಥಿಕತೆಯಲ್ಲಿ ಸ್ವಲ್ಪವೇ ನಗದು ಇದ್ದರೂ ಕಪ್ಪುಹಣವಂತೂ ಸದಾ ಇರುತ್ತದೆ ಎಂದರು.

ಮೋದಿಯವರು ಪ್ರತಿಪಾದಿಸುತ್ತಿರುವ ನಗದುರಹಿತ ಭಾರತ ಸಾಧ್ಯವೇ ಇಲ್ಲ ಮತ್ತು ಅದು ಹಲವಾರು ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎಂದು ರಾಯ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X