Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಏರ್ಪಡಿಸಿದ್ದ ಯಾಗದಲ್ಲಿ...

ಬಿಜೆಪಿ ಏರ್ಪಡಿಸಿದ್ದ ಯಾಗದಲ್ಲಿ ಪುರೋಹಿತರಿಗೆ ದಕ್ಷಿಣೆಯಾಗಿ ಹಳೆಯ ನೋಟುಗಳ ವಿತರಣೆ...!

ವಾರ್ತಾಭಾರತಿವಾರ್ತಾಭಾರತಿ13 Dec 2016 11:48 PM IST
share

ಚಂಡಿಗಡ,ಡಿ.13: ಬಿಜೆಪಿಯು ಸಂಘಟಿಸಿದ್ದ, ಒಂಭತ್ತು ದಿನಗಳ ಕಾಲ ನಡೆದ ಲಕ್ಷ ಚಂಡಿ ಮಹಾಯಾಗವು ಸೋಮವಾರ ಸಮಾರೋಪಗೊಂಡಿದ್ದು,ವೈದಿಕ ವಿಧಿಗಳನ್ನು ನಡೆಸಲು ಆಹ್ವಾನಿತರಾಗಿದ್ದ ಪುರೋಹಿತರು ತೀವ್ರ ಅಸಮಾಧಾನದೊಂದಿಗೆ ತಮ್ಮ ಊರುಗಳಿಗೆ ಮರಳಿದ್ದಾರೆ. ಕಾರಣ ಇವರಿಗೆಲ್ಲ ದಕ್ಷಿಣೆಯಾಗಿ ಹಳೆಯ 500 ಮತ್ತು 1,000 ರೂ.ನೋಟುಗಳನ್ನು ವಿತರಿಸಲಾಗಿತ್ತು.

ಉಜ್ಜಯಿನಿ, ವಾರಣಾಸಿ ಮತ್ತು ಮಥುರಾಗಳಿಂದ ಕರೆಸಲಾಗಿದ್ದ ಸುಮಾರು 2,000 ಪುರೋಹಿತರು ತಮ್ಮ ಆತಿಥೇಯರು ಕಪ್ಪುಹಣವನ್ನು ಬಳಸಿ ಯಾಗವನ್ನು ನೆರವೇರಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆಯನ್ನೂ ನಡೆಸಿದರು.
 ಭಿವಾನಿಯ ಸ್ಥಳೀಯ ಸಂತ ಸ್ವಾಮಿ ಮಹಾದೇವ ಅವರ ನೇತೃತ್ವದ ಲಕ್ಷ ಚಂಡಿ ಮಹಾಯಾಗ ಸಂಘಟನಾ ಸಮಿತಿಯು ಬಿಜೆಪಿಯ ಸಹಭಾಗಿತ್ವದೊಡನೆ ನಡೆಸಿದ ಯಾಗದಲ್ಲಿ ರಾಜ್ಯದ ಹಲವರು ಸಚಿವರು,ರಾಜ್ಯಪಾಲರು ಮತ್ತಿತರ ಗಣ್ಯರು ಭಾಗ ವಹಿಸಿದ್ದರು.
 ಪ್ರತಿಯೊಬ್ಬ ಪುರೋಹಿತರಿಗೂ 3,000 ರೂ.ನಿಂದ 5,000 ರೂ. ವರೆಗೆ ದಕ್ಷಿಣೆ ನೀಡಲಾಗಿತ್ತು. ಈ ಹಳೆಯ ನೋಟುಗಳನ್ನು ತಾವೇನು ಮಾಡುವುದು? ತಮ್ಮ ಬಳಿ ಊರಿಗೆ ಮರಳಲೂ ಹಣವಿಲ್ಲ ಎಂದು ಕ್ಯಾತೆ ತೆಗೆದಾಗ ಸಂಘಟಕರು ಅವರ ದಕ್ಷಿಣೆಯನ್ನು ಇನ್ನಷ್ಟು ಹೆಚ್ಚಿಸಿ ಊರಿಗೆ ಮರಳಲು ಬಸ್ ಟಿಕೆಟ್‌ಗಳ ವ್ಯವಸ್ಥೆ ಮಾಡಿದ್ದರು.
ಪುರೋಹಿತರಿಗೆ ಒಟ್ಟು 80 ಲ.ರೂ.ಗಳ ಹಳೆಯ ನೋಟುಗಳನ್ನು ದಕ್ಷಿಣೆಯ ರೂಪದಲ್ಲಿ ಹಂಚಲಾಗಿದೆ ಎಂದು ಸ್ಥಳದಲ್ಲಿದ್ದ ಮೂಲಗಳು ತಿಳಿಸಿದವು. ಆದರೆ ಸಂಘಟಕರಲೋರ್ವರಾಗಿರುವ ಹರ್ಯಾಣ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ರಿಷಿ ಪ್ರಕಾಶ ಶರ್ಮಾ ಅವರು, ಪ್ರತಿ ಸಂಘಟಕರಿಗೂ ಪುರೋಹಿತರನ್ನು ಕರೆತರುವ ಮತ್ತು ಅವರಿಗೆ ದಕ್ಷಿಣೆಯನ್ನು ನೀಡುವ ಜವಾಬ್ದಾರಿ ವಹಿಸಲಾಗಿತ್ತು. ಕೆಲವು ಪುರೋಹಿತರು ಊರಿಗೆ ಮರಳಲೂ ದುಡ್ಡಿಲ್ಲ ಎಂದು ದೂರಿಕೊಂಡಾಗಷ್ಟೇ ಹಳೆಯ ನೋಟುಗಳನ್ನು ನೀಡಿದ್ದು ನಮ್ಮ ಗಮನಕ್ಕೆ ಬಂದಿತ್ತು ಎಂದಿದ್ದಾರೆ.
ಅಷ್ಟಕ್ಕೂ ಅದರಲ್ಲಿ ತಪ್ಪೇನಿದೆ? ಬ್ಯಾಂಕುಗಳಲ್ಲಿ ಡಿ.30ರವರೆಗೂ ಅವು ನಡೆಯುತ್ತವೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X