Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ತಾಲೂಕಿಗೆ ಸುಸಜ್ಜಿತ...

ಪುತ್ತೂರು ತಾಲೂಕಿಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ- ಶಾಸಕಿ ಶಕುಂತಳಾ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ11 Dec 2016 10:05 PM IST
share
ಪುತ್ತೂರು ತಾಲೂಕಿಗೆ  ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ- ಶಾಸಕಿ ಶಕುಂತಳಾ ಶೆಟ್ಟಿ

ಪುತ್ತೂರು, ಡಿ.11 :  ಯುವ ಸಮುದಾಯದ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲೂಕಿನಲ್ಲಿ ರೂ. 30 ಕೋಟಿ ವೆಚ್ಚದಲ್ಲಿ ನೂತನ ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಸ್ಥಳದ ಹುಡುಕಾಟ ನಡೆಸಲಾಗುತ್ತಿದೆ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. 

ಅವರು ಪುತ್ತೂರು ತಾಲೂಕು ಯುವಜನ ಒಕ್ಕೂಟದ ಆಶ್ರಯದಲ್ಲಿ ಕುದ್ಮಾರು ಶಾಲೆಯಲ್ಲಿ ನಡೆಯುತ್ತಿರುವ ತಾಲೂಕು ಯುವಜನ ಮೇಳದಲ್ಲಿ ಶನಿವಾರ ರಾತ್ರಿ ನಡೆದ ಸಾಧನಾ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ಯುವಕ-ಯುವತಿ ಮಂಡಲಗಳು ನಮ್ಮ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ. ತಾನೂ ಯುವತಿ ಮಂಡಲದೊಂದಿಗೆ ತೊಡಗಿಸಿಕೊಂಡ ಕಾರಣ ನಾನಿಂದು ಶಾಸಕಿಯಾದೆ ಎಂದು ನೆನಪಿಸಿಕೊಂಡ ಅವರು ಯುವಕ ಯುವತಿ ಮಂಡಲಗಳು ತಮ್ಮ ಪಂಚಾಯತ್‌ಗಳಲ್ಲಿ ತಮ್ಮ ಸಂಘದ ಕಚೇರಿಗಾಗಿ ನಿವೇಶನ ಮಂಜೂರುಗೊಳಿಸಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಕಟ್ಟಡ ನಿರ್ಮಿಸಿಕೊಳ್ಳುವಂತೆ ಸಲಹೆ ನೀಡಿದರು.

ಕುದ್ಮಾರಿನಲ್ಲಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಸರ್ವೇ ನಂಬರ್ 170/1ರಲ್ಲಿ 4.74 ಎಕ್ರೆ ಸರಕಾರಿ ಜಾಗವಿದ್ದು ಅದನ್ನು ಕ್ರೀಡಾಂಗಣವಾಗಿ ಅಭಿವೃದ್ಧಿಪಡಿಸಿಕೊಡುವಂತೆ ಸ್ಕಂದಶ್ರೀ ಯುವಕ ಮಂಡಲ ಕುದ್ಮಾರು ಇದರ ವತಿಯಿಂದ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಮನವಿ ಸಲ್ಲಿಸಲಾಗಿತ್ತು. ಯುವಕ ಮಂಡಲದ ಮನವಿಗೆ ಸ್ಪಂದಿಸಿದ ಶಾಸಕರು, ಕ್ರೀಡಾಂಗಣ ನಿರ್ಮಿಸುವಲ್ಲಿ ಅದೇನೆ ಅಡಚಣೆಗಳಿದ್ದರೂ ಅದನ್ನು ನಿವಾರಿಸಿ ಕ್ರೀಡಾಂಗಣ ಅಭಿವೃಧ್ದಿ ಪಡಿಸಿಕೊಡುತ್ತೇನೆಂದು ಭರವಸೆ ನೀಡಿದರು.

 ಯುವಜನ ಮೇಳ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು.

ನರಿಮೊಗರು ಪ್ರಖ್ಯಾತಿ ಯುವತಿ ಮಂಡಲ ಹಾಗೂ ನರಿಮೊಗರು ಯುವಕ ಮಂಡಲಕ್ಕೆ ಅತ್ಯುತ್ತಮ ಯುವ ಸಂಸ್ಥೆ, ನನ್ಯ ತುಡರ್ ಯುವಕ ಮಂಡಲಕ್ಕೆ ಪರಿಸರ ಜಾಗೃತಿ ಪ್ರಶಸ್ತಿ, ಸುನೀಲ್ ಕಾವು, ಗುರುಪ್ರಿಯಾ ನಾಯಕ್‌ರವರಿಗೆ ತಾಲೂಕಿನ ಅತ್ಯುತ್ತಮ ಯುವ ಪ್ರಶಸ್ತಿ, ಪತ್ರಕರ್ತ ಪ್ರವೀಣ್ ಚೆನ್ನಾವರ ಮತ್ತು ದೀಪಕ್ ಕುಲಾಲ್‌ರಿಗೆ ವೈಯಕ್ತಿಕ ಪರಿಸರ ಜಾಗೃತಿ ಪ್ರಶಸ್ತಿ, ರವಿಚಂದ್ರ ರೈ ಕುಂಬ್ರ ಮತ್ತು ಪರಮೇಶ್ವರ ದೇವಾಡಿಗರಿಗೆ ಉದಯೋನ್ಮುಖ ಯುವ ಕಲಾವಿದ ಪ್ರಶಸ್ತಿ, ಸದಾನಂದ ಆಚಾರ್ಯ ಮತ್ತು ಗೋಪಾಲಕೃಷ್ಣರಿಗೆ ಸಾಂಸ್ಕೃತಿಕ ಸೌರಭ ಪ್ರಶಸ್ತಿ, ಕೆಯ್ಯೂರು ಶ್ರೀದುರ್ಗಾ ಯುವಕ ಮಂಡಲದ ಮಾರ್ಗದರ್ಶಕ ಚಂದ್ರಶೇಖರ್ ರೈ ಇಳಂತಾಜೆ. ಸವಣೂರು ಮಹಿಳಾ ಮಂಡಲದ ಅಧ್ಯಕ್ಷೆ ಕುಸುಮಾ ಪಿ. ಶೆಟ್ಟಿ, ಕುದ್ಮಾರಿನ ಕ್ರೀಡಾ ಸಾಧಕಿ ಯಶಸ್ವಿನಿ ಖಂಡಿಗ ಹಾಗೂ ಶಾಂತಿಮೊಗರು ದೋಣಿ ದುರಂತದಲ್ಲಿ ಮಕ್ಕಳ ರಕ್ಷಣೆಗೆ ಮುಂದಾದ ಬಾಲಕೃಷ್ಣ ಅನ್ಯಾಡಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ, ಯುವಜನ ಒಕ್ಕೂಟದ ಗೌರವಾಧ್ಯಕ್ಷ ಶೈಲೇಶ್ ಅಂಬೆಕ್ಕಲ್, ತಾ.ಪಂ. ಉಪಾಧ್ಯಕ್ಷೆ ರಾಜೇಶ್ವರಿ ಕೆ., ತಾಲೂಕು ಯುವಜನ ಸಬಲೀಕರಣ ಹಾಗೂ ಕ್ರೀಡಾಧಿಕಾರಿ ಮಾಮಚ್ಚನ್ ಎಂ., ಶಾಂತಿಮೊಗರು ದೇವಸ್ಥಾನದ ಅನುವಂಶೀಯ ಮೊಕ್ತೇಸರ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಶಾಲಾ ಮುಖ್ಯಶಿಕ್ಷಕಿ ಜೂಲಿಯಾನ ಡಿ’ಸೋಜ, ಅರುಣ್ ಕುಮಾರ್ ಪುತ್ತಿಲ, ಲಕ್ಷಣ ಕರಂದ್ಲಾಜೆ, ಸ್ಕಂದ ಶ್ರೀ ಯುವಕ ಮಂಡಲದ ಅಧ್ಯಕ್ಷ ದೇವರಾಜ್ ನೂಜಿ, ಮಹಿಳಾ ಮಂಡಲ ಅಧ್ಯಕ್ಷೆ ರೇವತಿ ಕುದ್ಮಾರು, ಸ್ನೇಹಿತರ ಬಳಗದ ಅಧ್ಯಕ್ಷ ಸೀತಾರಾಮ ಬರೆಪ್ಪಾಡಿ, ರೆಡ್ ಬಾಯ್ಸಾ ತಂಡದ ಅಧ್ಯಕ್ಷ ಸತೀಶ್ ಹೊಸವಕ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿ, ಪ್ರಸ್ತಾವನೆಗೈದರು.

ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿ, ಸುಬ್ರಹ್ಮಣ್ಯ ಕರುಂಬಾರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X