Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕವಿ, ಪತ್ರಕರ್ತ, ಫೋಟೋಗ್ರಾಫರ್ ಅಹ್ಮದ್...

ಕವಿ, ಪತ್ರಕರ್ತ, ಫೋಟೋಗ್ರಾಫರ್ ಅಹ್ಮದ್ ಅನ್ವರ್ ನಿಧನ

ವಾರ್ತಾಭಾರತಿವಾರ್ತಾಭಾರತಿ11 Dec 2016 8:49 AM IST
share
ಕವಿ, ಪತ್ರಕರ್ತ, ಫೋಟೋಗ್ರಾಫರ್ ಅಹ್ಮದ್ ಅನ್ವರ್ ನಿಧನ

ಮಂಗಳೂರು, ಡಿ.11: ಕವಿ, ಪತ್ರಕರ್ತ ಅಹ್ಮದ್ ಅನ್ವರ್(55) ರವಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಮೂಲತಃ ಬೆಂಗರೆಯ ಪ್ರಸ್ತುತ ಮಂಗಳೂರಿನ ಬಲ್ಮಠದಲ್ಲಿ ನೆಲೆಸಿರುವ ಅಹ್ಮದ್ ಅನ್ವರ್ ಕಳೆದ ನಾಲ್ಕೈದು ವರ್ಷದಿಂದ ಅಸೌಖ್ಯದಿಂದಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮೃತದೇಹವನ್ನು ಇದೀಗ ಬೋಳಾರದಲ್ಲಿರುವ ತನ್ನ ತಂದೆಯ ಮನೆಯಲ್ಲಿ ಅಂತಿಮ ದರ್ಶನಕ್ಕಿಡಲಾಗಿದೆ. ಮೃತರ ಅಂತ್ಯಸಂಸ್ಕಾರ ರವಿವಾರ ಅಪರಾಹ್ನ ನಡೆಯಲಿರುವುದಾಗಿ ಅವರ ಕುಟುಂಬ ಮೂಲಗಳು ತಿಳಿಸಿವೆ.

ಕವಿ ಹೃದಯದ ಅಹ್ಮದ್ ಅನ್ವರ್ ಅವರು ಜವಳಿ ವ್ಯಾಪಾರಿಯಾಗಿ ವೃತ್ತಿ ಆರಂಭಿಸಿದ್ದರು. ಆ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಕರ್ಷಿತರಾಗಿ, ಫೋಟೋಗ್ರಾಫರಾಗಿ ಗಮನ ಸೆಳೆದಿದ್ದರು. ಕತೆ, ಕವನ ,ಲೇಖನ ನಿರಂತರವಾಗಿ ಬರೆಯುತ್ತಿದ್ದರು. ಅಹ್ಮದ್ ಅನ್ವರ್ ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದರು.

ಕನ್ನಡ, ಉರ್ದು, ಬ್ಯಾರಿ ಭಾಷೆಗಳಲ್ಲಿ ಹಿಡಿತ ಸಾದಿಸಿದ್ದ ಅಹ್ಮದ್ ಅನ್ವರ್ ಭಾರತಗೀತಾ, ಗುಲ್ಮೊಹರ್, ನನ್ನ ಕನಸಿನ ಭಾರತ, ಬೇವು ಬೆಲ್ಲ, ಇತ್ಯಾದಿ ಕೃತಿಗಳನ್ನು ರಚಿಸಿದ್ದರು.

ಇವರಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ, ಅತ್ತಿಮಬ್ಬೆ ಪ್ರತಿಷ್ಠಾನದಿಂದ ಅತ್ತಿಮಬ್ಬೆ ಪ್ರಶಸ್ತಿ, ಸ್ನೇಹಸೇತು ಪ್ರಶಸ್ತಿ ಲಭಿಸಿತು.
ಮಂಗಳೂರಿನ ಸಹೃದಯಿ ಗೆಳೆಯರು ಇತ್ತೀಗಷ್ಟೆ ರಚಿಸಿದ್ದ 'ಬಿಳಿಚುಕ್ಕೆ' ಪ್ರಕಾಶನವು ಇವರ ಕವನ ಸಂಕಲನ 'ಪಯನಿಗಳನ ಪದ್ಯಗಳು' ಕೃತಿಯನ್ನು ಪ್ರಕಟಿಸಿತ್ತು. ಅದನ್ನು ಬಿಡುಗಡೆಗೊಳಿಸಲು ಎಲ್ಲಾ ರೀತಿಯ ಸಿದ್ದತೆ ನಡೆಸಿದ್ದರು. ಡಿ.23ರ ಶುಕ್ರವಾರ ಮಂಗಳೂರಿನ ಪುರಭವನದಲ್ಲಿ ಈ ಕೃತಿ ಬಿಡುಗಡೆಗೊಳಿಸಲಿತ್ತು, ಖ್ಯಾತ ಲೇಖಕಿ ವೈದೇಹಿ ಮುನ್ನುಡಿ ಬರೆದಿದ್ದಾರೆ.

ಅನಾರೋಗ್ಯದಲ್ಲಿರುವಾಲೇ ತನ್ನ ಫೋಟೋಗಳ ಪ್ರದರ್ಶನವನ್ನು ಮಂಗಳೂರಿನಲ್ಲಿ ಏರ್ಪಡಿಸಿದ್ದರು. ಅವರ ಕವನ ಸಂಕಲನ ಬಿಡುಗಡೆ ಬಳಿಕ ತನ್ನ ಎಲ್ಲಾ ಫೋಟೋಗಳ ಪ್ರದರ್ಶನವನ್ನು ಮತ್ತೊಮ್ಮೆ ಆಯೋಜಿಸಲು ಆಶಿಸಿದ್ದರು.

ಸಂತಾಪ: ಅಹ್ಮದ್ ಅನ್ವರ್ ನಿಧನಕ್ಕೆ ಸಚಿವ ಯು.ಟಿ ಖಾದರ್, ಬ್ಯಾರಿ ಅಕಾಡಮಿ ಅಧ್ಯಕ್ಷ ಬಿ.ಎ ಮುಹಮ್ಮದ್ ಹನೀಫ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸ್ಥಾಪಕಾಧ್ಯಕ್ಷ ಅಬ್ದುರವೂಫ್ ಪುತ್ತಿಗೆ ಮತ್ತಿತರರು ತೀವ್ರ ಸಂತಾಪ ಸೂಚಿಸಿದ್ದಾರೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X