Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಟೆರರ್ ಅಲರ್ಟ್' : ರಾಷ್ಟ್ರಪತಿ ಭವನದ...

'ಟೆರರ್ ಅಲರ್ಟ್' : ರಾಷ್ಟ್ರಪತಿ ಭವನದ ಸಮೀಪ 70 ವರ್ಷದ ಮೌಲ್ವಿ ಪೊಲೀಸ್ ವಶಕ್ಕೆ , ಬಳಿಕ ...

ವಾರ್ತಾಭಾರತಿವಾರ್ತಾಭಾರತಿ13 Dec 2016 12:16 PM IST
share
ಟೆರರ್ ಅಲರ್ಟ್ : ರಾಷ್ಟ್ರಪತಿ ಭವನದ ಸಮೀಪ 70 ವರ್ಷದ ಮೌಲ್ವಿ ಪೊಲೀಸ್ ವಶಕ್ಕೆ , ಬಳಿಕ ...

ಹೊಸದಿಲ್ಲಿ, ಡಿ.13: ಶನಿವಾರ ಸಂಜೆ ರಾಜಧಾನಿಯಲ್ಲಿ ಟೆರರ್ ಅಲರ್ಟ್ ಘೋಷಿಸಲಾಗಿ ಕಾರ್ಯಪ್ರವೃತ್ತರಾದ ಪೊಲೀಸರು ಹುಡುಕಾಟ ಅವರನ್ನು ರಾಷ್ಟ್ರಪತಿ ಭವನದ ಎದುರಿಗಿರುವ ಬಾಡಿಗಾರ್ಡ್ ಲೈನ್ಸ್‌ ಸಮೀಪದ ಅರಣ್ಯ ಪ್ರದೇಶದಲ್ಲಿರುವ ಮಝರ್‌ ಬಳಿ ಕೊಂಡೊಯ್ದಿತು. ಇಲ್ಲಿ 70 ವರ್ಷದ ಮೌಲವಿಯೊಬ್ಬ ಕಳೆದ 42 ವರ್ಷಗಳಿಂದ ವಾಸವಾಗಿದ್ದು, ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಮೌಲವಿ ಗಝಿ ನೂರುಲ್ ಹಸನ್ ಎಂಬ ಹೆಸರಿನ ಈ ಮೌಲ್ವಿ ತನ್ನನ್ನು ಇಸ್ಲಾಂ ಪ್ರಚಾರಕನೆಂದು ಪರಿಚಯಿಸಿಕೊಂಡಿದ್ದು, ತಾನು ಮಾಜಿ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರ ಶಿಕ್ಷಕನಾಗಿದ್ದೆನೆಂದು ಹೇಳಿಕೊಂಡಿದ್ದಾನೆ. ಈತನನ್ನು ವಶಪಡಿಸಿಕೊಂಡ ಪೊಲೀಸರು ಆತನನ್ನು ಸುಮಾರು ಏಳು ತಾಸುಗಳಿಗೂ ಹೆಚ್ಚು ಸಮಯ ವಿಚಾರಣೆ ನಡೆಸಿದ್ದರು. ನಂತರ ಆತ ತನ್ನ ಪಾಸ್ ಪೋರ್ಟ್, ಮತದಾರರ ಗುರುತು ಕಾರ್ಡ್, ವಿಳಾಸದ ದಾಖಲೆ ಹಾಗೂ ವಿದ್ಯುತ್ ಬಿಲ್‌ ಮುಂತಾದ ಸಾಕ್ಷ್ಯಗಳನ್ನುಒದಗಿಸಿದ ಬಳಿಕ ಆತನನ್ನು ಬಿಡುಗಡೆಗೊಳಿಸಲಾಯಿತು.

ಅರಣ್ಯದತ್ತ ಸಾಗುವ ಬಾಡಿಗಾರ್ಡ್ ಲೈನ್ಸ್ ಗೋಡೆಯನ್ನು ಹತ್ತುತ್ತಿದ್ದ ಹಸನ್ ನನ್ನು ಪೊಲೀಸ್ ಪೆಟ್ರೋಲಿಂಗ್ ವ್ಯಾನಿನ್ನಲ್ಲಿದ್ದ ಸಿಬ್ಬಂದಿ ನೋಡಿದ್ದರು. ಅರಣ್ಯದಲ್ಲಿ ಮಝರ್ ಒಂದರ ಇರುವಿಕೆಯ ಬಗ್ಗೆ ತಿಳಿಯದೇ ಇದ್ದ ಸುರಕ್ಷಾ ಸಿಬ್ಬಂದಿ ಹಿರಿಯಾಧಿಕಾರಿಗಳಿಗೆ ತಿಳಿಸಿದ್ದು, ಕೆಲವೇ ಗಂಟೆಗಳಲ್ಲಿ ಪೊಲೀಸರ ತಂಡವೊಂದು ಹಸನ್  ಎದುರಿಗಿತ್ತು  ಹಾಗೂ ಆತನನ್ನು ವಿಚಾರಣೆಗೆಂದು ವಶಕ್ಕೆ ತೆಗೆದುಕೊಂಡಿತ್ತು.

‘‘ನಾನು ಮನೆಯೊಳಗೆ ಹೋದಾಕ್ಷಣ ಪೊಲೀಸರು ಬಾಗಿಲು ಬಡಿಯಲಾರಂಭಿಸಿದ್ದು ಬಾಡಿಗಾರ್ಡ್ ಲೈನ್ಸ್ ನಲ್ಲಿ ನಾನೇಕೆಹಾಗೂ ಎಷ್ಟು ಸಮಯದಿಂದ ವಾಸವಾಗಿದ್ದೇನೆ ಎಂದು ಅವರು ನನ್ನನ್ನು ಪ್ರಶ್ನಿಸಿದ್ದರು. ಈ ರೀತಿ ಹಿಂದೆ ಯಾವತ್ತೂ ಆಗಿರಲಿಲ್ಲ’’ ಎಂದು ಮೌಲ್ವಿ ಅಲವತ್ತುಕೊಂಡಿದ್ದಾರೆ.

ಅರಣ್ಯದೊಳಗೆ ಮಝರ್ ಇರುವ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ ಹಾಗೂ ಅಲ್ಲಿಗೆ ಹೋಗಲು ಯಾವುದೇ ಗೇಟ್ ಕೂಡ ಇಲ್ಲದ ಕಾರಣ, ಗೋಡೆ ಹತ್ತಿಯೇ ಹೋಗಬೇಕಾಗುತ್ತದೆ. ಮಝರ್ ನಲ್ಲಿನ ಒಂದು ಕೋಣೆಯಲ್ಲಿ ತನ್ನ ಕೆಲವೇ ಕೆಲವು ಅನುಯಾಯಿಗಳಿಗೆ ಕುರ್ ಆನ್  ಪ್ರವಚನವನ್ನು ಕಳೆದ 42 ವರ್ಷಗಳಿಂದ ಹಸನ್ ನೀಡುತ್ತಿದ್ದಾರೆ.
 

ಈ ಘಟನೆಯ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದಾಗ ಇದೊಂದು ಸಾಮಾನ್ಯ ತಪಾಸಣೆಯಾಗಿದ್ದು, ವಿಐಪಿ ವಲಯವಾದ ಲುಟ್ಯನ್ಸ್ ದಿಲ್ಲಿಯಲ್ಲಿ ಆತ ಇರುವುದರಿಂದ ಆತನನ್ನು ವಶಪಡಿಸಿಕೊಳ್ಳಲಾಯಿತು. ಮೇಲಾಗಿ ಆತ ಗೋಡೆ ಹತ್ತುವುದನ್ನು ನೋಡಿದ್ದ ಪೊಲೀಸ್ ಸಿಬ್ಬಂದಿ ಸಂಶಯಗೊಂಡಿದ್ದರು ಎಂದು ಹಿರಿಯ ಅಧಿಕಾರಿಗಳು ವಿವರಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X