Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧಾರಾವಿ: ಟೇಲರ್‌ಗಳ ಬದುಕು ಹರಿದ...

ಧಾರಾವಿ: ಟೇಲರ್‌ಗಳ ಬದುಕು ಹರಿದ ನೋಟುಬಂದಿ

ವಾರ್ತಾಭಾರತಿವಾರ್ತಾಭಾರತಿ11 Dec 2016 9:06 AM IST
share
ಧಾರಾವಿ: ಟೇಲರ್‌ಗಳ ಬದುಕು ಹರಿದ ನೋಟುಬಂದಿ

ಮುಂಬೈ, ಡಿ.11: ಮಿರಿ ಮಿರಿ ಮಿಂಚುವ ಶೆರ್ವಾನಿಗಳು ತಯಾರಾಗುವ ಧಾರಾವಿಗೆ ಇದೀಗ ಮಂಕು ಕವಿದಿದೆ. ದೇಶದ ವಿವಿಧೆಡೆಗಳಿಂದ ವಲಸೆ ಬಂದು, ಶೆರ್ವಾನಿ ಹೊಲಿಯುವ ಮೂಲಕ ಬದುಕು ಕಟ್ಟಿಕೊಳ್ಳುವ ಕಾಯಕದಲ್ಲಿ ನಿರತರಾಗಿದ್ದ ದರ್ಜಿಗಳು ಇದೀಗ ಹುಟ್ಟೂರಿಗೆ ವಾಪಸ್ಸಾಗಿದ್ದಾರೆ. ಇದು ನೋಟುಬಂದಿಯ ನೇರ ಪರಿಣಾಮ. ನೋಟುಬಂದಿ ಪರಿಣಾಮವಾಗಿ ವೈಭವೋಪೇತ ಮದುವೆಗಳಿಗೆ ಕಡಿವಾಣ ಬಿದ್ದಿರುವುದರಿಂದ ಇವರ ದುಡಿಯುವ ಹಕ್ಕನ್ನೇ ಕಸಿದುಕೊಂಡಂತಾಗಿದೆ.

ಕುರ್ತಾ ಹಾಗೂ ಶೆರ್ವಾನಿಯಲ್ಲಿ ವಿಶೇಷ ಪರಿಣತಿ ಹೊಂದಿರುವ ಇಲ್ಲಿನ ಟೇಲರ್‌ಗಳಿಗೆ ಅಕ್ಟೋಬರ್‌ನಿಂದ ಜನವರಿ ವರೆಗೆ ಸುಗ್ಗಿಕಾಲ. ಆದರೆ ನೋಟುಬಂದಿ ಬಳಿಕ ಬೇಡಿಕೆ ಕುಸಿದಿರುವುದರಿಂದ ಇವರ ವೃತ್ತಿಗೇ ಕುತ್ತು ಬಂದಿದೆ. ಏಷ್ಯಾದ ಅತಿದೊಡ್ಡ ಕೊಳಗೇರಿ ಎನಿಸಿಕೊಂಡ ಧಾರಾವಿ ಆರ್ಥಿಕ ಶಕ್ತಿ ಕೇಂದ್ರ ಕೂಡಾ. ಸ್ಥಳೀಯ ಉತ್ಪಾದಕರ ಪ್ರಕಾರ 5 ಸಾವಿರ ಚರ್ಮದ ಘಟಕಗಳು, ನಾಲ್ಕು ಸಾವಿರ ಸಿದ್ಧ ಉಡುಪು ಘಟಕಗಳು ಈ ಕಿಷ್ಕಿಂದೆಯಲ್ಲಿ ಕಾರ್ಯ ನಿರ್ವಹಿಸುತ್ತವೆ. ಕಳೆದ ಕೆಲ ತಿಂಗಳಲ್ಲಿ ಶೇಕಡ 80-90 ಗುಡಿ ಕೈಗಾರಿಕೆಗಳು ಮುಚ್ಚಿವೆ ಎನ್ನುವುದು ಉದ್ಯೋಗಿಗಳ ಅನಿಸಿಕೆ.

ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಹಾಗೂ ಕರ್ನಾಟಕದಿಂದ ವಲಸೆ ಬಂದು ಇಲ್ಲಿ ವರ್ಷದ ಹಲವು ತಿಂಗಳು ಕಾರ್ಯನಿರ್ವಹಿಸುವ ಸಾವಿರಾರು ದರ್ಜಿಗಳು ಇದ್ದಾರೆ. ಇಲ್ಲಿ ಸಿದ್ಧವಾದ ಉಡುಪುಗಳನ್ನು ಸಗಟು ಮಾರಾಟಗಾರರಿಗೆ ಪೂರೈಸಲಾಗುತ್ತದೆ. ಅಂತೆಯೇ ಚರ್ಮದ ಜಾಕೆಟ್, ಬ್ಯಾಗ್, ವ್ಯಾಲೆಟ್, ಬೆಲ್ಟ್ ಕೂಡಾ ತಯಾರಾಗುವ ಈ ಪ್ರದೇಶ ಹಲವು ಡಿಸೈನರ್ ಬ್ರಾಂಡ್‌ಗಳ ಕಾರ್ಯಶಾಲೆ.

ನಗದು ಹಾಗೂ ವೇತನ ಇಲ್ಲದಿರುವುದರಿಂದ ಈಗ ಬಟ್ಟೆ ಅಥವಾ ಚರ್ಮದ ವಸ್ತುಗಳಿಗೆ ಬೇಡಿಕೆಯೇ ಇಲ್ಲ. ಬಹುತೇಕ ವಲಸಿಗರಿಗೆ ಬ್ಯಾಂಕ್ ಖಾತೆಗಳಿಲ್ಲ. ನಗದು ವಹಿವಾಟಿನಲ್ಲೇ ತೊಡಗಿಸಿಕೊಂಡಿದ್ದ ಇಂಥ ವಲಸಿಗರು ಕಂಗಾಲಾಗಿದ್ದಾರೆ.

ದಿನಕ್ಕೆ ಮೂರು ಸಾವಿರ ಉಡುಪುಗಳನ್ನು ಸಿದ್ಧಪಡಿಸಿ, 1-2 ಲಕ್ಷ ವಹಿವಾಟು ನಡೆಸುತ್ತಿದ್ದ ನಮ್ಮ ಸಂಸ್ಥೆ ಇದೀಗ ಮುಚ್ಚಿದೆ. ಇಂಥ ಶೇಕಡ 90ರಷ್ಟು ಘಟಕಗಳಿಗೂ ಇದೇ ಗತಿ ಎಂದು ತನ್-ಮನ್ ಡ್ರೆಸಸ್ ಮಾಲಕ ಬಬ್ಬೂ ಖಾನ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X