Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಟಿ-ಚೆನ್ನಯರ ಮೂಲಸ್ಥಾನ ‘ಗೆಜ್ಜೆಗಿರಿ’...

ಕೋಟಿ-ಚೆನ್ನಯರ ಮೂಲಸ್ಥಾನ ‘ಗೆಜ್ಜೆಗಿರಿ’ ಯಲ್ಲಿ ಭಕ್ತರ ಸಮಾಲೋಚನಾ ಸಭೆ

ದೈವಗಳ ಸ್ಥಾನ ಪುನರುತ್ಥಾನ ಕಾರ್ಯಕ್ಕೆ ದಾನಿಗಳ ಸಹಕಾರ ಯಾಚಿಸಲು ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ13 Dec 2016 11:18 PM IST
share
ಕೋಟಿ-ಚೆನ್ನಯರ ಮೂಲಸ್ಥಾನ ‘ಗೆಜ್ಜೆಗಿರಿ’ ಯಲ್ಲಿ ಭಕ್ತರ ಸಮಾಲೋಚನಾ ಸಭೆ

ಪುತ್ತೂರು ,ಡಿ.13 : ತುಳುನಾಡಿನ ವೀರಪುರುಷರೆಂಬ ಐಸಿಹಾಸಿಕ ಹಿನ್ನಲೆಯುಳ್ಳ ಕೋಟಿ -ಚೆನ್ನಯರ ಮೂಲಸ್ಥಾನ ಕ್ಷೇತ್ರವಾದ ಪುತ್ತೂರು ತಾಲೂಕಿನ ಪಡುಮಲೆಯ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಭಾನುವಾರ ಭಕ್ತರ ಸಮಾಲೋಚನಾ ಸಭೆ ಕ್ಷೇತ್ರದ ಆನುವಂಶಿಕ ಮೊಕ್ತೇಸರ ಶ್ರೀಧರ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮೂಲ್ಕಿ ಯುವವಾಹಿನಿ, ಮೂಲ್ಕಿ ಬಿಲ್ಲವ ಸಂಘ ಮತ್ತು ಉಡುಪಿಯ ಬಿಲ್ಲವ ಸಮಾಜ ಬಾಂಧವರು ಸಭೆಯಲ್ಲಿ ಭಾಗವಹಿಸಿದ್ದರು. ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಕೋಟಿ ಚೆನ್ನಯ ಮೂಲಸ್ಥಾನ ಗರಡಿ, ಗುರು ಸಾಯನ ಬೈದ್ಯರು - ಮಾತೆ ದೇಯಿ ಬೈದ್ಯೆತಿ ಧರ್ಮ ಚಾವಡಿ, ಬೆರ್ಮೆರ್ ಗುಂಡ, ದೇಯಿ ಬೈದ್ಯೆತಿ ಮಹಾ ಸಮಾಧಿ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆ, ಆದಿ ದೈವ ಧೂಮಾವತಿ, ಕುಪ್ಪೆ ಪಂಜುರ್ಲಿ ಸಪರಿವಾರ ದೈವಗಳ ಸ್ಥಾನ ಪುನರುತ್ಥಾನ ಕಾರ್ಯಗಳು ನಡೆಯಲಿದ್ದು, ಇದಕ್ಕೆ ಭಕ್ತರ ಸರ್ವ ಸಹಕಾರ ಬೇಕು ಎಂದು ಶ್ರೀಧರ ಪೂಜಾರಿ ಅವರು ವಿನಂತಿಸಿಕೊಂಡರು.
ಕಳೆದ ಒಂದು ತಿಂಗಳ ಅವಧಿಯಲ್ಲಿ ಪುತ್ತೂರು, ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಮೂಡುಬಿದರೆ, ಕಾರ್ಕಳ, ಉಡುಪಿ, ಕಾಸರಗೋಡು, ಸುಳ್ಯ, ಮುಂಬೈ ಪ್ರದೇಶಗಳ ಭಕ್ತರ ತಂಡ ಭೇಟಿ ನೀಡಿ ಕ್ಷೇತ್ರದಲ್ಲಿ ಸಮಾಲೋಚನಾ ಸಭೆ ನಡೆಸಿದ್ದು, ಎಲ್ಲ ಕಡೆಯಿಂದಲೂ ಸಹಕಾರದ ಭರವಸೆ ಸಿಕ್ಕಿದೆ ಎಂದು ಅವರು ತಿಳಿಸಿದರು.

  ಮೂಲ್ಕಿ ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಕುವೆವೂರು ಅವರು ಮಾತನಾಡಿ, ಈಗಾಗಲೇ ಮೂಲ್ಕಿ ಸಂಘದಲ್ಲಿ ಗೆಜ್ಜೆಗಿರಿ ಕ್ಷೇತ್ರದ ಪುನರುತ್ಥಾನದ ಬಗ್ಗೆ ಸಭೆ ನಡೆಸಲಾಗಿದೆ. ಬಿಲ್ಲವರ ಮಹಾ ಮಂಡಲದಲ್ಲೂ ವಿಶೇಷ ಸಮಾಲೋಚನಾ ಸಭೆ ನಡೆಸಲಾಗಿದೆ. ಅದರ ಮುಂದಿನ ಭಾಗವಾಗಿ ನಾವು ಕ್ಷೇತ್ರಕ್ಕೆ ಬಂದಿದ್ದೇವೆ. ಕೋಟಿ - ಚೆನ್ನಯರು ಬದುಕಿನ ಬಹುಪಾಲನ್ನು ಕಳೆದ ಈ ಮನೆ, ಮಾತೆ ದೇಯಿ ಬೈದ್ಯೆತಿಗೆ ಪುನರ್ಜನ್ಮ ನೀಡಿದ ತಾಣವಾಗಿದೆ. ಮಾವ ಸಾಯನ ಬೈದ್ಯರ ಮನೆಯೂ ಇದೇ ಆಗಿರುವ ಕಾರಣ ಇದು ಕೋಟಿ - ಚೆನ್ನಯರ ಪಾಲಿಗೆ ಸ್ವಂತ ಮನೆ ಮಾತ್ರವಲ್ಲ, ಅವರ ಮೂಲಸ್ಥಾನವೂ ಆಗುತ್ತದೆ. ಹೀಗಾಗಿ ಸರ್ವ ಕೋಟಿ- ಚೆನ್ನಯ ಭಕ್ತರಿಗೆ ಇದು ಪರಮ ಪಾವನ ಕ್ಷೇತ್ರವಾಗಿದೆ. ಇಲ್ಲಿನ ಪುನರುತ್ಥಾನ ಕಾರ್ಯಕ್ಕೆ ಮೂಲ್ಕಿ ಸಂಘ ಸರ್ವ ರೀತಿಯ ನೆರವು ನೀಡುತ್ತದೆ ಎಂದರು.

ಯುವವಾಹಿನಿ ಅಧ್ಯಕ್ಷ ಚೇತನ್ ಕುಮಾರ್, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಮಾತನಾಡಿ, ಯುವ ವಾಹಿನಿಯ ಎಲ್ಲ ಘಟಕಗಳು ಗೆಜ್ಜೆಗಿರಿ ಕ್ಷೇತ್ರಕ್ಕೆ ಸರ್ವ ರೀತಿಯ ನೆರವು ನೀಡುವ ಭರವಸೆ ನೀಡಿವೆ. ನಮ್ಮ ಘಟಕವೂ ಕೈ ಜೋಡಿಸಲಿದೆ ಎಂದರು.

ಸಾಂಸ್ಕೃತಿಕ ಸಂಘಟಕ ಚಂದ್ರಶೇಖರ ಸುವರ್ಣ ಮೂಲ್ಕಿ ಅವರ ನೇತೃತ್ವದಲ್ಲಿ ಕ್ಷೇತ್ರಕ್ಕೆ ಭಕ್ತಿಪೂರ್ವಕ ಕಾಣಿಕೆ ಸಮರ್ಪಿಸಿ ಪ್ರಸಾದ ಪಡೆಯಲಾಯಿತು. ಕ್ಷೇತ್ರದ ಹಿರಿಯರಾದ ಲೀಲಾವತಿ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X