Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಳೆಯಿಂದ ಮೂರು ದಿನಗಳ ಕಾಲ...

ನಾಳೆಯಿಂದ ಮೂರು ದಿನಗಳ ಕಾಲ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಉಪಸ್ಥಿತಿ

ವಾರ್ತಾಭಾರತಿವಾರ್ತಾಭಾರತಿ13 Dec 2016 8:49 PM IST
share
ನಾಳೆಯಿಂದ ಮೂರು ದಿನಗಳ ಕಾಲ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಉಪಸ್ಥಿತಿ

ಹೊಸದಿಲ್ಲಿ,ಡಿ.13: ಚಳಿಗಾಲದ ಅಧಿವೇಶನದ ಇನ್ನುಳಿದಿರುವ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಉಪಸ್ಥಿತರಿರುತ್ತಾರೆ ಎಂದು ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಇಂದಿಲ್ಲಿ ತಿಳಿಸಿದರು. ಸಂಸತ್ತಿನ ಉಭಯ ಸದನಗಳ ಕಲಾಪಗಳಿಗೆ ವ್ಯತ್ಯಯವನ್ನುಂಟು ಮಾಡಲು ಪ್ರತಿಪಕ್ಷವು ಆಗಾಗ್ಗೆ ತನ್ನ ನಿಲುವನ್ನು ಬದಲಿಸುತ್ತಿದೆ ಎಂದು ಅವರು ಆರೋಪಿಸಿದರು.

ಪ್ರಧಾನಿಗಳು ದಿಲ್ಲಿಯಿಂದ ಹೊರಗಿದ್ದ ಸಂದರ್ಭವನ್ನು ಹೊರತುಪಡಿಸಿದರೆ ಅವರು ಪ್ರತಿದಿನ ಸಂಸತ್ತಿನಲ್ಲಿರುತ್ತಾರೆ. ಎಲ್ಲರಿಗಿಂತ ಮೊದಲು ಸಂಸತ್ತಿಗೆ ಆಗಮಿಸುವ ಅವರು ಅಲ್ಲಿಂದ ಕೊನೆಯವರಾಗಿ ನಿರ್ಗಮಿಸುತ್ತಾರೆ. ಅವರು ತನ್ನ ಕೋಣೆಯಲ್ಲಿ ಕುಳಿತುಕೊಂಡೇ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುತ್ತಿರುತ್ತಾರೆ. ಕೋರಿಕೆಯಿದ್ದಾಗ ಅವರು ಸದನಕ್ಕೆ ಆಗಮಿಸುತ್ತಾರೆ ಎಂದ ನಾಯ್ಡು, ಮುಂದಿನ ಮೂರುದಿನಗಳ ಕಾಲ ಪ್ರಧಾನಿ ಸಂಸತ್ತಿನಲ್ಲಿ ಉಪಸ್ಥಿತರಿರುತ್ತಾರೆಯೇ ಎಂಬ ಸುದ್ದಿಗಾರರ ನಿರ್ದಿಷ್ಟ ಪ್ರಶ್ನೆಗೆ ‘ಹೌದು’ ಎಂದು ಉತ್ತರಿಸಿದರು.

ನೋಟು ರದ್ದತಿ ಕುರಿತು, ಮತದಾನಕ್ಕೆ ಅವಕಾಶವಿರುವ ನಿಯಮದಡಿ ಚರ್ಚೆ ನಡೆಯಬೇಕು ಮತ್ತು ಆ ಸಂದರ್ಭ ಮೋದಿಯವರು ಸದನದಲ್ಲಿ ಉಪಸ್ಥಿತರಿರಬೇಕು ಎಂಬ ಪ್ರತಿಪಕ್ಷಗಳ ಆಗ್ರಹದ ಹಿನ್ನಲೆಯಲ್ಲಿ ನಾಯ್ಡು ಅವರ ಈ ಹೇಳಿಕೆ ಹೊರಗೆ ಬಿದ್ದಿದೆ.

ನ.16ರಂದು ಆರಂಭಗೊಂಡಾಗಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನವು ಈ ವರೆಗೆ ಹೆಚ್ಚುಕಡಿಮೆ ಯಾವುದೇ ಕಲಾಪಗಳನ್ನು ನಡೆಸಲು ಸಾಧ್ಯವಾಗದೆ ವ್ಯರ್ಥವಾ ಗಿದೆ. ಡಿ.14ರಿಂದ ಪುನರಾರಂಭಗೊಳ್ಳುವ ಅಧಿವೇಶನವು ಡಿ.16ರಂದು ಅಂತ್ಯಗೊಳ್ಳಲಿದೆ.

ನೋಟು ರದ್ದತಿ ಕುರಿತು ಚರ್ಚೆ ನಡೆಯಬೇಕೆಂದು ಸರಕಾರವು ಬಯಸುತ್ತಿದೆ ಎಂದು ಒತ್ತಿ ಹೇಳಿದ ನಾಯ್ಡು, ಪ್ರತಿಪಕ್ಷವು ಆಗಾಗ್ಗೆ ತನ್ನ ನಿಲುವನ್ನು ಬದಲಿಸುತ್ತಿದೆೆ. ನಿಯಮ 193ರಡಿ ಚರ್ಚೆಗೆ ಸ್ಪೀಕರ್ ಅನುಮತಿ ನೀಡಿದ್ದಾರೆ, ಆದರೆ ಈಗ ಪ್ರತಿಪಕ್ಷ ಮತ್ತೆ ಕಲಾಪಕ್ಕೆ ಅಡ್ಡಿಯನ್ನೊಡ್ಡುತ್ತಿದೆ. ಚರ್ಚೆ ಆರಂಭಗೊಂಡ ಬಳಿಕ ತನ್ನ ಬಳಿ ಯಾವುದೇ ಬಂಡವಾಳವಿಲ್ಲ ಎಂದು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಕ್ಕೆ ಜ್ಞಾನೋದಯವಾಗಿದೆ. ಹೀಗಾಗಿ ಸದನದಲ್ಲಿ ಪ್ರಧಾನಿ ಉಪಸ್ಥಿತರಿರಬೇಕೆಂದು ಒತ್ತಾಯಿಸುತ್ತಿದೆ ಎಂದು ಛೇಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X