Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ಸೋದರ ಸೊಸೆಯಿಂದ ಆಸ್ತಿ ಹಕ್ಕು...

ಜಯಲಲಿತಾ ಸೋದರ ಸೊಸೆಯಿಂದ ಆಸ್ತಿ ಹಕ್ಕು ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ10 Dec 2016 10:17 PM IST
share
ಜಯಲಲಿತಾ ಸೋದರ ಸೊಸೆಯಿಂದ ಆಸ್ತಿ ಹಕ್ಕು ಪ್ರತಿಪಾದನೆ

ಚೆನೈ,ಡಿ.10: ಇತ್ತೀಚಿಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಬಿಟ್ಟುಹೋಗಿರುವ ನೂರಾರು ಕೋಟಿ ರೂ.ಗಳ ಆಸ್ತಿ ಯಾರ ಪಾಲಾಗಲಿದೆ ಎನ್ನುವುದು ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆ. ಜಯಲಲಿತಾ ಉಯಿಲನ್ನು ಬರೆದಿಟ್ಟಿದ್ದಾರೆಯೇ ಎನ್ನುವುದು ಇನ್ನೂ ಗೊತ್ತಾಗಿಲ್ಲ. ಹೀಗಾಗಿ ಆಸ್ತಿ ಮಾಜಿ ಮುಖ್ಯಮಂತ್ರಿಯ ಆಪ್ತಗೆಳತಿ ಶಶಿಕಲಾ ಮಡಿಲು ಸೇರುತ್ತದೋ ಅಥವಾ ಹತ್ತಿರದ ಸಂಬಂಧಿಗಳಾದ ಅಣ್ಣನ ಮಕ್ಕಳಿಗೆ ಸಿಗುತ್ತದೆಯೋ ಎನ್ನುವುದನ್ನು ಕಾದು ನೋಡಬೇಕು. ತನ್ಮಧ್ಯೆ,ಜಯಲಲಿತಾರ ಅಣ್ಣ ದಿ.ಜಯಕುಮಾರ್ ಅವರ ಪುತ್ರಿ ದೀಪಾ ಜಯಕುಮಾರ್ (42) ತಾನು ಆಸ್ತಿಯ ಕಾನೂನುಬದ್ಧ ಉತ್ತರಾಧಿಕಾರಿಯಾಗಿದ್ದೇನೆ ಮತ್ತು ಅದಕ್ಕಾಗಿ ಕಾನೂನು ಹೋರಾಟ ನಡೆಸಲೂ ಸಿದ್ಧ ಎಂದು ಘೋಷಿಸಿದ್ದಾರೆ.

ದೀಪಿಕಾ ಬ್ರಿಟನ್ನಿನ ಕಾರ್ಡಿಫ್ ವಿವಿಯಿಂದ ಅಂತರರಾಷ್ಟ್ರೀಯ ಪತ್ರಿಕೋದ್ಯಮದಲ್ಲಿ ಎಂಎ ಪದವಿಯನ್ನು ಪಡೆದಿದ್ದು, ಚೆನ್ನೈನ ತ್ಯಾಗರಾಜ ನಗರದಲ್ಲಿ ವಾಸವಿದ್ದಾರೆ. ಅವರ ಸೋದರ ದೀಪಕ್ ಜಯಲಲಿತರ ಅಂತ್ಯಸಂಸ್ಕಾರದಲ್ಲಿ ಶಶಿಕಲಾ ಜೊತೆಗೆ ಅಂತಿಮ ವಿಧಾನಗಳನ್ನು ನೆರವೇರಿಸಿದ್ದರೆ ದೀಪಾಗೆ ಹತ್ತಿರ ಸುಳಿಯಲೂ ಅವಕಾಶ ದೊರಕಿರಲಿಲ್ಲ. ಜಯಲಲಿತಾ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೂ ದೀಪಾಗೆ ಆಸ್ಪತ್ರೆಯನ್ನು ಪ್ರವೇಶಿಸಲು ಅವಕಾಶ ನೀಡದಂತೆ ಭದ್ರತಾ ಸಿಬ್ಬಂದಿಗಳಿಗೆ ‘ಮೇಲಿನವರ ’ ಕಟ್ಟಪ್ಪಣೆಯಿತ್ತು. ದೀಪಾರನ್ನು ಭದ್ರತಾ ಸಿಬ್ಬಂದಿಗಳು ತಡೆಯುವುದನ್ನು ಟಿವಿ ಕ್ಯಾಮರಾಗಳು ಸೆರೆ ಹಿಡಿದಿದ್ದವು. ತನ್ಮೂಲಕ ದೀಪಾ ಪ್ರಚಾರ ಪಡೆದಿದ್ದರು. ಇತ್ತೀಚಿನ ಕೆಲವು ವಾರಗಳಲ್ಲಿ ಶಶಿಕಲಾಗೆ ಪಥ್ಯವಾಗದ ಹಲವಾರು ಪ್ರಶ್ನೆಗಳನ್ನು ದೀಪಾ ಎತ್ತಿದ್ದರು.

ನ್ಯೂಸ್ ಮಿನಿಟ್‌ಗೆ ನೀಡಿರುವ ಸಂದರ್ಶನದಲ್ಲಿ ದೀಪಾ ಎಡಿಎಂಕೆ ಪಕ್ಷದ ನಾಯಕಿಯಾಗಿ ಶಶಿಕಲಾ ಅಧಿಕಾರ ವಹಿಸಿಕೊಂಡರೆ ಅದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗುತ್ತದೆ ಎಂದು ಕಿಡಿ ಕಾರಿದ್ದಾರೆ. ತನ್ನೊಂದಿಗೆ ಅತ್ತೆ ಜಯಲಲಿತಾ ಚೆನ್ನಾಗಿಯೇ ಇದ್ದರು. ಆದರೆ ಕೆಲವು ಕಾಣದ ಶಕ್ತಿಗಳು ಇತ್ತೀಚಿನ ವರ್ಷಗಳಲ್ಲಿ ಅವರನ್ನು ತಮ್ಮಿಂದ ದೂರ ಮಾಡಿದ್ದವು ಎಂದು ಆರೋಪಿಸಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಜನರು ಬಯಸಿದರೆ ರಾಜಕೀಯವನ್ನು ಪ್ರವೇಶಿಸುವುದಾಗಿ ಹೇಳಿಕೊಂಡರು. ದೀಪಾ ಜಯಲಲಿತಾರ ರೂಪವನ್ನೇ ಹೊಂದಿದ್ದು ಈ ಹಿನ್ನೆಲೆಯಲ್ಲಿ ಎಡಿಎಂಕೆ ಪಕ್ಷವನ್ನು ಮುನ್ನಡೆಸುವಂತೆ ಕೆಲವರು ಆಕೆಗೆ ದುಂಬಾಲು ಬಿದ್ದಿದ್ದಾರೆನ್ನಲಾಗಿದೆ.

ಆಸ್ತಿಯ ಆಸೆಯಿಂದ ನೀವೀಗ ಮುಂಚೂಣಿಗೆ ಬಂದಿದ್ದೀರಿ ಎಂಬ ಆರೋಪವಿದೆಯಲ್ಲ ಎಂಬ ಪ್ರಶ್ನೆಗೆ ದೀಪಾ, ಆಸ್ತಿ ಯಾವಾಗಲೂ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ಸೇರುತ್ತದೆ ಎನ್ನುವುದು ಇಂತಹ ಆರೋಪಗಳನ್ನು ಮಾಡುವವರಿಗೆ ಗೊತ್ತಿರಬೇಕು. ಆಸ್ತಿಗಾಗಿ ಕಾನೂನು ಹೋರಾಟ ಮಾಡಬೇಕೆಂದರೆ ಅದಕ್ಕೆ ನಾನು ಸಿದ್ಧ. ಆದರೆ ಅದರ ಅಗತ್ಯ ಬೀಳುವುದಿಲ್ಲ ಎಂದುಕೊಂಡಿದ್ದೇನೆ. ಅತ್ತೆ ಜಯಲಲಿತಾ ಉಯಿಲು ಬರೆದಿಟ್ಟಿದ್ದರೆ ಅದರ ಸತ್ಯಾಸತ್ಯತೆಗಳನ್ನು ಕಂಡುಕೊಳ್ಳಲು ನಾನು ಸಿದ್ಧನಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X